ರಸ್ತೆ ನಿರ್ಮಾಣ ತಡೆದು ಸ್ಥಳದಲ್ಲೇ ರೈತರ ಠಿಕಾಣಿ

•ಹಲಗಾ-ಮಚ್ಛೆ ರಸ್ತೆಗೆ ಭೂಮಿ ಕೊಡಲ್ಲ ಎಂದ ರೈತರು•ಫಲವತ್ತಾದ ಭೂಮಿಗೆ ಕನ್ನ ಹಾಕಿದ ಪ್ರಾಧಿಕಾರ: ಆಕ್ರೋಶ

Team Udayavani, May 3, 2019, 2:10 PM IST

belegavi-3-..

ಬೆಳಗಾವಿ: ಹಲಗಾ-ಮಚ್ಛೆ ರಸ್ತೆ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಜಮೀನು ಸ್ವಾಧೀನ ಪಡಿಸಿಕೊಳ್ಳಲು ಮುಂದಾದಾಗ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: ತಾಲೂಕಿನ ಹಲಗಾದಿಂದ ಮಚ್ಛೆವರೆಗೆ ರಸ್ತೆ ನಿರ್ಮಾಣಕ್ಕಾಗಿ ಫಲವತ್ತಾದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗುರುವಾರ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳದಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಬುಧವಾರದಿಂದಲೇ ಜಮೀನು ಸಮತಟ್ಟು ಮಾಡಲು ಪ್ರಾಧಿಕಾರ ಸಿಬ್ಬಂದಿ ಆಗಮಿಸಿದ್ದರು. ಬುಧವಾರ ರೈತರು ಜಮಾಯಿಸಿ ಎಲ್ಲರನ್ನೂ ವಾಪಸು ಕಳುಹಿಸಿದ್ದರು. ಮತ್ತೆ ಗುರುವಾರ ಬೆಳಗ್ಗೆ ಬಂದು ಕಾಮಗಾರಿ ಆರಂಭಿಸುತ್ತಿದ್ದಾಗ ರೈತರು ಬಂದು ಪ್ರಾಧಿಕಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಳಗಾವಿಯಿಂದ ಗೋವಾ ಗಡಿವರೆಗೆ ಒಟ್ಟು 84 ಕಿ.ಮೀ. ರಸ್ತೆ ನಿರ್ಮಾಣಕ್ಕೆ 2011ರಲ್ಲಿ ಪ್ರಾಧಿಕಾರ ನಿರ್ಣಯ ತೆಗೆದುಕೊಂಡಿದೆ. ಅದರಲ್ಲಿ ಒಟ್ಟು ಹಲಗಾ, ಬೆಳಗಾವಿ, ಹಳೇ ಬೆಳಗಾವಿ, ವಡಗಾಂವ, ಶಹಾಪುರ, ಅನಗೋಳ, ಮಜಗಾಂವ, ಮಚ್ಛೆ ಗ್ರಾಮಗಳ ಫಲವತ್ತಾದ ಭೂಮಿ ಬರುತ್ತವೆ. ಈ ಹಿಂದೆ 135 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳುವುದಾಗಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿತ್ತು. ಈಗ ಮತ್ತೆ 25 ಎಕರೆ ಜಮೀನು ಹೆಚ್ಚುವರಿ ಮಾಡಿ 160 ಎಕರೆ ಜಮೀನನ್ನು ರಸ್ತೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಪ್ರಾಧಿಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಧಿಕಾರದ ನೀಲ ನಕ್ಷೆಯಲ್ಲಿ ಗುರುತಿಸಿದ ಈ ಎಲ್ಲ ಹಳ್ಳಿಗಳ ವ್ಯಾಪ್ತಿಯ ಒಟ್ಟು 12.5 ಕಿ.ಮೀ. ರಸ್ತೆ ಮಾರ್ಗ ಗುರುತಿಸಲಾಗಿದೆ. 8ಕ್ಕೂ ಹೆಚ್ಚು ಜೆಸಿಬಿ ಮೂಲಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಹಲಗಾದಿಂದ ಈವರೆಗೆ 3.5 ಕಿ.ಮೀ. ಜಾಗವನ್ನು ತೆರವು ಮಾಡಿ ಸಮತಟ್ಟು ಮಾಡಿಕೊಂಡಿದ್ದಾರೆ. ಅಷ್ಟರೊಳಗೆ ಸ್ಥಳಕ್ಕೆ ಧಾವಿಸಿದ ರೈತರು ಅಧಿಕಾರಿಗಳ ವಿರುದ್ಧ ಹರಿಹಾಯ್ದು, ಕಾಮಗಾರಿ ಆದೇಶ ಪ್ರತಿ ತೋರಿಸಿ ಕೆಲಸ ಆರಂಭಿಸಬೇಕು ಎಂದು ಪಟ್ಟು ಹಿಡಿದರು. ಆದರೆ ಪ್ರಾಧಿಕಾರ ಅಧಿಕಾರಿಗಳು ಪ್ರತಿ ತೋರಿಸದೇ ಕಾಮಗಾರಿ ಆರಂಭಿಸಲು ಮುಂದಾದರು. ಅಧಿಕಾರಿಗಳ ಬಳಿ ಕೆಲಸದ ಆದೇಶ ಪ್ರತಿ ಇಲ್ಲದ್ದನ್ನು ಮನಗಂಡ ರೈತರು ಕೆಲಸ ತಡೆ ಹಿಡಿದರು.

ಇಲ್ಲಿಯ ರೈತರು ಅತೀ ಬಡವರಾಗಿದ್ದು, ಒಂದು ಎಕರೆಕ್ಕಿಂತಲೂ ಕಡಿಮೆ ಜಮೀನು ಹೊಂದಿದ್ದಾರೆ. ಇದನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಈಗ ಇದ್ದ 20-25 ಗುಂಟೆ ಜಮೀನು ಕಸಿದುಕೊಳ್ಳಲು ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ರೈತರು ಬೀದಿಗೆ ಬರುವುದು ಖಚಿತ. ಹೀಗಾಗಿ ನಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಬಾರದು. ಫಲವತ್ತಾದ ಭೂಮಿಯನ್ನು ನಾವು ಕೊಡುವುದಿಲ್ಲ ಎಂದು ರೈತರ ಸುಭಾಷ ಚೌಗುಲೆ, ಮಹಾವೀರ ಹಣಮನ್ನವರ, ಕೃಷ್ಣಾ ಕಂಗ್ರಾಳಕರ, ಅಜಿತ ಕರಾಡ ಪಟ್ಟು ಹಿಡಿದರು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.