ಬೆಳೆ ವಿಮೆ ಕಂತು ಭರಿಸಲು ತಾಂತ್ರಿಕ ಸಮಸ್ಯೆ ಅಡ್ಡಿ
Team Udayavani, Jul 10, 2020, 4:42 PM IST
ತೆಲಸಂಗ: ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿಗೆ ಸಾಮಾನ್ಯ ಸೇವಾ ಕೇಂದ್ರದ ಮೂಲಕ ವಿಮೆ ಕಂತು ಭರಿಸಲು ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಸೇವೆ ಒದಗಿಸಲು ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿ ನಿರಾಕರಿಸುತ್ತಿರುವುದು ರೈತರಿಗೆ ಸಮಸ್ಯೆಯಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿಮೆ ತುಂಬಲು ನೂಕು ನುಗ್ಗಲು ಇದ್ದ ಕಾರಣ ಖಾಸಗಿ ಸೇವಾ ಕೇಂದ್ರಗಳಿಗೆ ಆನ್ ಲೈನ್ ಅರ್ಜಿ ಪಡೆಯಲು ಅನುಮತಿ ನೀಡಲಾಗಿದೆ. ಆದರೆ ತಾಂತ್ರಿಕ ತೊಂದರೆಯಿಂದ ಕಂತು ತುಂಬಲು ಸಾಧ್ಯವಾಗುತ್ತಿಲ್ಲ.
ಏನಾಗುತ್ತಿದೆ: ಆನ್ಲೈನ್ ಅರ್ಜಿ ತುಂಬಿದಾಗ ಸೇವಾ ಕೇಂದ್ರದ ಖಾತೆಯಿಂದ ಹಣ ಕಡಿತವಾಗುತ್ತದೆ. ದೃಶೀಕರಣ ಚೀಟಿ ಸೊರೆತ ನಂತರ ರೈತರು ಕೇಂದ್ರದವರಿಗೆ ಹಣ ಕೊಡುತ್ತಾರೆ. ಆದರೆ ಈಗ ಹಣ ಕಡಿತಗೊಂಡರೂ ಸ್ವೀಕೃತಿ ಪಾವತಿ ಬರುತ್ತಿಲ್ಲ. ಇದರಿಂದ ಸೇವಾ ಕೇಂದ್ರದಸಿಬ್ಬಂದಿ ಕಂಗಾಲಾಗಿದ್ದಾರೆ. ಈ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸದೆ ಅವರು ರೈತರಿಂದ ವಿಮೆ ಸಂಗ್ರಹಿಸಲು ಸಾಧ್ಯವಿಲ್ಲ ಮತ್ತು ಸೇವಾ ಕೇಂದ್ರದ ಸಿಬ್ಬಂದಿಗೆ ತೊಂದರೆ ತಪ್ಪಿದ್ದಲ್ಲ. ಈ ಹಣ ಮರಳಿ ದೊರಕುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ ಈವರೆಗೆ ಸೇವಾ ಕೇಂದ್ರಗಳ ಖಾತೆಯಿಂದ ಅಥಣಿ ತಾಲೂಕು ಒಂದರಲ್ಲಿಯೇ 8.5 ಲಕ್ಷ ಕಡಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ