ನವಜಾಶ ಶಿಶುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
Team Udayavani, Jun 16, 2021, 3:59 PM IST
ಹಳ್ಳೂರ: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ನಾಲ್ಕು ದಿನದ ನವಜಾತ ಶಿಶುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೆಸರುವಾಸಿಯಾದ ವೆಂಕಟೇಶ್ ಆಸ್ಪತ್ರೆ (ಕನಕರೆಡ್ಡಿ)ಯಲ್ಲಿ 4 ದಿನದ ನವಜಾತ ಶಿಶುವಿಗೆ ಶಸ್ತ್ರ ಚಿಕಿತ್ಸೆ ಮಾಡಿ ಮಗುವಿನ ಪ್ರಾಣ ಉಳಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.
ಅರಳಿಮಟ್ಟಿ ಗ್ರಾಮದ ಸಂಗೀತಾ ಪಾಟೀಲ ಎಂಬುವರ ಗಂಡು ಮಗು ಹುಟ್ಟಿದಾಗಲೇ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಹಾಲಿಂಗಪುರ ನಗರದ ಮಕ್ಕಳ ತಜ್ಞ ಡಾ.ರಮೇಶ ಪತ್ತಾರ ಎಂಬುವರು ಪರೀಕ್ಷಿಸಿದಾಗ ಮಗುವಿಗೆ ಉಸಿರಾಟದ ಕಾಯಿಲೆ ಇರುವುದು ಪತ್ತೆಯಾಗಿದೆ. ನವಜಾತ ಶಿಶುವಿನ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಮಾರುತಿ ಮೇದಾರ, ಅರವಳಿಕೆ ತಜ್ಞ ಡಾ.ಸಂಜಯ ಮುರಗೋಡ ಸೇರಿ ಅತೀ ಸೂಕ್ಷ್ಮ ಮತ್ತು ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆ ಮಾಡಿ ಮಗುವಿನ ಪ್ರಾಣ ಉಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ