ಮಕ್ಕಳಿಗೆ ಸಂಸ್ಕೃತಿ-ಸೇವಾ ಮನೋಭಾವ ಕಲಿಸಿ
•ಸಾಧಕರಿಗೆ ಪ್ರಶಸ್ತಿ ಪ್ರದಾನ •ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸದಿರಿ: ಹೊರಟ್ಟಿ
Team Udayavani, Jul 8, 2019, 10:04 AM IST
ಬೆಳಗಾವಿ: ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಗಡಿನಾಡು ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ಬೆಳಗಾವಿ: ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಕಳುಹಿಸುತ್ತಿರುವುದು ನಿಲ್ಲಬೇಕು. ಮಕ್ಕಳಿಗೆ ಸಂಸ್ಕೃತಿ ಮತ್ತು ಸೇವಾ ಮನೋಭಾವ ಕಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ 13ನೇ ವಾರ್ಷಿಕೋತ್ಸವ ನಿಮಿತ್ತ ರವಿವಾರ ನಡೆದ ಗಡಿನಾಡು ಸಾಹಿತ್ಯ, ಸಂಸ್ಕೃತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯಕ್ಕಾಗಿ ತಂದೆ-ತಾಯಿಗಳು ಏನೆಲ್ಲ ತ್ಯಾಗ ಮಾಡುತ್ತಾರೆ. ಆದರೆ ದೊಡ್ಡವರಾದ ನಂತರ ಮಕ್ಕಳು ಪಾಲಕರನ್ನು ಮರೆಯುತ್ತಿದ್ದಾರೆ. ದೊಡ್ಡವರಾದ ನಂತರ ಮಕ್ಕಳು ತಂದೆ-ತಾಯಿಗಳಿಗೆ ಆಶ್ರಯರಾಗಬೇಕು. ಪಾಲಕರು ಮಕ್ಕಳ ಬದುಕಿಗೆ ಬೇಕಾಗಿರುವ ಉತ್ತಮ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕೃತಿ ಮತ್ತು ಸೇವಾ ಮನೋಭಾವನೆ ಕಲಿಸಬೇಕು ಎಂದರು.
ಎಲೆ ಮರೆಯ ಕಾಯಿಗಳಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ. ಸಮಾಜ ಸೇವೆಯಲ್ಲಿ ತೊಡಗಿರುವವರನ್ನು ಗುರುತಿಸಬೇಕು. ಸಾಧಕರನ್ನು ಗೌರವಿಸುವ ಮೂಲಕ ಅವರ ಒಳ್ಳೆಯ ಕಾರ್ಯಗಳನ್ನು ಜನರಿಗೆ ಹಾಗೂ ಸರಕಾರಕ್ಕೆ ಪರಿಚಯಿಸಬೇಕು. ಇದರಿಂದ ಸಾಧಕರಿಗೆ ಪ್ರೇರಣೆ ಹಾಗೂ ಆನಂದ ಸಿಗುತ್ತದೆ. ಸರ್ಕಾರ ಮತ್ತು ಸಾಮಾಜಿಕ ಸಂಘಟನೆಗಳು ನೀಡುವ ಪ್ರಶಸ್ತಿಗಳಿಗೆ ಸಮಾನವಾದ ಗೌರವವಿದೆ ಎಂದರು.
ಕಾರಂಜಿಮಠದ ಶ್ರೀಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅಥಣಿಯ ಹಿರಿಯ ಸಾಹಿತಿ ಹಾಗೂ ನಾಟಕಕಾರ ಕೆ.ಎಲ್. ಕುಂದರಗಿ ಸರ್ವಾಧ್ಯಕ್ಷತೆ ವಹಿಸಿದ್ದರು. ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಪ್ರೊ| ಎಸ್.ಎಂ. ಹುರಕಡ್ಲಿ, ಕನ್ನಡ ಚಲನಚಿತ್ರ ಕಲಾವಿದೆ ಅಂಜಲಿ ಕಾಂಬಳೆ ಮಾತನಾಡಿದರು.
ಪ್ರತಿಷ್ಠಾನದ ಅಧ್ಯಕ್ಷ ಶಶಿಧರ ಘಿವಾರಿ ಸ್ವಾಗತಿಸಿದರು. ವಿಜಯಲಕ್ಷ್ಮೀ ಪುಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈತ್ರೇಯಿಣಿ ಗದಿಗೆಪ್ಪಗೌಡರ ಪರಿಚಯಿಸಿದರು. ರುದ್ರಣ್ಣ ಚಂದರಗಿ, ವಿ.ಬಿ. ದೊಡಮನಿ, ಆಶಾ ಯಮಕನಮರಡಿ, ನಿರ್ಮಲಾ ಬಟ್ಟಲ ಸೇರಿದಂತೆ ಇತರರು ಇದ್ದರು. ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ