ಭಾರತೀಯ ಸೈನ್ಯ ಸೇರಲು ಯುವತಿಯರ ಉತ್ಸಾಹ


Team Udayavani, Aug 3, 2019, 11:01 AM IST

bg-tdy-2

ಬೆಳಗಾವಿ: ಸೇನಾ ಭರ್ತಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಯುವತಿಯರು.

ಬೆಳಗಾವಿ: ಸೇನೆ ಸೇರಲು ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯಷ್ಟೇ ಸಾಕಾಗಿದ್ದರೂ, ಎಂಜಿನಿಯರಿಂಗ್‌ ಅಲ್ಲದೇ ವಿವಿಧ ಪದವಿ ಪಡೆದವರೂ ದೇಶ ಸೇವೆಯ ಕಿಚ್ಚು ಹಚ್ಚಿಕೊಂಡು ಆಯ್ಕೆಗಾಗಿ ಸಾಲು ಹಚ್ಚಿದ್ದಾರೆ.

ಎಂಜಿನಿಯರಿಂಗ್‌, ಬಿಎಸ್ಸಿ, ಬಿಕಾಂ ಕಲಿಯುತ್ತಿರುವ ಯುವತಿಯರು ಐಷಾರಾಮಿ ಉದ್ಯೋಗಗಳ ಬೆನ್ನು ಹತ್ತದೇ ಭಾರತೀಯ ಸೈನ್ಯ ಸೇರಲು ಕಾತುರರಾಗಿದ್ದಾರೆ.

ಬೆಳಗಾವಿಯ ಮರಾಠಾ ಲಘುಪದಾತಿ ದಳದ ಶಿವಾಜಿ ಮೈದಾನದಲ್ಲಿ ನಡೆಯುತ್ತಿರುವ ದೇಶದ ಮೊದಲ ಮಹಿಳಾ ಮಿಲಿಟರಿ ಪೊಲೀಸ್‌ ಭರ್ತಿಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಬಂದವರು ಎಸ್ಸೆಸ್ಸೆಲ್ಸಿ, ಪಿಯುಸಿ ಅಲ್ಲದೇ ಡಿಗ್ರಿ ಮಾಡುತ್ತಿರುವವರೂ ಇದ್ದಾರೆ. ಎಂಜಿನಿಯರ್‌, ಡಾಕ್ಟರ್‌, ಪ್ರೊಫೆಸರ್‌ ವೃತ್ತಿಗಿಂತ ಗಡಿ ರಕ್ಷಣೆ ಕಾರ್ಯ ಇವರನ್ನು ಸೆಳೆದಿದೆ.

ಕೇರಳದ ನಮ್ರತಾ ಸಿವಿಲ್ ಇಂಜಿನಿಯರಿಂಗ್‌ ಓದುತ್ತಿದ್ದಾಳೆ. ತಮಿಳುನಾಡಿನ ಕಾಲೇಜಿನಲ್ಲಿ ಕಲಿಯುತ್ತಿರುವ ಈಕೆಗೆ ಚಿಕ್ಕವಳಿದ್ದಾಗಿನಿಂದಲೂ ಸೈನಿಕರ ಬಗ್ಗೆ ಅತೀವ ಅಭಿಮಾನ. ಸೇನೆ ಸೇರಬೇಕೆಂಬ ಬಯಕೆ ಇದ್ದರೂ ಅವಕಾಶ ಇಲ್ಲದ್ದಕ್ಕೆ ಸುಮ್ಮನಿದ್ದೆ. ಈಗ ಮಹಿಳೆಯರಿಗೂ ಅವಕಾಶ ಕಲ್ಪಿಸಿದ್ದರಿಂದ ದೂರದ ಕೇರಳದಿಂದ ಸೈನ್ಯ ಪ್ರವೇಶ ಪರೀಕ್ಷೆಗೆ ಬಂದಿರುವುದಾಗಿ ಹೇಳುತ್ತಾಳೆ.

ಎರಡು ದಿನಗಳಿಂದ ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿರುವ ಈ ಯುವತಿಯರಿಗೆ ಸೈನ್ಯ ಪರೀಕ್ಷೆಯ ಮೊದಲ ಅನುಭವ ಇದಾಗಿದೆ. ಪಾಲಕರೊಂದಿಗೆ ಬಂದವರಲ್ಲಿ ಕೆಲ ಯುವತಿಯರು ದೈಹಿಕ ಪರೀಕ್ಷೆಯಲ್ಲಿ ಪಾಸಾಗಿ ವೈದ್ಯಕೀಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ. ಸೇನೆಗೆ ಸೇರಲು ಇನ್ನೆರಡೇ ಹೆಜ್ಜೆ ಬಾಕಿ ಎಂದು ಹಿರಿ ಹಿರಿ ಹಿಗ್ಗುತ್ತಿದ್ದಾರೆ.

ಕೇರಳದ ಅಮಿತಾ ಆರ್‌.ಎಚ್., ನೀತು ಪ್ರಸಾದ, ಅತುಲ್ಯಾ ಪಿಯುಸಿ ಮುಗಿಸಿ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಬಿಎಸ್ಸಿ ಪ್ರಥಮ ಹಾಗೂ ದ್ವಿತೀಯ ವರ್ಷದಲ್ಲಿರುವ ಇವರಿಗೆ ದೇಶದ ಬಗ್ಗೆ ಅಪಾರ ಅಭಿಮಾನ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ನಮಗೆ ಶಿಕ್ಷಣ ಕೊಡಿಸುತ್ತಿದ್ದಾರೆ. ದೇಶ ಸೇವೆ ಮಾಡಿ ಊರಿಗೆ ಹಾಗೂ ದೇಶಕ್ಕೆ ಕೀರ್ತಿ ತಂದು ಕೊಡುವುದೇ ನಮ್ಮ ಉದ್ದೇಶ. ಹೀಗಾಗಿ ಅಷ್ಟೊಂದು ದೂರದಿಂದ ಬೆಳಗಾವಿಗೆ ಬಂದಿರುವುದಾಗಿ ಹೇಳುತ್ತಾರೆ.

ಎಮಿಥಾ, ಕರುಣಾ ಡಾರ್ವನ್‌, ದೇವಿಕಾ, ಐಶ್ವರ್ಯ ಹಾಗೂ ರಾಜಿ ಎಂಬವರೂ ದೈಹಿಕ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಸದ್ಯ ಬಿ.ಎ. ಹಾಗೂ ಬಿ.ಕಾಂ. ಕಲಿಯುತ್ತಿರುವ ಈ ಯುವತಿಯರಿಗೆ ಮೊದಲಿನಿಂದಲೂ ಆರ್ಮಿ ಸೇರಬೇಕೆಂಬ ಬಯಕೆ ಇತ್ತು. ಇಲ್ಲದಿದ್ದರೆ ಪೊಲೀಸರಾಗುವ ಆಸೆ ಹೊಂದಿದ್ದರು. ಇದೇ ಮೊದಲ ಸಲ ಭಾರತೀಯ ಸೇನೆಯಲ್ಲಿ ಮಹಿಳೆಯರನ್ನು ಆಹ್ವಾನಿಸಿದ್ದಕ್ಕೆ ಕಾಲ ಕೂಡಿ ಬಂತು ಎಂಬ ಸಂತಸ ವ್ಯಕ್ತಪಡಿಸುತ್ತಾರೆ.

ಸೇನೆಗೆ ಸೇರಲು ಬಂದವರಲ್ಲಿ ಬಹುತೇಕರು ಸುಮಾರು 2-3 ತಿಂಗಳಿಂದ ತಯಾರಿ ಮಾಡಿಕೊಂಡಿದ್ದರು. ಕೆಲವರು ತರಬೇತಿ ಕೇಂದ್ರಗಳಲ್ಲಿ, ಇನ್ನೂ ಕೆಲವರು ಸ್ವಂತ ಬಲದಿಂದ ಓಟ, ಉದ್ದ ಜಿಗಿತ, ಎತ್ತರ ಜಿಗಿತ ತರಬೇತಿ ಪಡೆದಿದ್ದರು. ಹೀಗಾಗಿ ಬಹುತೇಕ ವಿದ್ಯಾರ್ಥಿಗಳಲ್ಲಿ ದೈಹಿಕ ಪರೀಕ್ಷೆ ಅಷ್ಟೊಂದು ಕಠಿಣ ಆಗಿರಲಿಲ್ಲ. ಆ. 5ರವರೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.