ಅತ್ತ ಅಧಿವೇಶನ, ಇತ್ತ ಟ್ರಾಫಿಕ್ ಜಂಜಾಟ
Team Udayavani, Dec 12, 2018, 4:47 PM IST
ಬೆಳಗಾವಿ: ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಹಿರಿಯ ಅಧಿಕಾರಿಗಳ ಭದ್ರತೆ ನೆಪದಲ್ಲಿ ನಗರ ಪೊಲೀಸರು ಉದ್ದೇಶಪೂರ್ವಕವಾಗಿ ಗಂಟೆ ಗಟ್ಟಲೇ ರಸ್ತೆಗಳನ್ನು ಬಂದ್ ಮಾಡುತ್ತಿದ್ದಾರೆ ಎಂದು ನಾಗರಿಕರು ಹಾಗೂ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಹೊರ ಭಾಗಗಳಿಂದ ಆಗಮಿಸುವ ವಾಹನಗಳ ನಿಲುಗಡೆಗೆ ಜಾಗ ಕಲ್ಪಿಸಿದರೆ ನಗರದಲ್ಲಿ ಸಾಮಾನ್ಯ ವಾಹನ ಸಂಚಾರ ಯಾವ ರೀತಿ ಇರಬೇಕು. ಯಾವ ರಸ್ತೆ ಮೂಲಕ ಸಂಚರಿಸಬೇಕು ಎಂಬ ಮಾಹಿತಿಯನ್ನು ಬೆಳಗಾವಿ ಟ್ರಾಫಿಕ್ ಪೊಲೀಸರು ಸಾರ್ವಜನಿಕರಿಗೆ ತಿಳಿಸಿಲ್ಲ. ಇದರಿಂದ ವಿಐಪಿಗಳ ಆಗಮನ ವೇಳೆ ಕಿರಿದಾದ ರಸ್ತೆಯಲ್ಲಿ ಭಾರೀ ವಾಹನಗಳ ದಟ್ಟಣೆಯೊಂದಿಗೆ ಪ್ರತಿಭಟನೆಗೆ ಆಗಮಿಸುತ್ತಿರುವ ವಾಹನಗಳ ಜತೆಗೆ ಇತರರ ವಾಹನಗಳು ಸಾಲು ಸರದಿಯಲ್ಲಿ ನಿಂತು ಗಂಟೆಗಟ್ಟಲೇ ಕಾಯುವ ಪರಿಸ್ಥತಿ ಎದುರಾಗಿದೆ.
ಎಲ್ಲೆಲ್ಲಿ ಟ್ರಾಫಿಕ್: ಬಸ್ ನಿಲ್ದಾಣ ಬಳಿ, ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತ, ಕಾಲೇಜು ರಸ್ತೆ, ಜಿಲ್ಲಾ ಆಸ್ಪತ್ರೆ ರಸ್ತೆ, ಗಾಂಧಿ ನಗರ, ಮಜಗಾಂವ, ಬೋಗಾರವೇಸ್, ಬಿಮ್ಸ್ ರಸ್ತೆಗಳಲ್ಲಿ ವಾಹನ ಸವಾರರು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಸಂಚಾರ ದಟ್ಟಣೆ ಎದುರಿಸಬೇಕಾಗಿದೆ.
ಬಸ್ ಇಲ್ಲದೇ ಪರದಾಡಿದ ಪ್ರಯಾಣಿಕರು: ಬೆಳಗ್ಗೆ ಬೇರೆ ಊರುಗಳಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರು ತಂತಮ್ಮ ಪ್ರದೇಶಗಳಿಗೆ ತೆರಳಲು ಸಂಚರಿಸಲು ಸಿಟಿ ಬಸ್ ನಿಲ್ದಾಣಕ್ಕೆ ಬಂದರೆ ಅನಿಗೋಳ, ಮಚ್ಚೆ, ಸಂತಿ ಬಸ್ತವಾಡ, ನಾವಗೆ ,ಕರ್ಲೆ ಗ್ರಾಮಕ್ಕೆ ಸಂಚರಿಸುವ ಬಸ್ಗಳು ಇಲ್ಲದೇ ಪ್ರಯಾಣಿಕರು ಆಟೋಗಳತ್ತ ಮುಖ ಮಾಡುವಂತಾಯಿತು.
ಅಜಿತ್ ಶಿರಗಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ