ಬಸ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ
Team Udayavani, Nov 9, 2019, 12:16 PM IST
ಚನ್ನಮ್ಮ ಕಿತ್ತೂರು: ಹೊನ್ನಾಪುರ, ಉಗರಖೋಡ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಿತ್ತೂರು ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರ ವಹಿವಾಟಿಗೆ ಆಗಮಿಸುವ ಜನರಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದರಿಂದ ಸಮಸ್ಯೆಯಾಗುತ್ತದೆ. ಇಲ್ಲಿರುವ ಸಮಸ್ಯೆ ಕುರಿತು ಅನೇಕ ಬಾರಿ ಸಾರಿಗೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಪ್ರತಿದಿನ ಮಾರ್ಗಕ್ಕೆ ಹೊಂದಿಸಿದ ಬಸ್ಗಳನ್ನು ಬೈಲಹೊಂಗಲ ಡಿಪೋದಿಂದ ಬಿಡುತ್ತಿಲ್ಲ. ಒಂದು ದಿನ ಬಸ್ ಬಂದರೆ ಇನ್ನೊಂದು ದಿನ ಬಸ್ಗಾಗಿ ಪರಿದಾಡುವ ಸ್ಥಿತಿ ಇಲ್ಲಿದೆ.
ಜೊತೆಗೆ ಬಸ್ ಸಂಚಾರದ ಕುರಿತು ಕಿತ್ತೂರು ಬಸ್ ನಿಲ್ದಾಣದ ಅಧಿಕಾರಿಗಳನ್ನು ವಿಚಾರಿಸಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಲ್ಲದೇ ಪ್ರಯಾಣಿಕರ ಕಾಟ ಹೆಚ್ಚಾದರೆ ನಿಯಂತ್ರಣಾಧಿಕಾರಿ ಕೊಠಡಿಗೆ ಬೀಗ ಹಾಕಿ ಅಲ್ಲಿಂದ ಕಾಲ್ಕಿಳುತ್ತಾರೆ ಎಂದು ಆರೋಪಿಸಿದರು. ನಂತರ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ತೊಂದರೆ ಆಲಿಸಿ ಸಂಬಂಧ ಪಟ್ಟ ಅಧಿ ಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ಹೊನ್ನಾಪುರ ಗ್ರಾಮಕ್ಕೆ ಬಸ್ ಬಿಡುವಂತೆ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಹೊನ್ನಾಪುರ, ಉಗರಖೋಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ