ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು
Team Udayavani, Apr 6, 2020, 9:48 PM IST
ಬೆಳಗಾವಿ: ಕೋವಿಡ್ 19 ವೈರಸ್ ವ್ಯಾಪಕವಾಗಿ ಹರಡುತ್ತಿರುವಾಗ ದೆಹಲಿಯ ನಿಜಾಮುದ್ದಿನ್ ತಬ್ಲಿಘಿ ಜಮಾತ್ ಮರ್ಕಜ್ದಿಂದ ಬಂದ ಮೂವರು ಅಪರಿಚಿತರು ತಾಲೂಕಿನ ಸುಳೇಭಾವಿ ಗ್ರಾಮದ ಗುಡ್ಡದಲ್ಲಿ ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಗ್ರಾಮದ ಯುವಕರ ಗುಂಪು ಸೋಮವಾರ ದಾಳಿ ನಡೆಸಿದಾಗ ಬ್ಯಾಗ್ ಬಿಟ್ಟು ಅಪರಿಚಿತರು ಪರಾರಿಯಾಗಿದ್ದಾರೆ.
ಕೆಲವು ದಿನಗಳಿಂದ ಗ್ರಾಮದ ಗೌಪ್ಯ ಸ್ಥಳಗಳಲ್ಲಿ ಕೆಲವರು ಅಡಗಿ ಕುಳಿತಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಈ ಬಗ್ಗೆ ಪೊಲೀಸ್ ಠಾಣೆಗೂ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಅದರಂತೆ ಗ್ರಾಮದ ಗುಡ್ಡದ ಮೇಲೆ ಯುವಕರು ಹೋದಾಗ ಮೂರು ಜನ ತಮ್ಮ ಕಡೆ ಇದ್ದ ಬ್ಯಾಗ್ ಬಿಟ್ಟು ಓಡಿ ಹೋಗಿದ್ದಾರೆ. ಗುಡ್ಡದಲ್ಲಿ ಕೆಲ ಹೊತ್ತು ಹುಡುಕಾಡಿದರೂ ಅಲ್ಲಿ ಯಾರೂ ಇರಲಿಲ್ಲ ಎಂದು ಯುವಕರು ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಬ್ಯಾಗನ್ನು ಪರಿಶೀಲಿಸಿದಾಗ ಕೆಲವು ಜೀವನಾವಶ್ಯಕ ವಸ್ತುಗಳು ಹಾಗೂ ಬಟ್ಟೆಗಳು ಇದ್ದವು. ಈ ಬ್ಯಾಗ್ ಅನ್ನು ಪೊಲೀಸರು ಪರಿಶೀಲನೆ ನಡೆಸಿ ನಂತರ ಸುಟ್ಟು ಹಾಕಿದ್ದಾರೆ.
ಈ ಭಾಗದಲ್ಲಿರುವ ಮಸೀದಿಯಲ್ಲಿ ಇನ್ನೂ ಕೆಲವರು ಅಡಗಿ ಕುಳಿತಿದ್ದಾರೆ ಹಾಗೂ ರಾತ್ರಿ ಹೊತ್ತಿನಲ್ಲಿ ಇಲ್ಲಿ ಕೆಲವು ಶಂಕಾಸ್ಪದ ಚಟುವಟಿಕೆಗಳು ನಡೆಯುತ್ತಿರುತ್ತವೆ ಹಾಗಾಗಿ ಕೂಡಲೇ ಪೊಲೀಸರು ಮಸೀದಿಯೊಳಗೆ ಹೋಗಿ ಪರಿಶೀಲನೆ ನಡೆಸಬೇಕು, ಅಡಗಿ ಕುಳಿತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜತೆಗೆ ಓಡಿ ಹೋದವರ ಬಳಿ ಇದ್ದ ಬ್ಯಾಗ್ ಅನ್ನು ಪೊಲೀಸರು ಸುಟ್ಟು ಹಾಕುವ ಮೂಲಕ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕರ ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಸ್ಥಳದಲ್ಲಿ ಮಾರೀಹಾಳ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ