ಪ್ರವಾಹ ಸಂತೃಸ್ಥರಿಗೆ ಊಟ ನೀಡಲು ಹಣವಿಲ್ಲ,ಇದು ಸರಕಾರದ ವೈಫಲ್ಯ: ಸತೀಶ್ ಜಾರಕಿಹೊಳಿ
Team Udayavani, Oct 18, 2020, 1:32 PM IST
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಪ್ರಕೃತಿ ವಿಕೋಪದಿಂದ ಅಪಾರ ನಷ್ಟವಾದರೂ ಜಿಲ್ಲಾಡಳಿತ ಬಳಿ ಹಣ ಇಲ್ಲ. ಇದು ಬಿಜೆಪಿ ಸರಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪ ಮಾಡಿದರು.
ನಗರದ ಆರ್ ಟಿಒ ವೃತ್ತದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಅತೀ ಹೆಚ್ಚು ಸಚಿವರಿದ್ದರೂ ಯಾರ ಕೈಗೆ ಸಿಗುತ್ತಿಲ್ಲ.ನಾವು ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರಕಾರ ಅನುದಾನ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿರಾ ಹಾಗೂ ಆರ್ ಆರ್ ನಗರದ ಉಪಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಅವರು ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ದ. ರಾಜ್ಯ ಸರಕಾರದ ವಿರುದ್ದ ಇರುವ ಸಿಟ್ಟನ್ನು ಈ ಚುನಾವಣೆಯಲ್ಲಿ ಜನರು ತೋರಿಸುತ್ತಾರೆ ಎಂದರು.
ಇದನ್ನೂ ಓದಿ:ಅ.21ರಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಬಿಎಸ್ ವೈ ವೈಮಾನಿಕ ಸಮೀಕ್ಷೆ
ಬೆಳಗಾವಿಯ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕ್ಯಾಂಟೀನ್ ಉದ್ಘಾಟಿಸಿದ ಅವರು ಕಾಂಗ್ರೆಸ್ ಕಚೇರಿಗೆ ಬರುವ ಕಾರ್ಯಕರ್ತರಿಗೆ ಹಾಗೂ ಸಾಮಾನ್ಯ ಜನರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕ್ಯಾಂಟೀನ್ ಆರಂಭಿಸಿದೆ ಎಂದರು.
ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ