ಎರವಲು ಸೇವೆಗೆ ಬ್ರೇಕ್‌ ಹಾಕಲು ಕಠಿಣ ನಿಯಮ: ಸಿಎಂ


Team Udayavani, Dec 22, 2022, 11:00 PM IST

tdy-20

ಸುವರ್ಣ ವಿಧಾನಸೌಧ: ಸರ್ಕಾರಿ ನೌಕರರು ಅಂತರ್‌ ಇಲಾಖೆಗಳಿಗೆ ಸಮಾನಾಂತರ ಹುದ್ದೆಗಳಿಗೆ ಎರವಲು ಸೇವೆ (ಡೆಪ್ಯೂಟೇಶನ್‌) ಅರಸಿ ಹೋಗುವುದನ್ನು ತಡೆಯಲು ಕಠಿಣ ನಿಯಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿ, ಸಂಕಷ್ಟದಲ್ಲಿರುವ ನೌಕರರಿಗೆ ಅನುಕೂಲವಾಗಲು ಮಾಡಿದ ಸಣ್ಣ ಕಿಟಕಿಯಲ್ಲೇ ಎಲ್ಲ ನೌಕರರು ತೂರುತ್ತಿದ್ದಾರೆ. ಡೆಪ್ಯೂಟೇಶನ್‌ ಯಾರಿಗೆ ಕೊಡಬೇಕು, ಯಾವಾಗ ಕೊಡಬೇಕು, ಅವಧಿ ಎಷ್ಟು? ಎಂಬೆಲ್ಲ ವಿಚಾರಗಳು ಇಲ್ಲವೇ ಇಲ್ಲವಾಗಿವೆ. ಅಧಿಕಾರಿಗಳು ಕೂಡ ತಮ್ಮ ಅನುಕೂಲಕ್ಕಾಗಿ ಅವಧಿ ವಿಸ್ತರಣೆ ಮಾಡಿಕೊಳ್ಳುತ್ತ ಸಾಗಿದ್ದು ನನ್ನ ಗಮನಕ್ಕೂ ಬಂದಿದೆ. ಪೊಲೀಸ್‌ ಇಲಾಖೆಯವರು ನೋಂದಣಿ ಇಲಾಖೆಗೆ ಕೇಳುತ್ತಾರೆ ಎಂದರು.

ಮಧ್ಯ ಪ್ರವೇಶಿಸಿದ ಭಂಡಾರಿ, ಒಂದೊಂದು ಇಲಾಖೆಯಲ್ಲಿ ನುರಿತವರು ಇನ್ನೊಂದು ಇಲಾಖೆಗೆ ಹೊದರೆ ಉತ್ತಮ ಸೇವೆ ಅಸಾಧ್ಯ ಹೀಗಾಗಿ ಎರವಲು ಸೇವೆಗೆ ಕೂಡಲೇ ಬ್ರೇಕ್‌ ಹಾಕಬೇಕು ಎಂದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಶು ಸಂಗೋಪನ ಇಲಾಖೆಯಲ್ಲಿ ಹುದ್ದೆಗಳು ಮೊದಲೇ ಖಾಲಿ ಇವೆ. ಇಲ್ಲಿಯವರು ಬೇರೆ ಇಲಾಖೆಗೆ ಹೋಗದಂತೆ ನಾನೇ ಖುದ್ದು ಮುತುವರ್ಜಿ ವಹಿಸಿದ್ದೇನೆ. ಶಾಸಕರು ಕೂಡ ಯಾವುದೇ ಕಾರಣಕ್ಕೂ ಇಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಮೇಲೆ ಒತ್ತಡ ತರಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.

ವರ್ಷದಲ್ಲಿ ಒಂದು ಲಕ್ಷ ಹುದ್ದೆಗಳ ಭರ್ತಿ :

ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಪೈಕಿ ಒಂದು ವರ್ಷದ ಅವಧಿಯಲ್ಲಿ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜೆಡಿಎಸ್‌ ಸದಸ್ಯ ಸಿ.ಎನ್‌.ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 7,60,000 ಹುದ್ದೆಗಳಿದ್ದು, 5,11,000 ಭರ್ತಿ ಇವೆ. ಇನ್ನುಳಿದ 2,53,000 ಹುದ್ದೆಗಳು ಖಾಲಿ ಇದ್ದು ಈ ಪೈಕಿ ಜರೂರು ತುಂಬಲೇಬೇಕಾಗಿರುವ ಹುದ್ದೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಳೆದ ಬಜೆಟ್‌ನಿಂದ ಈ ವರ್ಷದ ಬಜೆಟ್‌ ಅವಧಿಯಲ್ಲಿ ಒಟ್ಟು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. 11 ಸಾವಿರ ಸಫಾಯಿ ಕರ್ಮಚಾರಿಗಳ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ. ಹೆಚ್ಚುವರಿಯಾಗಿ ಮತ್ತೆ 12 ಸಾವಿರ ಸಫಾಯಿ ಕರ್ಮಚಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುವುದು. ಇಷ್ಟು ದೊಡ್ಡ ಮಟ್ಟದಲ್ಲಿ ಈ ಹಿಂದೆ ಯಾವ ಸರ್ಕಾರದಲ್ಲಿಯೂ ನೇಮಕಾತಿ ನಡೆದಿಲ್ಲ ಎಂದು ಹೇಳಿದರು.

ಆರ್ಥಿಕ ಬಲ ಬಂದರೆ ಗೌರವ ಧನ ಇನ್ನಷ್ಟು ಹೆಚ್ಚಳ :

ಸುವರ್ಣ ವಿಧಾನಸೌಧ: ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವ ಧನವನ್ನು ಸರ್ಕಾರಕ್ಕೆ ಇನ್ನಷ್ಟು ಆರ್ಥಿಕ ಬಲ ಬಂದ ನಂತರ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಎಂ.ಎಲ್‌.ಅನಿಲ್‌ ಕುಮಾರ ಪ್ರಶ್ನೊತ್ತರ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಗ್ರಾ.ಪಂ.ಮಟ್ಟದಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆಗೆ ಬಲ ತುಂಬಲು ಮತ್ತು ಗ್ರಾ.ಪಂ.ಸದಸ್ಯರಿಗೆ ಗೌರವ ಕೊಡಲು ಆವರಿಗೆ ನೀಡುವ ಗೌರವ ಧನವನ್ನು ದ್ವಿಗುಣಗೊಳಿಸಿದ್ದೇನೆ. ಅಧ್ಯಕ್ಷರಿಗೆ ಮಾಸಿಕ 6,000, ಉಪಾಧ್ಯಕ್ಷರಿಗೆ ಮಾಸಿಕ 4000 ಹಾಗೂ ಸದಸ್ಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.