ಅಸಮಾಧಾನದ ಲಾಭದತ್ತ ಕಾಂಗ್ರೆಸ್‌ ಚಿತ್ತ

|ಬಿಜೆಪಿ ನಾಯಕರಿಗೆ ಹೆಚ್ಚಿನ ಮತಗಳ ಅಂತರದ ವಿಶ್ವಾಸ |ಅಂಗಡಿ ವಿರುದ್ಧ ಜನರ ಅಸಂತೋಷವೇ ಕೈ ಬಲ

Team Udayavani, May 7, 2019, 11:45 AM IST

belegavi-tdy-01
ಬೆಳಗಾವಿ: ಇತಿಹಾಸ ಪ್ರಸಿದ್ಧ ಹಾಗೂ ಶಕ್ತಿ ದೇವತೆ ಏಳು ಕೊಳ್ಳದ ಯಲ್ಲಮ್ಮ ದೇವಿಯ ವಿಜಯದ ಆಶೀರ್ವಾದ ಯಾರ ಮೇಲೆ? ಅಲೆ ಇಲ್ಲವೇ ಅಸಮಾಧಾನದ ಲಾಭ ಯಾರಿಗೆ. ಇದು ಲೋಕಸಭೆ ಚುನಾವಣೆಯ ಮತದಾನದ ನಂತರ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕುತೂಹಲದ ಚರ್ಚೆ ಹಾಗೂ ಲೆಕ್ಕಾಚಾರ.

ಮತ ಎಣಿಕೆ ದಿನ ಬರುವವರೆಗೆ ಕ್ಷೇತ್ರದಲ್ಲಿ ಈ ಚರ್ಚೆ ನಡೆದಿರುವುದು ಕಾಣುತ್ತದೆ. ಒಂದು ಕಡೆ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸುತ್ತಾರೆ ಎಂಬ ಮಾತುಗಳು ಕೇಳಿಬಂದರೆ ಇನ್ನೊಂದು ಕಡೆ ಕಾಂಗ್ರೆಸ್‌ ಕಳೆದ ಸಲಕ್ಕಿಂತ ಈ ಸಲ ಹೆಚ್ಚಿನ ಮತಗಳನ್ನು ಗಳಿಸಲಿದೆ. ಪಕ್ಷದ ಅಭ್ಯರ್ಥಿ ಸಾಧುನವರ ಸವದತ್ತಿಯಿಂದ ಒಳ್ಳೆಯ ಮುನ್ನಡೆ ಪಡೆಯಲಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಮತದಾನ ನಡೆದ ನಂತರ ಕ್ಷೇತ್ರದ ಜನರ ಮೂಡ್‌ ಹೇಗಿದೆ ಎಂದು ತಿಳಿಯಲು ಒಂದು ಸುತ್ತು ಓಡಾಡಿದರೆ ಯುವ ಸಮುದಾಯ ಬಹುತೇಕ ಮೋದಿ ಅಲೆಗೆ ಮಾರು ಹೋಗಿರುವುದು ಕಂಡುಬಂತು. ಅದರ ಜೊತೆಗೆ ಕಾಂಗ್ರೆಸ್‌ನ ನಿಷ್ಠಾವಂತ ಮತದಾರರು ಈ ಬಾರಿಯೂ ಸಹ ತಮ್ಮ ನಿಷ್ಠೆ ಬದಲಿಸದೇ ಇರುವುದು ವಿಶೇಷವಾಗಿದೆ. ಇದೇ ಆಧಾರದ ಮೇಲೆ ಕಾಂಗ್ರೆಸ್‌ ಹಾಗೂ ಬಿಜೆಪಿ ವಲಯದಲ್ಲಿ ಮುನ್ನಡೆ ಗಳಿಸುವ ಲೆಕ್ಕಾಚಾರ ಜೋರಾಗಿ ನಡೆದಿದೆ..

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಸಹಜವಾಗಿಯೇ ಅಭ್ಯರ್ಥಿ ಸುರೇಶ ಅಂಗಡಿ ಹೆಚ್ಚಿನ ಮತಗಳನ್ನು ಪಡೆಯಲಿದ್ದಾರೆ. ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅಲೆ ಸಹ ಎಲ್ಲ ಕಡೆ ಇದ್ದು ಇದು ಮತದಾರರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ನಮಗೆ ಹೆಚ್ಚಿನ ಮತಗಳ ಅಂತರ ಸಿಗಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಒಟ್ಟು ಮತದಾರರು 1,94,081

ಮತ ಚಲಾಯಿಸಿದವರು 1,36,407

ಪುರುಷರು 72,034

ಮಹಿಳೆಯರು 64,373

ಆದರೆ ಕಾಂಗ್ರೆಸ್‌ ನಾಯಕರು ಹೇಳುವುದೇ ಬೇರೆ. ಬಿಜೆಪಿ ಅಭ್ಯರ್ಥಿಯ ಬಗ್ಗೆ ಕ್ಷೇತ್ರದ ಜನರಲ್ಲಿ ಅಸಮಾಧಾನ ಇದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಸದರು ತಾಲೂಕಿಗೆ ಬಂದಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಬಹಳ ಕಡಿಮೆ. ಹೀಗಾಗಿ ಜನರು ಈ ಬಾರಿ ಬಿಜೆಪಿಯಿಂದ ದೂರ ಉಳಿದಿದ್ದರು. ಅದು ನಮಗೆ ಅನುಕೂಲವಾಗಿದೆ ಎನ್ನುತ್ತಾರೆ ಕಾಂಗ್ರೆಸ್‌ ಮುಖಂಡರು.

ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರವಾಗಿ ಸುಮಾರು 86 ಸಾವಿರ ಮತದಾರರು ಇದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈ ಮತಗಳು ನಮ್ಮವರ ಬಂಡಾಯದಿಂದ ಹಂಚಿಹೋಗಿದ್ದವು. ಈ ಎಲ್ಲ ಮತಗಳು ಈಗ ಒಂದಾಗಿ ಕಾಂಗ್ರೆಸ್‌ಗೆ ಬಂದಿವೆ. ಹೀಗಾಗಿ ನಮ್ಮ ಅಭ್ಯರ್ಥಿ ಸಾಧುನವರ ಮುನ್ನಡೆ ಪಡೆಯುತ್ತಾರೆ ಎಂಬುದು ಕಾಂಗ್ರೆಸ್‌ ನಾಯಕರ ವಿಶ್ವಾಸದ ಮಾತು.

.ಕೇಶವ ಆದಿ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.