ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Jul 8, 2019, 2:46 PM IST
ರಾಮದುರ್ಗ: ಪಟ್ಟಣದ ಶ್ರೀಪತಿನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹಾದೇವಪ್ಪ ಯಾದವಾಡ ಭೂಮಿಪೂಜೆ ನೆರವೇರಿಸಿದರು.
ರಾಮದುರ್ಗ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ಶ್ರಮಿಸುತ್ತಿದ್ದು, ಸ್ಥಳೀಯ ನಿವಾಸಿಗಳು ಪಕ್ಷಾತೀತವಾಗಿ ಸಹಕಾರದಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಅಂದಾಗ ಪಟ್ಟಣದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ಶ್ರೀಪತಿ ನಗರದಲ್ಲಿ ವಿವಿಧ ವಾರ್ಡ್ಗಳಲ್ಲಿ ಸುಮಾರು 25 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ತಮ್ಮ ವಾರ್ಡ್ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಗಮನ ಹರಿಸಿ ಗುತ್ತಿಗೆದಾರರೊಂದಿಗೆ ಸಹಕಾರದಿಂದ ವರ್ತಿಸಿ, ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವ ಮೂಲಕ ವಾರ್ಡ್ ನಿವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು. ಸಮಸ್ಯೆಗಳು ಅತಿಯಾಗಿದ್ದಲ್ಲಿ ತಮ್ಮ ಗಮನಕ್ಕೆ ತಂದಲ್ಲಿ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮಂಜುನಾಥ ರಾವಳ, ಮುಖಂಡರಾದ ನಾರಾಯಣಪ್ಪ ಯಾದವಾಡ, ಕರವೀರಪ್ಪ ಹೊನ್ನುಂಗರ, ವಿಠuಲ ಕೊಳ್ಳಿ, ನೀಲಕಂಠ ಘಂಟಿ, ಮುರ್ತೋಜಿ ಪೆಂಡಾರಿ, ಏಕನಾಥ ರಾವಳ, ಗುತ್ತಿಗೆದಾರ ಕಿತ್ತೂರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ