50 ವರ್ಷ ಹಳೆಯ ಶಾಲಾ ಕಟ್ಟಡ ಪುನಃಶ್ಚೆತನಕ್ಕೆ ಬಜೆಟ್‌ನಲ್ಲಿ ವಿಶೇಷ ಅನುದಾನ  


Team Udayavani, Feb 9, 2021, 6:04 PM IST

Suresh kumar

ಬೆಳಗಾವಿ: 50 ವರ್ಷಕ್ಕಿಂತ ಹಳೆಯ ಶಾಲಾ ಕಟ್ಟಡಗಳ ಪುನಃಶ್ಚೇತನಕ್ಕೆ ಈ ಬಾರಿ ಬಜೆಟ್‌ ನಲ್ಲಿ ವಿಶೇಷ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶಕುಮಾರ್‌ ತಿಳಿಸಿದರು.

ಖಾನಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಹೊಸದಾಗಿ ನಿರ್ಮಿಸಿರುವ ವಿಜ್ಞಾನ ಉದ್ಯಾನ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲು ಮನವಿ ಮಾಡಲಾಗುವುದು. ಇನ್ನುಳಿದಂತೆ ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ನಿರ್ಮಾಣ, ಹಣಕಾಸಿನ ಲಭ್ಯತೆ ಮೇರೆಗೆ ಆದ್ಯತೆ ನೀಡಲಾಗುವುದು. ಬೆಂಗಳೂರಿನಿಂದ ಹಿಡಿದು ರಾಜ್ಯದ ಕೊನೆಯ ಶಾಲೆಯಲ್ಲಿಯೂ ಕನ್ನಡವನ್ನು ಭಾಷೆಯಾಗಿ ಕಲಿಸಬೇಕು. ಈ ನೆಲದ ಕಾನೂನು ಅನ್ವಯ ಭಾಷೆ ಕಲಿಸಲು ಅಗತ್ಯ ಕ್ರಮ ಕೈಗೊಂಡು ಕನ್ನಡ ಕಲಿಸುವ ಶಿಕ್ಷಕರನ್ನು ಕಳುಹಿಸಲಾಗುವುದು. ಎಲ್ಲ ಕಡೆ ಸಂಖ್ಯೆ ಪಡೆದು ಕೊರತೆ ಇರುವ ಶಾಲೆಗೆ ಶಿಕ್ಷಕರನ್ನು ಕಳುಹಿಸಲಾಗುವುದು ಎಂದರು.

ಜನವರಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಿದ್ದೇವೆ. ಅಲ್ಲಿಯ ಹಾಜರಾತಿ ಪಡೆದು ಮುಂದೆ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಮುಖ್ಯವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಿದ್ದಾರೆ. ಮತ್ತೆ ಅವರನ್ನು ಮುಖ್ಯವಾಹಿನಿಗೆ ಕರೆ ತರುವುದು ಕಷ್ಟಕರ.

   ಇದನ್ನೂ ಓದಿ :ಮರಾಠಿ ಶಾಲಾ ಮಕ್ಕಳಿಂದ ನಾಡಗೀತೆ ಹಾಡಿಸಿದ ಶಿಕ್ಷಣ ಸಚಿವ ಸುರೇಶ ಕುಮಾರ

ಕಳೆದ ವರ್ಷ ತರಗತಿ ಆರಂಭಿಸದ್ದಕ್ಕೆ ಗ್ರಾಮೀಣ, ನಗರ ಪ್ರದೇಶದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಜತೆಗೆ ಇನ್ನು ತಾಲೂಕಿನಲ್ಲಿ ಬಾಲ್ಯ ವಿವಾಹ ಸಂಖ್ಯೆ ಅಧಿಕವಾಗಿದೆ. ಇದೊಂದು ಸಾಮಾಜಿಕ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಗೃತಿ ಮೂಡಿಸಲಾಗುವುದು. ಅರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿ ಇನ್ನುಳಿದ ತರಗತಿ ಆರಂಭಿಸಲು ಕ್ರಮ ವಹಿಸಲಾಗುವುದು. 8, 9, 10 ಹಾಗೂ 11ನೇ ತರಗತಿಯನ್ನು ಇನ್ನು ಮುಂದಿನ ದಿನಗಳಲ್ಲಿ ಪೂರ್ಣಾವಧಿ  ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಮಿತಿಯ ಸಲಹೆ ಪಡೆಯಲಾಗುವುದು ಎಂದರು.

ಪ್ರತಿಯೊಬ್ಬ ಶಿಕ್ಷಕರು ತಯಾರಾಗಿ ನೋಟ್ಸ್‌ ಮಾಡಿಕೊಂಡು ಹೋದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿದೆ. ಮಕ್ಕಳು ಯಾವ ವಿಷಯದಲ್ಲಿ ದುರ್ಬಲ ಎನ್ನುವ ಮಾಹಿತಿ ಪಡೆದು ಆ ವಿಷಯಕ್ಕೆ ಒತ್ತು ನೀಡಿ ಕಲಿಸಬೇಕಿದೆ. ಬರುವ ಶೈಕ್ಷಣಿಕ ವರ್ಷದಿಂದ ಯಾವ ಮಕ್ಕಳೂ ಯಾವ ವಿಷಯದಲ್ಲಿಯೂ ಕಲಿಕೆಯಲ್ಲಿ ಹಿಂದೆ ಬೀಳಬಾರದು ಎಂಬುದಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು. ನಮ್ಮ ಶಾಲೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಎರಡೂ ಇದೆ. ಈ ಕ್ರಮ ಇಡೀ ದೇಶದಲ್ಲಿ ಮೆಚ್ಚುಗೆಗೆ ಕಾರಣವಾಗಿದೆಎಂದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.