ತಾಲೂಕಾದರೂ ತಾಲೂಕಲ್ಲ!

ಇಲಾಖೆ ಕಚೇರಿಗಳಿಲ್ಲ-ಸೌಲಭ್ಯಗಳಿಲ್ಲ

Team Udayavani, May 19, 2022, 5:53 PM IST

19

 ಬೆಳಗಾವಿ: ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಸರ್ಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೂತನ ತಾಲೂಕುಗಳನ್ನು ರಚನೆ ಮಾಡಿ ಘೋಷಣೆ ಮಾಡಿದೆ. ಈ ಘೋಷಣೆಯಾಗಿ ವರ್ಷಗಳೇ ಉರುಳಿವೆ. ಆದರೆ ಹೊಸ ತಾಲೂಕುಗಳಿಗೆ ಮುಖ್ಯವಾಗಿ ಬೇಕಾಗಿರುವ ಇಲಾಖೆಗಳು, ಮೂಲಭೂತ ಸೌಲಭ್ಯಗಳು ಇನ್ನೂ ದೊರೆತಿಲ್ಲ. ಪರಿಣಾಮ ಸಾರ್ವಜನಿಕರಿಗೆ ತಾವು ಮೊದಲಿದ್ದ ತಾಲೂಕುಗಳಿಗೆ ಅಲೆದಾಡುವದು ತಪ್ಪಿಲ್ಲ.

ಇದರಿಂದ ಗಡಿ ಜಿಲ್ಲೆ ಬೆಳಗಾವಿ ಸಹ ಹೊರತಾಗಿಲ್ಲ. ಸುಮಾರು 55 ಲಕ್ಷ ಜನಸಂಖ್ಯೆ ಹೊಂದಿರುವ ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಜನರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಐದು ಹೊಸ ತಾಲೂಕುಗಳ ಘೋಷಣೆ ಮಾಡಿದೆ. ಇದರಿಂದ 10 ತಾಲೂಕುಗಳಿದ್ದ ಸಂಖ್ಯೆ ಈಗ 15 ಕ್ಕೆ ಏರಿಕೆಯಾಗಿದೆ. ಆದರೆ ಎಲ್ಲಿಯೂ ಪೂರ್ಣ ಪ್ರಮಾಣದ ತಾಲೂಕು ರಚನೆಯಾಗಿಲ್ಲ.

ಹಿಂದಿನ ಸರ್ಕಾರ ಘೋಷಣೆ ಮಾಡಿದಂತೆ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ ಹಾಗೂ ಯರಗಟ್ಟಿ ತಾಲೂಕುಗಳ ಘೋಷಣೆಯಾಗಿವೆ. ಅದರಲ್ಲಿ ಕಿತ್ತೂರು ತಾಲೂಕು ಘೋಷಣೆಯಾಗಿ ಏಳು ವರ್ಷ ಸಂದಿವೆ. ಅದರೆ ಯಾವ ತಾಲೂಕಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಇದರಿಂದ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಹಳೆಯ ತಾಲೂಕುಗಳಿಗೆ ಅಲೆದಾಡುವದು ತಪ್ಪಿಲ್ಲ. ಜನರ ನಿರೀಕ್ಷೆಗಳು ಸಂಪೂರ್ಣವಾಗಿ ಈಡೇರಿಲ್ಲ. ಯಥೇತ್ಛವಾಗಿ ಘೋಷಣೆಗಳು ಹರಿದು ಬಂದಿವೆ. ಆದರೆ ಅದಕ್ಕೆ ತಕ್ಕಂತೆ ಅನುದಾನ ಮಾತ್ರ ಕಾಣುತ್ತಿಲ್ಲ. ಸುಮಾರು 28 ಕಚೇರಿಗಳು ಬರಬೇಕಾದ ಜಾಗದಲ್ಲಿ ಐದಾರು ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಕೊರೊನಾ ಸಂಕಷ್ಟ ಅನುದಾನ ಬಿಡುಗಡೆಗೆ ಕತ್ತರಿ ಹಾಕಿದೆ.

ಸುದೀರ್ಘ‌ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ತಾಲೂಕು ಘೋಷಣೆ ಮಾಡಿತು. ಅಲ್ಲಿಗೆ ತಮ್ಮ ಕೆಲಸ ಮುಗಿಯಿತು ಎನ್ನುವಂತೆ ಸರ್ಕಾರ ತಾಲೂಕುಗಳ ಹೆಸರು ಘೋಷಣೆ ಮಾಡಿ ಕೈತೊಳೆದುಕೊಂಡಿದೆ. ಇವತ್ತಿಗೂ ಪೂರ್ಣ ಪ್ರಮಾಣದ ತಾಲೂಕು ಕೇಂದ್ರಕ್ಕೆ ಬೇಕಾದ ಸೌಲಭ್ಯಗಳು ಬಂದಿಲ್ಲ. ಇಲಾಖೆಗಳ ಕೊರತೆ ಕಾಡುತ್ತಿದೆ. ತಹಶೀಲ್ದಾರ ಕಚೇರಿ ಬಂದರೂ ಹೆಚ್ಚಿನ ಪ್ರಯೋಜನ ಆಗಿಲ್ಲ ಎಂಬುದು ಐದು ತಾಲೂಕುಗಳ ಜನರ ದೂರು.

ಮೂಡಲಗಿ  ತಾಲೂಕು ಸ್ಥಾನಮಾನ ಸಿಕ್ಕು ನಾಲ್ಕು ವರ್ಷಗಳಾಗಿವೆ. ಈ ನಾಲ್ಕು ವರ್ಷಗಳಲ್ಲಿ ಕೇವಲ ನಾಲ್ಕು ಕಚೇರಿಗಳು ಬಂದಿದ್ದೇ ದೊಡ್ಡ ಸಾಧನೆ. ಮುಖ್ಯವಾಗಿ ಉಪನೋಂದಣಿ ಕಚೇರಿ ಇಲ್ಲದೆ ತಾಲೂಕಿನ ಜನರು ಪರದಾಡುತ್ತಿದ್ದಾರೆ. ಕಾರ್ಮಿಕ ಇಲಾಖೆ ಇದ್ದರೂ ಇಲ್ಲದಂತಿದೆ. ಪೂರ್ಣ ಪ್ರಮಾಣದ ತಾಲೂಕಿಗೆ ಕನಿಷ್ಠ 18 ಕಚೇರಿಗಳು ಬರಬೇಕು. ಇದುವರೆಗೆ ತಹಶೀಲ್ದಾರ ಕಚೇರಿ, ತಾಲೂಕು ಪಂಚಾಯತ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಕಾರ್ಮಿಕ ಇಲಾಖೆ ಕಾರ್ಯನಿರ್ವಹಿಸುತ್ತಿವೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೊದಲೇ ಇದೆ. ಉಪ ನೊಂದಣಿ ಕಚೇರಿಗೆ ಬಹಳ ಬೇಡಿಕೆ ಇದೆ. ಮುಖ್ಯವಾಗಿ ಮಿನಿ ವಿಧಾನಸೌಧ ಇನ್ನೂ ನಿರ್ಮಾಣವಾಗಿಲ್ಲ. ಇದಕ್ಕೆ ನಿವೇಶನ ಗುರುತಿಸುವ ಹಾಗೂ ಸರ್ಕಾರದಿಂದ ಅನುಮತಿ ಪಡೆಯುವ ವಿಷಯದಲ್ಲೇ ಬಹಳ ಗೊಂದಲ ಕಾಣುತ್ತಿದೆ.

ಕಾಗವಾಡ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಕಾಗವಾಡ ತಾಲೂಕು ಅಥಣಿಯಿಂದ ಪ್ರತ್ಯೇಕಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಈ ತಾಲೂಕಿನಲ್ಲಿ ಇಲ್ಲಗಳ ದರ್ಬಾರು ಜೋರಾಗಿದೆ. ಸಾರ್ವಜನಿಕರಿಗೆ ಮುಖ್ಯವಾಗಿ ಬೇಕಾಗಿರುವ ಉಪ ನೋಂದಣಿ ಕಚೇರಿ ಸ್ಥಾಪನೆಗೆ ಬಹಳ ಬೇಡಿಕೆ ಇದೆ. ಮಿನಿ ವಿಧಾನಸೌಧದ ನಿರ್ಮಾಣ ಆಸೆ ಇನ್ನೂ ಈಡೇರಿಲ್ಲ. ತಾಲೂಕು ಕೇಂದ್ರ ಸ್ಥಾನಮಾನ ಪಡೆದಿದ್ದರೂ ಮೂಲಭೂತ ಸೌಲಭ್ಯಗಳ ಕೊರತೆ ಎದ್ದುಕಾಣುತ್ತಿದೆ. ಕಾಗವಾಡ ವ್ಯಾಪ್ತಿಯಲ್ಲಿ ಬರುವ 40 ಗ್ರಾಮಗಳು ಇನ್ನೂ ಅಥಣಿ ತಾಲೂಕಿನಲ್ಲೇ ಮುಂದುವರಿದಿರುವುದರಿಂದ ಸಾಕಷ್ಟು ಗೊಂದಲ ಇದೆ. ಹೀಗಾಗಿ ಇದನ್ನು ಮಿನಿ ತಾಲೂಕು ಕಾಗವಾಡ ಎಂದೇ ಕರೆಯಲಾಗುತ್ತಿದೆ.

ಕಿತ್ತೂರು ತಾಲೂಕು ಕೇಂದ್ರವಾಗಿ ಏಳು ವರ್ಷ ಸಂದಿವೆ. ತಹಶೀಲ್ದಾರ ಕಚೇರಿ ಆರಂಭವಾಗಿ ಐದು ವರ್ಷ ಕಳೆದಿದೆ. ಇದಲ್ಲದೆ ಉಪ ನೋಂದಣಿ ಕಚೇರಿ, ಲೋಕೋಪಯೋಗಿ ಇಲಾಖೆ, ತಾ.ಪಂ. ಕಾರ್ಯನಿರ್ವಹಿಸುತ್ತಿವೆ. ಮುಖ್ಯವಾಗಿ ಇನ್ನೂ ಹಲವು ಕಚೇರಿಗಳು ಬರಬೇಕಿರುವುದರಿಂದ ಕಿತ್ತೂರು ತಾಲೂಕಿನ ಜನರಿಗೆ ಹಳೆಯ ತಾಲೂಕು ಕೇಂದ್ರ ಬೈಲಹೊಂಗಲಕ್ಕೆ ಅಲೆದಾಡುವದು ಇನ್ನೂ ತಪ್ಪಿಲ್ಲ. ತಾಲೂಕಿಗೆ ಮುಕುಟಪ್ರಾಯವಾಗಿರುವ ಮಿನಿ ವಿಧಾನಸೌಧವನ್ನು 10 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಇದರ ಉದ್ಘಾಟನೆ ಇದುವರೆಗೆ ನೆರವೇರಿಲ್ಲ. ಸುಮಾರು 9 ಕೋಟಿ ರೂ ವೆಚ್ಚದಲ್ಲಿ ತಾಲೂಕಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೃಷಿ ಇಲಾಖೆ ಸೇರಿದಂತೆ ಇದುವರೆಗೆ ಒಟ್ಟು 13 ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ.

ನಿಪ್ಪಾಣಿ ಮಹಾರಾಷ್ಟ್ರದ ಜೊತೆ ನಿಕಟ ಸಂಪರ್ಕ ಹೊಂದಿರುವ ನಿಪ್ಪಾಣಿ ಇನ್ನೂ ಪೂರ್ಣಪ್ರಮಾಣದ ತಾಲೂಕು ಕೇಂದ್ರ ಎಂದು ಗುರುತಿಸಿಕೊಂಡಿಲ್ಲ. ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದಿದ್ದರೂ ಪೂರ್ಣ ಪ್ರಮಾಣದಲ್ಲಿ ಕಚೇರಿಗಳು ಬಂದಿಲ್ಲ. ನಮ್ಮದು ಚಿಕ್ಕೋಡಿಯೇ ಅಥವಾ ನಿಪ್ಪಾಣಿ ತಾಲೂಕೇ ಎಂಬ ಗೊಂದಲ ಜನರಲ್ಲಿ ಇನ್ನೂ ಇದೆ. ಸರ್ಕಾರದ ಕೆಲವು ಕಡತಗಳಲ್ಲಿ ಮಾತ್ರ ನಿಪ್ಪಾಣಿ ತಾಲೂಕು ಎಂದು ನಮೂದಿಸುತ್ತಿರುವದರಿಂದ ಈ ಗೊಂದಲ ಮೂಡಿದೆ. ಮಿನಿ ವಿಧಾನಸೌಧ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಬಲವಾಗಿದೆ. ಇದರ ಜೊತೆಗೆ ಲೋಕೋಪಯೋಗಿ, ಸಮಾಜ ಕಲ್ಯಾಣ ಸೇರಿದಂತೆ ಪ್ರಮುಖ ಕಚೇರಿಗಳು ಶೀಘ್ರವೇ ಬರಬೇಕು ಎಂಬುದು ಜನರ ಒತ್ತಾಯ. ನಿಪ್ಪಾಣಿಯವರೇ ಆದ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಿದ ಫಲವಾಗಿ ಎ ಪಿ ಎಂ ಸಿ ಆವರಣದಲ್ಲಿ ಮಿನಿ ವಿಧಾನಸೌಧಕ್ಕೆ ಐದು ಎಕರೆ ಜಾಗ ಕಲ್ಪಿಸಲಾಗಿದೆ ಎಂಬುದು ಅಧಿಕಾರಿಗಳ ಹೇಳಿಕೆ.

ಯರಗಟ್ಟಿ 3 ವರ್ಷಗಳ ಹಿಂದೆ ಸವದತ್ತಿಯಿಂದ ಬೇರ್ಪಟ್ಟು ಜಿಲ್ಲೆಯ 15 ನೇ ತಾಲೂಕು ಸ್ಥಾನಮಾನ ಪಡೆದ ಯರಗಟ್ಟಿ ಬಹುತೇಕ ಕಚೇರಿಗಳಿಲ್ಲದೆ ಅನಾಥವಾಗಿದೆ. ತಹಶೀಲ್ದಾರ ಕಚೇರಿ ಬಿಟ್ಟು ಬೇರೆ ಯಾವುದೇ ಕಚೇರಿ ಇಲ್ಲಿಗೆ ಬಂದಿಲ್ಲ. ಜನರ ಪರದಾಟ ತಪ್ಪಿಲ್ಲ. ಹಳ್ಳಿಗಳ ಸೇರ್ಪಡೆ ವಿಷಯದಲ್ಲಿ ಅಸಮಾಧಾನ ಇದೆ. ಅನುದಾನದ ಕೊರತೆ ಬಹಳ ಕಾಡುತ್ತಿದೆ. ಹೀಗಾಗಿ ತಾಲೂಕಿನ ಜನರು ಆದಾಯ ಪ್ರಮಾಣ ಪತ್ರ ಸೇರಿದಂತೆ ಎಲ್ಲ ಮುಖ್ಯ ದಾಖಲೆ ಪತ್ರಕ್ಕಾಗಿ ಸವದತ್ತಿಗೆ ಅಲೆದಾಡಬೇಕಾಗಿದೆ.

ಮೂಡಲಗಿ ಪೂರ್ಣ ಪ್ರಮಾಣದ ತಾಲೂಕು ಕೇಂದ್ರಕ್ಕೆ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸುಮಾರು 15 ರಿಂದ 20 ಕೋಟಿ ರೂ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸರ್ಕಾರ ಇದಕ್ಕೆ ಅನುಮೋದನೆ ನೀಡಿದರೆ ಎಲ್ಲ ಇಲಾಖೆಗಳು ಒಂದೇ ಸೂರಿನಲ್ಲಿ ಬರಲಿವೆ. ಮುಖ್ಯವಾಗಿ ತಾಲೂಕಿಗೆ ಉಪ ನೋಂದಣಿ ಕಚೇರಿ ಮಂಜೂರಾಗಿದ್ದು ಇಷ್ಟರಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ. ಕೋವಿಡ್‌ ಕಾರಣದಿಂದ ಕೆಲವು ಕಚೇರಿಗಳ ಅನುಮೋದನೆಗೆ ವಿಳಂಬವಾಗಿದೆ. –ಬಾಲಚಂದ್ರ ಜಾರಕಿಹೊಳಿ, ಅರಭಾವಿ ಶಾಸಕ

ಈಗಾಗಲೇ ಕಿತ್ತೂರು ಬಹುತೇಕ ಪೂರ್ಣ ಪ್ರಮಾಣದ ತಾಲೂಕು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಮಿನಿ ವಿಧಾನಸೌಧ ಕಟ್ಟಡ ಪೂರ್ಣಗೊಂಡಿದೆ. ಇದೇ ಕಟ್ಟಡದಲ್ಲಿ ಇನ್ನೊಂದು ಮಹಡಿ ಕಟ್ಟಲು ನಿರ್ಧರಿಸಲಾಗಿದೆ. ಇದಲ್ಲದೆ ಆವರಣದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒಟ್ಟು ಮೂರು ಕೋಟಿ ರೂ ಗಳ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. 100 ಹಾಸಿಗೆಗಳ ತಾಲೂಕಾ ಆರೋಗ್ಯ ಕೇಂದ್ರಕ್ಕೆ 17 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ತಾಲೂಕಿಗೆ ವಿವಿಧ ಮೂಲಗಳಿಂದ ಅಭಿವೃದ್ಧಿಗಾಗಿ 1700 ಕೋಟಿ ರೂ. ಬಿಡುಗಡೆಯಾಗಿದೆ. –ಮಹಾಂತೇಶ ದೊಡ್ಡಗೌಡರ, ಕಿತ್ತೂರು ಶಾಸಕರು

-ಕೇಶವ ಆದಿ

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.