ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಭಾಗಿ
ಶಾಲೆ ಬಿಟ್ಟ ಮಕ್ಕಳ ಮಾಹಿತಿಗೆ ಸಮೀಕ್ಷೆ
Team Udayavani, Feb 19, 2021, 3:54 PM IST
ಚಿಕ್ಕೋಡಿ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ, ಅವರನ್ನು ಶಾಲಾ ಮುಖ್ಯವಾಹಿನಿಗೆ ಕರೆತಂದು ಸಾಕ್ಷರತೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಈಗಾಗಲೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯದಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿಗಳ ಮೂಲಕ ಶಾಲೆ ಬಿಟ್ಟ ಮಕ್ಕಳ ಗುರ್ತಿಸುವ ಸಮೀಕ್ಷೆ ಕಾರ್ಯ ಆರಂಭವಾಗಿದೆ.
ರಾಜ್ಯದ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಮೂಲಕ ಸಮೀಕ್ಷೆ ಕಾರ್ಯ ನಡೆಸಿದೆ. ಶಾಲೆ ಬಿಟ್ಟ ಮಕ್ಕಳನ್ನು ಹೇಗೆ ಗುರ್ತಿಸಬೇಕೆಂದು ಮೊಬೈಲ್ ಆ್ಯಪ್ ಸಿದ್ಧಪಡಿಸಿದೆ. ಸ್ಥಳೀಯ ಸಂಸ್ಥೆಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಮಕ್ಕಳ ಕುರಿತು ಆ್ಯಪ್ ದಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ, ಗೋಕಾಕ, ಮೂಡಲಗಿ ಸೇರಿ ಎಂಟು ವಲಯಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಗುರ್ತಿಸುವ ಸಮೀಕ್ಷೆ ಜೋರಾಗಿ ನಡೆದಿದೆ. ಪಾಲಕರು ಸಮರ್ಪಕ ಮಾಹಿತಿ ನೀಡಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಶಾಲೆಯಿಂದ ಹೊರಗುಳಿಯುವ ಕಾರಣಗಳು: ಶಾಲೆ ಬಿಟ್ಟ ಮಕ್ಕಳನ್ನು ಗುರ್ತಿಸುವ ಸಮೀಕ್ಷೆ ಕಾರ್ಯದಲ್ಲಿ ಸರ್ಕಾರ ಮೊಬೆ„ಲ್ ಆ್ಯಪ್ದಲ್ಲಿ ಕೆಲವೊಂದು ಕಾರಣ ಕೇಳಿದೆ. ಶಾಲೆ ದೂರವಿರುವುದು, ಸ್ವಂತ ಮನೆ ಕೆಲಸ, ಬೇರೆಯವರ ಮನೆಕೆಲಸ, ಇತರೆ ದುಡಿಮೆ ಕೆಲಸದಲ್ಲಿ ತೊಡಗಿಕೊಳ್ಳುವುದು, ಮದುವೆಯಾಗಿರುವುದು, ಹೆಣ್ಣು ಮಗು ಪ್ರೌಢಾವಸ್ಥೆಗೆ ಬಂದಿರುವುದು, ಶಾಲಾ ಪರಿಸರ ಆಕರ್ಷಿಣೆಯವಾಗಿಲ್ಲದಿರುವುದು, ವಲಸೆ ಜೀವನ, ಶಿಕ್ಷಕರ ಭಯ, ಬಾಲಕಾರ್ಮಿಕರಾಗಿರುವುದು, ಪೋಷಕರ ನಿರಾಸಕ್ತಿ ಸೇರಿದಂತೆ ಹಲವು ಕಾರಣ ಕೇಳಿದೆ. ಸಮೀಕ್ಷೆಗೆ ಹೋದ ಸಿಬ್ಬಂದಿಗಳು ಮೊಬೈಲ್ ಅಪ್ಲೀಕೇಶನ್ದಲ್ಲಿ ಸಮರ್ಪಕ ಮಾಹಿತಿ ಪಡೆಯಬೇಕಿದೆ.
ಶಾಲೆ ಬಿಟ್ಟ ಮಕ್ಕಳ ಬಗ್ಗೆ ವಿಶೇಷ ಗುರ್ತಿಸುವ ಸ್ಥಳಗಳು: ಹೋಟೆಲ್, ಛತ್ರ, ಚಿತ್ರಮಂದಿರ, ಇಟ್ಟಿಗೆ ತಯಾರಿಕೆ ಘಟಕ, ಸಣ್ಣ ಕಾರ್ಖಾನೆಗಳು, ಪುರಿಭಟ್ಟಿ, ತೋಟಗಾರಿಕೆ ಪ್ರದೇಶ, ಕ್ವಾರಿ, ರಸ್ತೆ ಕಾಮಗಾರಿ ಸ್ಥಳ, ಬುಡಕಟ್ಟು ಪ್ರದೇಶ, ಧಾರ್ಮಿಕ ಕೇಂದ್ರ, ಬಸ್ ಮತ್ತು ರೈಲು ನಿಲ್ದಾಣ, ಅನಾಥಾಶ್ರಮ, ಕಟ್ಟಡ ಕಾಮಗಾರಿ ನಡೆಯುವ ಸ್ಥಳಗಳಿಗೆ ಸಿಬ್ಬಂದಿಗಳು ಭೇಟಿ ನೀಡಿ ಸಮೀಕ್ಷೆ ಕಾರ್ಯ ನಡೆಸಲು ಸರ್ಕಾರ ಸೂಚಿಸಿದೆ.
ಶಾಲೆ ಬಿಟ್ಟ ಮಕ್ಕಳ ಕುರಿತು ಸ್ಥಳೀಯ ಸಂಸ್ಥೆಯ ಸಿಬ್ಬಂದಿಗಳು ನಡೆಸಿದ ಸಮೀಕ್ಷೆ ಕಾರ್ಯದಲ್ಲಿ ಮೊಬೈಲ್ ಅಪ್ಲೀಕೇಶನ್ದಲ್ಲಿ ದಾಖಲು ಮಾಡಿದ ನಿಖರ ಮಾಹಿತಿಯನ್ನು ದಿನಂಪ್ರತಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಸಮೀಕ್ಷೆ ಕಾರ್ಯ ಮುಗಿದ ಬಳಿಕ ಮಾಹಿತಿ ಶಿಕ್ಷಣ ಇಲಾಖೆಗೆ ರವಾನೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ