ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು
Team Udayavani, Jan 26, 2022, 10:54 PM IST
ರಾಯಬಾಗ: ಕೋವಿಡ್ ಸಮಯ ದಲ್ಲಿಯೂ ರಾಜ್ಯ ಸರಕಾರ ಪರಿಶಿಷ್ಟ ಜಾತಿ-ಜನಾಂಗದ ಕಾಲೋನಿಗಳಲ್ಲಿ ರಸ್ತೆ ಸುಧಾರಣೆಗಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡ ಬೇಕೆಂದು ಶಾಸಕ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಂ. ಐಹೊಳೆ ಹೇಳಿದರು.
ಮಂಗಳವಾರ ಲೋಕೋಪಯೋಗಿ ಇಲಾಖೆಯಿಂದ ಎಸ್ಸಿಪಿ ಯೋಜನೆ ಯಡಿ ತಾಲೂಕಿನ ನಸಲಾಪುರ ಗ್ರಾಮದಿಂದ ಪ.ಜಾ.ದಾಸರ ಕಾಲೋನಿ ವರೆಗೆ 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ, ನಂದಿಕುರಳಿ-ನಸಲಾಪುರ ರಸ್ತೆಯಿಂದ ಪ.ಜಾ.ವಂಜೇರಿ ತೋಟದ ವರೆಗೆ 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ, ಕೆಂಪಟ್ಟಿ ಗ್ರಾಮದ ಪ.ಜಾ. ಕಾಲೋನಿಗೆ 20 ಲಕ್ಷ ರೂ. ವೆಚ್ಚದಲ್ಲಿ ಕೂಡುವ ರಸ್ತೆ ಸುಧಾರಣೆ, ಮೇಖಳಿ ಗ್ರಾಮದ ಪ.ಜಾ.ಕಾಲೋನಿಗೆ 17 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ರಾಯಬಾಗ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಬರುವ ದಿನಗಳಲ್ಲಿ ರಾಜ್ಯ ಸರಕಾರದಿಂದ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ಎಲ್ಲ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಸಿಬಿಕೆಎಸ್ಎಸ್ಕೆ ಅಧ್ಯಕ್ಷ ಭರತೇಶ ಬನವಣೆ, ಪೃಥ್ವಿರಾಜ ಜಾಧವ, ಅಮಿತ ಜಾಧವ, ಆರ್.ಕೆ.ನಿಂಗನೂರೆ, ಸಿ.ಎಸ್. ಕಾಂಬಳೆ, ದತ್ತಾ ಸಾವಂತ, ಶ್ರವಣ ಕಾಂಬಳೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ