ಕರ್ನಾಟಕ ಇತಿಹಾಸದಲ್ಲಿ 12ನೇ ಶತಮಾನ ಸುವರ್ಣ ಯುಗ

ಸಮಾಜ ಸೇವೆಯೇ ದೇವರ ಸೇವೆ ಎಂದು ಮನಗಂಡು ಅವರು ಸಮಾಜ ಸೇವೆ ಮಾಡಿದರು.

Team Udayavani, Oct 10, 2022, 6:42 PM IST

ಕರ್ನಾಟಕ ಇತಿಹಾಸದಲ್ಲಿ 12ನೇ ಶತಮಾನ ಸುವರ್ಣ ಯುಗ

ಮುದ್ದೇಬಿಹಾಳ: ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನ ಸುವರ್ಣ ಯುಗ ಎನ್ನಿಸಿಕೊಂಡಿದೆ. ಅದು ಶರಣರ ಯುಗವಾಗಿತ್ತು. ವಚನ ಸಾಹಿತ್ಯ ಎನ್ನುವ ವಿಶಿಷ್ಟ ಸಾಹಿತ್ಯದ ಪ್ರಾಕಾರ ಕಣ್ಣು ತೆರೆದುಕೊಂಡ ಕಾಲ ಅದಾಗಿತ್ತು. ವಚನ ಸಾಹಿತ್ಯವು ವಿಶ್ವ ಸಾಹಿತ್ಯ ಪ್ರಪಂಚಕ್ಕೆ ಕನ್ನಡ ಸಾಹಿತ್ಯ ಪರಂಪರೆ ನೀಡಿದ ಅಮೂಲ್ಯ ರತ್ನ ಎನ್ನಿಸಿಕೊಂಡಿದೆ ಎಂದು ವಿಜಯಪುರದ ಅಂಕಣಕಾರ, ಸಾಹಿತಿ ಮಂಜುನಾಥ ಜುನಗೊಂಡ ಹೇಳಿದರು.

ಇಲ್ಲಿನ ಎಂಜಿವಿಸಿ ಡಿಇಡಿ ಕಾಲೇಜಿನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್‌, ಎಸ್‌ಜಿವಿಸಿ ವಿದ್ಯಾಪ್ರಸಾರಕ ವಿಶ್ವಸ್ಥ ನಿಧಿ ಸಹಯೋಗದೊಂದಿಗೆ ಏರ್ಪಡಿಸಿದ್ದ ಲಿಂ| ವಾಸಂತಿಬಾಯಿ ಮತ್ತು ಡಾ| ಸಿದ್ದವೀರಪ್ಪ ಜಿಗಜಿನ್ನಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಯುವ ಜನತೆಗಾಗಿ ವಚನ ಸಾಹಿತ್ಯ ವಿಷಯ ಕುರಿತು ಅವರು ಅನುಭಾವ ನಡೆಸಿಕೊಟ್ಟರು.

ಸಮಾನತೆ, ಕ್ಷೇಮಾಭ್ಯುದಯ, ಕಾಯಕ, ರಾಮರಾಜ್ಯದ ಪರಿಕಲ್ಪನೆ, ಶಾಂತಿಯ ಸಹಬಾಳ್ವೆ ಇತ್ಯಾದಿ ಅನೇಕ ಅಂಶಗಳನ್ನು ವಚನ ಸಾಹಿತ್ಯವು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿದೆ. ಬಸವಣ್ಣನವರನ್ನು ಕೇವಲ ವೇದಿಕೆಗೆ ಮತ್ತು ಅಲಂಕಾರಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ. ಇದು ನಿಲ್ಲಬೇಕು.

ಬಸವಣ್ಣ ಮತ್ತು ಅಂಬೇಡ್ಕರ್‌ ಅವರ ಮೂರ್ತಿಗಳನ್ನು ವಿಧಾನಸೌಧದ ಹೊರಗೆ ನಿಲ್ಲಿಸಿದ್ದೇವೆಯೇ ಹೊರತು ಅವರ ತತ್ವಗಳನ್ನು ಕಲಿತುಕೊಂಡಿಲ್ಲ. ಕ್ಷಮಿಸಿಬಿಡು
ಬಸವಣ್ಣ ಎಂದು ಹೇಳುವಷ್ಟು ಕಾರ್ಯಗಳನ್ನು ಬಸವಣ್ಣನವರ ಹೆಸರಿನಲ್ಲಿ ಮಾಡುತ್ತಿದ್ದೇವೆ. ಅವರ ತತ್ವಗಳನ್ನು ನಮ್ಮ ಅಂತರಾತ್ಮದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಶ್ರಮ ಸಾರ್ಥಕವಾಗುತ್ತದೆ ಎಂದರು.

ಶಿಕ್ಷಕ, ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ವಾಸಂತಿಬಾಯಿ ಮತ್ತು ಸಿದ್ದವೀರಪ್ಪನವರು ತ್ಯಾಗ ಜೀವಿಗಳಾಗಿದ್ದರು. ಆಧುನಿಕ ಜಗತ್ತಿಗೆ ವಾಸಂತಿಬಾಯಿಯವರು ಮಾದರಿಯಾಗಿದ್ದಾರೆ. ಮಹಿಳಾ ಲೋಕಕ್ಕೆ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಅತಿಥಿಯಾಗಿದ್ದ ಎಸ್‌ಜಿವಿಸಿ ವಿದ್ಯಾಪ್ರಸಾರಕ ವಿಶ್ವಸ್ಥ ನಿಧಿಯ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಜಿಗಜಿನ್ನಿಯವರ ಮನೆತನ ವೈದ್ಯಕೀಯ ಮನೆತನವಾಗಿ ಸಮಾಜಕ್ಕೆ ಔಚಿತ್ಯಪೂರ್ಣ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆಯೇ ದೇವರ ಸೇವೆ ಎಂದು ಮನಗಂಡು ಅವರು ಸಮಾಜ ಸೇವೆ ಮಾಡಿದರು. ಎಸ್‌ಜಿವಿಸಿ ಟ್ರಸ್ಟ್‌ ಧರ್ಮದರ್ಶಿಗಳಾಗಿ ಸಲ್ಲಿಸಿದ ಅವರ ಸೇವೆ ಮರೆಯಲಾಗದಂಥದ್ದು ಎಂದರು.

ಅಧ್ಯಕ್ಷತೆ ವಹಿಸಿದ್ದ ದತ್ತಿ ದಾನಿ, ಬಿಎಲ್‌ಡಿಇ ಡೀಮ್ಡ್ ವಿವಿಯ ವಿಶ್ರಾಂತ ಅಧಿಕಾರಿ ಡಾ| ಸತೀಶ ಜಿಗಜಿನ್ನಿ ಮಾತನಾಡಿ, ವಚನಗಳು ಇಂದಿಗೂ ಪ್ರಸ್ತುತವಾಗಿವೆ. ಯುವಕರಲ್ಲಿ ವೈಚಾರಿಕ ಮನೋಭಾವ ಮತ್ತು ಅವರ ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಹಿರಿಯರಾದ ಬಸವರಾಜ ಮೋಟಗಿ ಅವರು ಬಸವ ಭಾವಪೂಜೆ ನೆರವೇರಿಸಿದರು. ಎಂಜಿವಿಸಿ ಕಾಲೇಜಿನ ಆಡಳಿತಾಧಿಕಾರಿ ಎ.ಬಿ. ಕುಲಕರ್ಣಿ, ವಿರೂಪಾಕ್ಷಪ್ಪ ತಡಸದ, ಎಸ್‌.ಎಸ್‌. ತಳವಾರ ವೇದಿಕೆಯಲ್ಲಿದ್ದರು. ಶಸಾಪ ಅಧ್ಯಕ್ಷ ಬಸವರಾಜ ನಾಲತವಾಡ ಅವರು ವಾಸಂತಿಬಾಯಿ ಜಿಗಜಿನ್ನಿ ಅವರ ಜೀವನ, ಸಾಧನೆ ಕುರಿತು ಮಾತನಾಡಿದರು.

ಬಿ.ಎಸ್‌.ಬೋಳಿಶೆಟ್ಟಿ, ಎಸ್‌.ಬಿ.ಸುತಾರ, ಎಸ್‌ .ಎ.ಜಕ್ಕೇರಾಳ, ಸವಿತಾ ವಿಜಯಪುರ, ಜೆ.ಎಸ್‌. ರಾಮೋಡಗಿ, ಕೆ.ಕೆ.ಹಿರೇಕುರುಬರ, ಪಿ.ಎಚ್‌. ಉಪ್ಪಲದಿನ್ನಿ, ಕೆ.ಎಲ್‌.ಅವಟಿ, ಎಸ್‌.ಎಸ್‌.ಹುನಗುಂದ, ಬಸವರಾಜ ಲಿಂಗದಳ್ಳಿ, ಸಂಗಣ್ಣ ಕಟ್ಟಿ, ಎಸ್‌.ಎಚ್‌ .ಪಾಟೀಲ, ಎಸ್‌.ಎಸ್‌.ಬಡಿಗೇರ, ಬಿ.ಎಂ.ರಾಂಪುರ, ಎಂ.ಬಿ.ಗುಡಗುಂಟಿ, ಎಸ್‌.ಎಸ್‌.ಬೇವಿನಗಿಡದ ಇದ್ದರು. ಅನುಭಾವ ನಡೆಸಿಕೊಟ್ಟ ಜುನಗೊಂಡ ಅವರನ್ನು ಸನ್ಮಾನಿಸಲಾಯಿತು.

ಸಂಗಣ್ಣ ಶಿವಣಗಿ ಮತ್ತು ಮಹಾಲಿಂಗಪ್ಪ ಹೂಗಾರ ಸಂಗೀತ ಸೇವೆ ನೀಡಿದರು. ಪ್ರತಿಭಾ ಹಿರೇಮಠ ಪ್ರಾರ್ಥಿಸಿದರು. ಸಿ.ಜಿ.ನಾಗರಾಳ ಸ್ವಾಗತಿಸಿದರು. ಬಾಪುಗೌಡ ಪಾಟೀಲ, ಎಚ್‌.ಡಿ. ನದಾಫ್‌ ಕಾರ್ಯಕ್ರಮ ನಿರ್ವಹಿಸಿದರು.

ವಾಸಂತಿಬಾಯಿ ಜಿಗಜಿನ್ನಿ ಅವರು ಸ್ಕೌಟ್ಸ್‌ ಮತ್ತು ಗೈಡ್ಸ್‌ ಕ್ಷೇತ್ರದಲ್ಲಿ ಅಸಿಸ್ಟಂಟ್‌ ಕಮೀಷನರ್‌ ಫಾರ್‌ ಗೈಡ್ಸ್‌ ಆಗಿ ಸೇವೆ ಸಲ್ಲಿಸಿ ಸಿಲ್ವರ್‌ ಸ್ಟಾರ್‌ ಮತ್ತು ಎಲಿಫಂಟ್‌ ಸ್ಟಾರ್‌ನಂತಹ ಉನ್ನತ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.
ಬಸವರಾಜ ನಾಲತವಾಡ,
ಅಧ್ಯಕ್ಷರು, ಶರಣ ಸಾಹಿತ್ಯ ಪರಿಷತ್‌, ಮುದ್ದೇಬಿಹಾಳ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

belagavBelagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

Belagavi: ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.