ಸುವರ್ಣ ವಿಧಾನಸೌಧದಲ್ಲಿ ಸಿಎಂ ಜನತಾದರ್ಶನ
Team Udayavani, Sep 13, 2018, 6:15 AM IST
ಬೆಳಗಾವಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೆ.15 ರಂದು ನಗರಕ್ಕೆ ಆಗಮಿಸಲಿದ್ದು, ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
15ರಂದು ಬೆಳಗ್ಗೆ 10.10ಕ್ಕೆ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ 10.40ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು, ರಸ್ತೆ ಮೂಲಕ ಕರ್ನಾಟಕ ಲಾ ಸೊಸೈಟಿಯ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 12.30 ಗಂಟೆಗೆ ಸಮಾರಂಭದ ಸ್ಥಳದಿಂದ ರಸ್ತೆ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ, ಮಧ್ಯಾಹ್ನ 1 ಗಂಟೆಗೆ ರಾಷ್ಟ್ರಪತಿಗಳನ್ನು ಬೀಳ್ಕೊಡುವರು. ಮಧ್ಯಾಹ್ನ 1.30 ಕ್ಕೆ ನೆಹರು ನಗರದಲ್ಲಿರುವ ಕನ್ನಡ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮುಖ್ಯಮಂತ್ರಿಗಳು 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸುವರ್ಣ ವಿಧಾನಸೌಧದಲ್ಲಿ ಸಾರ್ವಜನಿಕರ ಭೇಟಿ, ಕುಂದು ಕೊರತೆಗಳ ಆಲಿಕೆ ಹಾಗೂ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ