ಯೋಜನೆ ಪೂರ್ತಿಗೆ ಬೆಂಬಲಿಸಿ


Team Udayavani, Apr 9, 2021, 8:18 PM IST

ಜಗದಹಗದಹ

ಮೂಡಲಗಿ: ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು.

ವಿಧಿಯಾಟದಿಂದ ಅವರನ್ನು ನಾವಿಂದು ಕಳೆದುಕೊಂಡಿದ್ದು ಅವರು ಬಿಟ್ಟು ಹೋದ ಹಲವಾರು ಕಾರ್ಯಕ್ರಮಗಳು ನಮ್ಮನ್ನು ಇನ್ನೂ ಸೆಳೆಯುತ್ತಲಿವೆ. ದಿ|ಅಂಗಡಿ ಅವರ ಹಾಗೂ ಬಿಜೆಪಿ ಸರಕಾರಗಳ ಸಾಧನೆಗಳನ್ನು ಗುರುತಿಸಿ ತಮ್ಮನ್ನು ಲೋಕಸಭೆಗೆ ಚುನಾಯಿಸುವಂತೆ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮನವಿ ಮಾಡಿದರು. ಇಲ್ಲಿಯ ಶಿವಬೋಧರಂಗ ಬ್ಯಾಂಕ್‌ ಸಭಾಂಗಣದಲ್ಲಿ ಗುರುವಾರ ಸಂಜೆ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಸುರೇಶ ಅಂಗಡಿ ಮೊದಲಿನಿಂದಲೂ ಕಾರ್ಯಕರ್ತರ ಪಡೆಯನ್ನು ಹೊಂದಿ ಜನಪರ ವ್ಯಕ್ತಿತ್ವವನ್ನು ರೂಢಿಸಿಕೊಂಡಿದ್ದರು. 2004 ರಿಂದ ಬೆಳಗಾವಿ ಲೋಕಸಭಾ ಸದಸ್ಯರಾಗಿ ಸಮಗ್ರ ಪ್ರಗತಿಗೆ ಶ್ರಮಿಸಿದ್ದರು. ಅಲ್ಲದೆ ನರೇಂದ್ರ ಮೋದಿಯವರ ಸಂಪುಟದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನಿಯೋಕ್ತಿಗೊಂಡರು. ಪಕ್ಷ ಹಾಗೂ ಜನರ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿದ ಸಂಸದರು ಎಂಬ ಖ್ಯಾತಿಗೆ ಒಳಗಾದರು.

ಕೋವಿಡ್‌ ಸಮಯದಲ್ಲಿ ಎಷ್ಟೋ ಸಾರಿ ಹೇಳಿದರೂ ಪಕ್ಷ ಹಾಗೂ ಸರಕಾರದ ಕೆಲಸದಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯದ ಕಡೆಗೆ ಗಮನ ನೀಡಲಿಲ್ಲ. ಅ ಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋದವರು ಮರಳಿ ಬರಲಿಲ್ಲ. ಕೊರೊನಾ ತುತ್ತಿಗೆ ಬಲಿಯಾದರು. ಇವರ ಆತ್ಮಕ್ಕೆ ಶಾಂತಿ ದೊರೆಯಲು ನಿಮ್ಮ ಮನೆ ಮಗಳಾದ ನನಗೆ ತಮ್ಮ ಅಮೂಲ್ಯ ಮತ ನೀಡಿ ಸುರೇಶ ಅಂಗಡಿಯವರು ರೂಪಿಸಿದ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಗೋಕಾಕ ಹಾಗೂ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರ ಕೈ ಬಲ ಪಡಿಸಲು ಜನ ಸೇವೆಗೆ ಆಶೀರ್ವಾದ ಮಾಡಬೇಕು. ಕೆಲ ಕಾರಣಾಂತರಗಳಿಂದ ಮಾಚಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿಲ್ಲ. ಅವರು ಈಗಾಗಲೇ ತಮ್ಮ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದು ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ.

ಇದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇನ್ನೆರಡು ದಿನಗಳಲ್ಲಿ ಹಿರಿಯ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆಂದು ಅವರು ಕಾರ್ಯಕರ್ತರಿಗೆ ವಿಶ್ವಾಸ ತುಂಬಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮೇ 17 ರಂದು ನಡೆಯುವ ಲೋಕಸಭಾ ಉಪಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಲು ಬಿಜೆಪಿ ಮತ ನೀಡಿ. ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ಪರವಾಗಿದ್ದು ರೈತರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿಕೊಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಅವರು ಕೋರಿದರು. ವೇದಿಕೆಯಲ್ಲಿ ಅರಭಾಂವಿ ಮಂಡಲ ಬಿಜೆಪಿ ಅಧ್ಯಕ್ಷ ಮಹದೇವ ಶೆಕ್ಕಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ ಪಠಾಣ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಸುಭಾಸ ಪಾಟೀಲ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ದಾಸಪ್ಪ ನಾಯಿಕ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಈರಣ್ಣ ಅಂಗಡಿ, ಪ್ರಕಾಶ ಮಾದರ, ಬೆಂಗಳೂರದ ಶೇಖರರೆಡ್ಡಿ, ನವಿನಕುಮಾರ, ಕೃಷ್ಣಮೂರ್ತಿ ಬಿಜೆಪಿ ಪದಾಧಿ  ಕಾರಿಗಳು, ಪುರಸಭೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.