ದೇಶದಲ್ಲಿಯೇ ಇತಿಹಾಸ ನಿರ್ಮಿಸಿದ ಪಕ್ಷ ಕಾಂಗ್ರೆಸ್‌


Team Udayavani, Apr 22, 2019, 2:13 PM IST

bel-3

ರಾಮದುರ್ಗ: ಕಳೆದ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ, ದೇಶದ ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಕೇವಲ ಚುನಾವಣೆಗಾಗಿ ಹುಟ್ಟಿಕೊಳ್ಳದೆ ದೇಶದಲ್ಲಿಯೇ ಇತಿಹಾಸ ನಿರ್ಮಿಸಿದ ಪಕ್ಷ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಜಿ. ನಂಜಯ್ಯಮಠ ಹೇಳಿದರು.

ತಾಲೂಕಿನ ಕಟಕೋಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಡಾ| ವಿ.ಎಸ್‌. ಸಾಧುನವರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್‌ನ ಕೊಡುಗೆ ಏನು ಇಲ್ಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ನ ಬಹುತೇಕರು ತಮ್ಮ ಪ್ರಾಣ, ಜೀವನ ತ್ಯಾಗ ಮಾಡಿದ್ದಾರೆ. ಉಳುವವನೆ ಭೂಮಿ ಒಡೆಯ ಕಾನೂನು ರಚಿಸಿ ತುಳಿತಕ್ಕೆ ಒಳಗಾದವರ ಏಳ್ಗೆಗಾಗಿ ವಿವಿಧ ಯೋಜನೆಗಳನ್ನು ಜಾರಿ ಮಾಡಿದೆ. ಬ್ಯಾಂಕ್‌ಗಳ ರಾಷ್ಟ್ರೀಕರಣ, ರಸ್ತೆ, ನೀರಾವರಿ, ವಿಶ್ವವಿದ್ಯಾಲಯಗಳು, ಅಣೆಕಟ್ಟು, ರೈಲು ಅಭಿವೃದ್ಧಿಗಳು ಕಾಂಗ್ರೆಸ್‌ನ ಕೊಡುಗೆಯಾಗಿವೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲವನ್ನು ತ್ಯಾಗ ಮಾಡಿದ್ದಾರೆ ಎಂದು ಬಿಜೆಪಿಯವರು ಬೊಬ್ಬೆ ಹಾಕುತ್ತಿದ್ದಾರೆ. ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದ ಮೋದಿ ದೇಶದ ಪ್ರಧಾನಿಯಾಗಿದ್ದಾರೆ. ದೇಶಕ್ಕಾಗಿ ಅವರ ತ್ಯಾಗ ಏನೂ ಇಲ್ಲ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿ ಮಾಡಿ ಎಲ್ಲ ವರ್ಗದ ಜನರು ಅಧಿಕಾರದಲ್ಲಿ ಇರುವಂತೆ ನೋಡಿಕೊಂಡಿದ್ದು ಕಾಂಗ್ರೆಸ್‌ ಪಕ್ಷದ ಸಾಧನೆ. ಇದು ಸಮತಾವಾದ, ಸಮಾಜವಾದ. ಆದರೆ ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡುವ ಬಿಜೆಪಿ ದಲಿತರ ಮತಗಳನ್ನು ಕೇಳುವ ಹಕ್ಕು ಹೊಂದಿಲ್ಲ ಎಂದು ಹೇಳಿದರು.

ಅಭ್ಯರ್ಥಿ ಡಾ| ವಿ.ಎಸ್‌. ಸಾಧುನವರ ಮಾತನಾಡಿ, ದೇಶದಲ್ಲಿ ಕಳೆದ 60 ವರ್ಷದ ಆಡಳಿತದಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸಮಾಜ ಸೇವೆ ಸಲ್ಲಿಸಲು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ತಮ್ಮನ್ನು ಗೆಲ್ಲಿಸಲು ಮನವಿ ಮಾಡಿದರು.

ಮಾಜಿ ಶಾಸಕ ಅಶೋಕ ಪಟ್ಟಣ ಮಾತನಾಡಿ, ರಾಮದುರ್ಗ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಸಮಯದಲ್ಲಿ ಮತದಾರರ ತಪ್ಪಿನಿಂದಾಗಿ ತಮ್ಮ ಸೋಲು ಆಗಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷದ ಸಂಸದರು ಇರಲು ಪಕ್ಷಕ್ಕೆ ಮತ ನೀಡಿ ಸಹಕರಿಸಬೇಕು. ಇಬ್ಬರೂ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಜೋಡೆತ್ತಿನಂತೆ ಶ್ರಮಿಸುವುದಾಗಿ ಹೇಳಿದರು.

ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷ ಪಿ.ಎಫ್‌. ಪಾಟೀಲ, ಉಸ್ತುವಾರಿ ವಿದ್ಯಾ ಹಿರೇಮಠ, ಮಹೇಶ ದೇಸಾಯಿ, ಬಿ.ಎಸ್‌. ನಾಯಕ, ಪರಪ್ಪ ಜಂಗವಾಡ ಸೇರಿದಂತೆ ಅನೇಕರು ಮಾತನಾಡಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.