ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ


Team Udayavani, Apr 19, 2024, 4:28 PM IST

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ಉದಯವಾಣಿ ಸಮಾಚಾರ
ಬೆಳಗಾವಿ: ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಅಷ್ಟೇ ಅಲ್ಲದೇ ಎಲ್ಲ ತಂತ್ರಜ್ಞಾನಗಳು ಮಾನವ ಜೀವನವನ್ನು
ಸುಲಭಗೊಳಿಸುವ ಸಾಧನಗಳಾಗಿವೆ. ಅವುಗಳ ಜ್ಞಾನವನ್ನು ಸಂಪೂರ್ಣವಾಗಿ ಅರಿತು ನಮ್ಮ ದಿನನಿತ್ಯದ ಕಾರ್ಯ ಮತ್ತು ವೃತ್ತಿಪರತೆಯನ್ನು ವೃದ್ಧಿಸಿಕೊಳ್ಳಲು ಬಳಸಬಹುದಾಗಿದೆ ಎಂದು ಬೆಳಗಾವಿ ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ
“ನವ ಜ್ಞಾನ ಉತ್ಪತ್ತಿ ಮತ್ತು ಕೃತಕ ಬುದ್ಧಿಮತ್ತೆ’ ಕುರಿತು ಗುರುವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂತ್ರಜ್ಞಾನವು ಮಾನವ ನಿರ್ಮಿತವಾಗಿದ್ದರೂ ಅವು ಪ್ರಸಕ್ತ ದಿನಗಳಲ್ಲಿ ಮಾನವನಿಗೆ ಆರ್ಥಿಕ, ಔದ್ಯೋಗಿಕ ಮತ್ತು ಮಾನಸಿಕವಾಗಿ ಹಾನಿ ಉಂಟು ಮಾಡುತ್ತಿವೆ. ಆದರೆ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಅರಿತುಕೊಂಡು ಸದ್ಬಳಕೆ ಮಾಡಿಕೊಂಡಾಗ ಸಮಾಜ ಪ್ರಗತಿಯಾಗಲಿದೆ. ಕೃತಕ ಬುದ್ಧಿಮತ್ತೆ ಮುಂಬರುವ ದಿನಗಳಲ್ಲಿ ಬಹಳಷ್ಟು ಉದ್ಯೋಗಗಳನ್ನು ಕಸಿದುಕೊಳ್ಳಲಿದೆ ಎಂಬ ಚರ್ಚೆ ಶುರುವಾಗಿದೆ.

ಈ ಹಿಂದಿನ ಕೈಗಾರಿಕೆ ಕ್ರಾಂತಿಯಿಂದ ಇತ್ತೀಚಿನ ಎರಡು ದಶಕಗಳ ಹಿಂದಿನ ಕಂಪ್ಯೂಟರ್‌ ಬಳಕೆವರೆಗೆ ಅನೇಕ ಹೊಸ ಹೊಸ ಆವಿಷ್ಕಾರಗಳು ಉದ್ಯೋಗ ಕಸಿದುಕೊಳ್ಳುತ್ತವೆ ಎಂಬ ಆತಂಕ ಸೃಷ್ಟಿಸಿದ್ದವು ಎಂಬುದು ಇತಿಹಾಸ. ಕೃತಕ ಬುದ್ಧಿಮತ್ತೆಯೂ ಉದ್ಯೋಗ ಕಸಿಯುವ ರಾಕ್ಷಸನಂತೆ ಬಿಂಬಿತಗೊಂಡಿರುವುದು ಸಾಮಾನ್ಯವಾಗಿದೆ ಎಂದರು.

ಈವರೆಗೆ ಪ್ರಪಂಚದಲ್ಲಿ ಅಂದಾಜು 15 ಕೋಟಿ ಪುಸ್ತಕಗಳಿವೆ. ಆದರೆ ಮುಂದೆ ಕೃತಕ ಬುದ್ಧಿಮತ್ತೆ ಸಹಾಯದಿಂದ ಪುಸ್ತಕ ಬರೆಯುವುದು ಸುಲಭ. ಹೀಗಾಗಿ ಮುಂಬರುವ ಮೂರು ದಶಕಗಳಲ್ಲಿ ಪುಸ್ತಕಗಳ ಸಂಖ್ಯೆ 50 ಕೋಟಿ ದಾಟಲಿದೆ ಎಂದು
ಅಂದಾಜಿಸಿದರು.

ಕೃತಕ ಬುದ್ಧಿಮತ್ತೆ ಸಾಧನದಲ್ಲಿ ಪರಿಣಿತಿ ಪಡೆದಲ್ಲಿ ಮುಂಬರುವ ದಿನಗಳಲ್ಲಿ ಅದು ಉದ್ಯೋಗ ಕಸಿಯುವ ರಾಕ್ಷಸನಾಗದೆ, ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಮತ್ತು ಹೆಚ್ಚಿನ ವೇತನ ನೀಡುವ ಮಿತ್ರನಾಗುವುದು ಖಂಡಿತ. ಹೀಗಾಗಿ ಶಿಕ್ಷಕರು ಕೃತಕ ಬುದ್ಧಿಮತ್ತೆಯನ್ನು ಕಲಿಯುವ ಅವಶ್ಯಕತೆಯಿದೆ. ಒಬ್ಬ ಶಿಕ್ಷಕ ಕೃತಕ ಬುದ್ಧಿಮತ್ತೆ ಕಲಿತರೆ, ಆ ಶಿಕ್ಷಕ ನೂರಾರು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಕಲಿಯಲು ಪ್ರೇರೇಪಿಸುವ ಮತ್ತು ಅವರ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಬಹುದು ಎಂದು ಹೇಳಿದರು.

ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಮಾತನಾಡಿ, ಕಲಿಕೆ ನಿರಂತರ. ಹೀಗಾಗಿ ಔದ್ಯೋಗಿಕ ಕ್ಷೇತ್ರದ ಉದ್ಯೋಗ ಬೇಡಿಕೆಗಳನ್ನು ಅರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ಹೊಸ ಹೊಸ ಸಂಗತಿಗಳನ್ನು ಪರಿಚಯಿಸಬೇಕು. ಜ್ಞಾನದ ಫಲದಿಂದ ಸಮಾಜ
ಮತ್ತು ಕೈಗಾರಿಕೆಗಳು ಸಮನಾಂತರವಾಗಿ ಪ್ರಗತಿ ಹೊಂದುತ್ತವೆ. ಕಂಪ್ಯೂಟರ್‌ ಮತ್ತು ಸ್ಮಾರ್ಟ್‌ ಫೋನ್‌ ಫಲವಾಗಿ ಅನೇಕ ಅದ್ಭುತಗಳನ್ನು ಕಂಡಿರುವ ನಾವು ಮುಂಬರುವ ದಶಕದಲ್ಲಿ ಕೃತಕ ಬುದ್ಧಿಮತ್ತೆಯಿಂದ ಹೊಸ ಹೊಸ ಚಮತ್ಕಾರಗಳನ್ನು ಕಾಣಲು ಸಿದ್ಧರಾಗಬೇಕಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.