ತೆಲಸಂಗ: ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ “ದಾಖಲಾತಿ ಕೊರತೆ’


Team Udayavani, Mar 20, 2024, 12:05 PM IST

ತೆಲಸಂಗ: ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ “ದಾಖಲಾತಿ ಕೊರತೆ’

ಉದಯವಾಣಿ ಸಮಾಚಾರ
ತೆಲಸಂಗ: ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ವ್ಯಾಮೋಹದಿಂದ ಜನರನ್ನು ದೂರವಿಡಲು ರಾಜ್ಯ ಸರಕಾರ 2019-20ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ಆದರೆ ಆಂಗ್ಲ ಮಾಧ್ಯಮ ಶಿಕ್ಷಕರ ನೇಮಕಾತಿ ಮಾಡದೇ ಇರುವುದರಿಂದ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಬಂದ್‌ ಆಗುತ್ತಿರುವುದು ಮಾತ್ರವಲ್ಲ,ದಾಖಲಾತಿ ಪಡೆದ ಮಕ್ಕಳ ಭವಿಷ್ಯ
ಕತ್ತಲೆಗೆ ದೂಡಿದಂತಾಗಿದೆ.

ಸರಕಾರ ಅಥಣಿ ತಾಲೂಕಿನ ಬಾಡಗಿ, ಹಾಲಳ್ಳಿ, ಅಡಹಳ್ಳಿ, ಸಿದ್ದೇವಾಡಿ, ಬೇವನೂರ, ಇಂಗಳಗಾಂವ, ಯಂಕಚ್ಚಿ, ರೆಡ್ಡೇರಹಟ್ಟಿ,
ಅರಳಿಹಟ್ಟಿ ಒಟ್ಟು 9 ಗ್ರಾಮಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿತ್ತು. ಹಾಲಳ್ಳಿ, ಅಡಹಳ್ಳಿ, ಬೆವನೂರ, ನದಿ
ಇಂಗಳಗಾಂವ, ಯಕ್ಕಂಚಿ, ಅರಳಿಹಟ್ಟಿ ಒಟ್ಟು ಸರಕಾರಿ 6 ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದೂ ದಾಖಲಾತಿಯಾಗಿಲ್ಲ. ಇನ್ನೊಂದೆಡೆ ಖಾಸಗಿ ಇಂಗ್ಲಿಷ್‌ ಶಾಲೆಗಳಲ್ಲಿ ಮಕ್ಕಳಿಗೆ ದಾಖಲೆ ಸಿಗುತ್ತಿಲ್ಲ ಎಂಬುದೂ ಅಷ್ಟೇ ಸತ್ಯ.

ರಾಜ್ಯ ಸರ್ಕಾರ ಕನ್ನಡ ಮಾಧ್ಯಮದ ಶಿಕ್ಷಕರಿಗೆ ಇಂಗ್ಲಿಷ್‌ ಮಾಧ್ಯಮ ತರಬೇತಿ ನೀಡಿ ಇಂಗ್ಲಿಷ್‌ ಶಾಲೆಗಳಲ್ಲಿ ಪಾಠ ಮಾಡಲು ಹಚ್ಚುತ್ತಿದೆ. ಕನ್ನಡ ಮಾಧ್ಯಮದ ಶಿಕ್ಷಕ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಬಹುದೇ? ಒಂದು ವೇಳೆ ನೀಡಿದರೂ ಆಂಗ್ಲ ಮಾಧ್ಯಮ ಪಾಠಕ್ಕೆ ನ್ಯಾಯ ದೊರಕಿಸಲು ಸಾಧ್ಯವೇ? ಎಂಬ ಪ್ರಶ್ನೆ ಪಾಲಕರಲ್ಲಿ  ಎದುರಾಗಿದೆ. ರಾಜ್ಯ ಸರಕಾರದ ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆರಂಭದಿಂದ ನಮ್ಮ ಮಗುವಿಗೂ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯುತ್ತದೆ ಎಂದು ಸಂತಸಪಟ್ಟಿದ್ದ ಬಡ, ಮಧ್ಯಮ ವರ್ಗಗಳ ಕುಟುಂಬಗಳ ಕನಸಿಗೆ ತಣ್ಣೀರೆರಚಿದಂತಾಗಿದೆ.

ಇಂಗ್ಲಿಷ್‌ ಮಾಧ್ಯಮಕ್ಕೆ ಪ್ರತ್ಯೇಕ ಟೀಚರ್‌ ಇಲ್ಲ. ಇದ್ದವರಿಗೆ ಟ್ರೇನಿಂಗ್‌ ಕೊಟ್ಟಿದ್ದೇವೆ. ಇಂಗ್ಲಿಷ್‌ ಶಿಕ್ಷಕರ ನೇಮಕಾತಿ ಸರಕಾರ
ಹಂತದಲ್ಲಿ ನಡೆಯಬೇಕಿದೆ. ಅತಿಥಿ ಶಿಕ್ಷಕರನ್ನು ಕೊಡುತ್ತಿದ್ದೇವೆ. ಸದ್ಯಕ್ಕೆ ಟೀಚರ್‌ ಕೊರತೆ ಇಲ್ಲ.

ಮೋಹನಕುಮಾರ ಹಂಚಾಟೆ, 
ಉಪ ನಿರ್ದೇಶಕರು, ಚಿಕ್ಕೋಡಿ.

ಸರಕಾರ ಕೂಡಲೇ ಇಂತಹ ಅವೈಜ್ಞಾನಿಕ ಕ್ರಮಗಳನ್ನು ಕೈ ಬಿಡಬೇಕು. ಪ್ರತ್ಯೇಕ ಆಂಗ್ಲ ಭಾಷಾ ಶಿಕ್ಷಕರ ನೇಮಕ ಮಾಡಬೇಕು.
ಸೊರಗುತ್ತಿರುವ ಆಂಗ್ಲ ಮಾಧ್ಯಮ ಸರಕಾರಿ ಶಾಲೆಗಳಿಗೆ ಜೀವ ತುಂಬಿ ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು.
ಹಣಮಂತ ಪಡಸಲಗಿ, ಪಾಲಕರು, ಬಾಡಗಿ.

*ಜಗದೀಶ ತೆಲಸಂಗ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.