ಸಬ್ ಟೆಂಡರ್ ಇದ್ರೆ ಕಪ್ಪು ಪಟ್ಟಿಗೆ
•ಗುಣಮಟ್ಟದ ಕೆಲಸ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಖಾದರ್
Team Udayavani, Jul 6, 2019, 10:24 AM IST
ಬೆಳಗಾವಿ: ನಗರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಸಚಿವ ಯು.ಟಿ. ಖಾದರ್.
ಬೆಳಗಾವಿ: ಸ್ಮಾರ್ಟ್ಸಿಟಿ ಯೋಜನೆಯಡಿ ಕಾಮಗಾರಿಗಳ ಸಬ್ ಟೆಂಡರ್ಗೆ ಅವಕಾಶ ಇಲ್ಲ. ಆದರೆ ಸಬ್ ಟೆಂಡರ್ ಪಡೆದು ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಇನ್ನು ಮುಂದೆ ಎಲ್ಲಿಯೂ ಟೆಂಡರ್ ಹಾಕದಂತೆ ನೋಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡ ಸಚಿವರು, ಟೆಂಡರ್ ಪಡೆದು ಬೇರೆಯವರ ಕಡೆಯಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಗುತ್ತಿಗೆದಾರರ ಮಾಹಿತಿ ಪಡೆದುಕೊಳ್ಳಬೇಕು. ಗುಣಮಟ್ಟದ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳಬೇಕು. ಸಬ್ ಗುತ್ತಿಗೆದಾರರು ನೇಮಿಸಿರುವುದು ಖಾತ್ರಿಯಾದರೆ ಅವರ ಮೇಲೆ ಕೇಸು ದಾಖಲಿಸಿ ಎಂದು ಸೂಚನೆ ನೀಡಿದರು. ಸ್ಥಳೀಯರಿಗೆ ಗುತ್ತಿಗೆ ನೀಡಬೇಕು ಎಂದು ಸೂಚನೆ ನೀಡಿದರು.
ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ಸ್ಮಾರ್ಟ್ ಸಿಟಿಯಲ್ಲಿ ನಾಲ್ಕೈದು ಪ್ಯಾಕೇಜ್ಗಳಲ್ಲಿ ಸಬ್ ಗುತ್ತಿಗೆದಾರರೇ ಕಾಮಗಾರಿ ನಡೆಸಿದ್ದಾರೆ. ಇದರಿಂದ ಕಳಪೆ ಕಾಮಗಾರಿ ನಡೆಯುತ್ತಿದ್ದು, ಇದರ ಬಗ್ಗೆ ಯಾವ ಅಧಿಕಾರಿಗಳೂ ಕ್ರಮ ಕೈಗೊಂಡಿಲ್ಲ. ನಗರದ ಕಾಂಗ್ರೆಸ್ ರಸ್ತೆಯಲ್ಲಿ ನಿರ್ಮಾಣವಾದ ಹೊಸ ರಸ್ತೆಯೇ ಬಿರುಕು ಬಿದ್ದಿದೆ ಎಂದು ಸಚಿವರ ಗಮನಕ್ಕೆ ತಂದರು.
ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರ ಉದಯಶಿವಕುಮಾರ ಬೆಳಗಾವಿಗೆ ಬಂದೇ ಇಲ್ಲ. ನಾಲ್ಕು ಪ್ಯಾಕೇಜ್ ಕಾಮಗಾರಿ ಇವರ ಬಳಿ ಇದೆ. ಕಾಮಗಾರಿ ಹೇಗೆ ನಡೆದಿದೆ ಎಂಬುದನ್ನು ವಿಚಾರಿಸಿದರೆ ಹೈದರಾಬಾದ್ನಲ್ಲಿ ಇರುವುದಾಗಿ ಹೇಳುತ್ತಾರೆ. ಹೀಗಾಗಿ ಕಾಮಗಾರಿ ಮುಗಿಯುವುದಾದರೂ ಯಾವಾಗ ಎಂದು ಪ್ರಶ್ನಿಸಿದರು.
ಸಚಿವ ಯು.ಟಿ. ಖಾದರ್ ಮಾತನಾಡಿ, ಈಗಾಗಲೇ ಎಲ್ಲ ಮನೆಗಳಲ್ಲಿಯೂ ಮಳೆ ನೀರು ಸಂಗ್ರಹ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಕೇವಲ ಒಂದೇ ಉದ್ಯಾನವನದಲ್ಲಿ ಮಳೆ ನೀರು ಸಂಗ್ರಹ ಮಾಡಿದರೆ ಹೇಗೆ. ನಗರದ ಎಲ್ಲ ಉದ್ಯಾನವನಗಳಲ್ಲೂ ಮಾಡಬೇಕು. ನೂತನ ಬಸ್ ಶೆಲ್ಟರ್ಗಳಲ್ಲಿ ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯುವಂತಾಗಬೇಕು. ಎಲ್ಲೆಲ್ಲಿ ನಿರ್ಮಾಣ ಆಗಬೇಕು ಎಂಬುದನ್ನು ಪೊಲೀಸ್ ಇಲಾಖೆ ಅವರೊಂದಿಗೆ ಮಾತನಾಡಿ, ಬಸ್ ಶೆಲ್ಟರ್ ಮಾಡಬೇಕು ಎಂದು ಸೂಚನೆ ನೀಡಿದರು.
ಸ್ಮಾರ್ಟ್ಸಿಟಿಯಲ್ಲಿ ಭೂಪಾಲ್ನಲ್ಲಿ ಮಾಡಿರುವ ಸೈಕಲ್ ಟ್ರ್ಯಾಕ್ ಆದಷ್ಟು ಬೇಗ ನಿರ್ಮಿಸಬೇಕು. ನಗರದಲ್ಲಿ ಡಿಜಿಟಲ್ ನಾಮಫಲಕಗಳಲ್ಲಿ ಜಾಹೀರಾತು ಬರುವಂತೆ ಮಾಡಿ. ಇದರಿಂದ ಆದಾಯ ಸಂಗ್ರಹವೂ ಆಗುತ್ತದೆ ಎಂದು ಸಲಹೆ ನೀಡಿದ ಸಚಿವ ಖಾದರ್, ರಸ್ತೆ ಪಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು, ಅದು ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿದೆಯಾ ಎಂದು ಪ್ರಶ್ನಿಸಿದರು.
ಸ್ಮಾರ್ಟ್ ಸಿಟಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ರುಕ್ಕಯ್ಯ ಹಡಗಲಿ ಅವರು ಸ್ಮಾರ್ಟ್ ಸಿಟಿಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು, ಮುಕ್ತಾಯಗೊಂಡ ಕಾರ್ಯದ ಬಗ್ಗೆ ವಿವರ ನೀಡಿದರು. ಜತೆಗೆ ಯಾವ ಕಾಮಗಾರಿಗೆ ಎಷ್ಟು ವೆಚ್ಚ ಮಾಡಲಾಗಿದೆ ಎಂಬ ಕುರಿತು ಸಚಿವರಿಗೆ ಮಾಹಿತಿ ನೀಡಿದರು.
ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಬುಡಾ ಆಯುಕ್ತ ಪ್ರಿತಮ್ ನಸಲಾಪುರೆ, ಸ್ಮಾರ್ಟ್ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ ಮೂರ್ತಿ, ಅರ್ಚನಾ ಕುಲಕರ್ಣಿ, ಕೃಷ್ಣಮೂರ್ತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ