ಅಂಗವಿಕಲ ಮಹಿಳೆ ಮನೆಗೇ ಬಂತು ಸೌಲಭ್ಯ
ಎರಡೂ ಕಾಲಿಲ್ಲದ ಮಹಿಳೆಗೆ ಜನತಾ ದರ್ಶನದಲ್ಲಿ ಸಿಕ್ತು ಅಭಯ
Team Udayavani, Jun 7, 2019, 2:13 PM IST
ಗೋಕಾಕ: ನಗರದ ಲಕ್ಷ್ಮೀ ಬಡಾವಣೆಯ ಅಂಗವಿಕಲೆ ಮಹಿಳೆಯ ಮನೆಗೆ ಭೇಟಿ ನೀಡಿದ ಅಧಿಕಾರಿಗಳು.
ಗೋಕಾಕ: ಸರಕಾರಿ ಅಧಿಕಾರಿಗಳ ಹೃದಯದಲ್ಲಿ ಮಾನವೀಯತೆ ಇದ್ದರೆ ನಿರ್ಗತಿಕರ ಕಣ್ಣೀರಿಗೆ ಪರಿಹಾರ ನಿಶ್ಚಿತ ಎನ್ನುವ ಹೃದಯ ಮಿಡಿಯುವ ಘಟನೆ ಗುರುವಾರ ನಡೆದಿದೆ.
ನಗರದ ಲಕ್ಷ್ಮೀ ಬಡಾವಣೆಯ ಸಣ್ಣ ಮನೆಯಲ್ಲಿ ಎರಡೂ ಕಾಲು ಇಲ್ಲದ ಅಂಗವಿಕಲ ಮಹಿಳೆ ಮಾಯಕ್ಕ ಅಭಿಜಿತ ಡೋಬಳೆ ತನ್ನ ಅತ್ತೆ ಕಸ್ತೂರಿ ಲಕ್ಷ್ಮಣ ಡೋಬಳೆ ಜೊತೆ ತನ್ನ ಎರಡು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಈ ಮಹಿಳೆಯ ಪತಿ ಬಿಟ್ಟು ಹೋಗಿದ್ದರಿಂದ ಕುಟುಂಬಕ್ಕೆ ತುತ್ತು ಅನ್ನಕ್ಕೂ ಗತಿಯಿಲ್ಲದಂತಾಗಿತ್ತು. ಅತ್ತೆ ಬೇರೆಯವರ ಮನೆ ಕಸ ಮುಸುರೆ ಮಾಡಿದ ಹಣದಲ್ಲಿಯೇ ಜೀವನ ಸಾಗಿಸುತ್ತಿದ್ದರು. ಈ ಅಂಗವಿಕಲ ಮಹಿಳೆಗೆ ಸರಕಾರದಿಂದ ಸಿಗುವ ಯಾವ ಸೌಲಭ್ಯವೂ ಇರಲಿಲ್ಲ. ಹೀಗಾಗಿ ಈಕೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿ ತನ್ನ ದುಃಖ ತೋಡಿಕೊಂಡಿದ್ದಳು.
ಇದಕ್ಕೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿ ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ತಿಳಿಸಿದಾಗ ಅವರು ಕೂಡಲೇ ಈ ಅಂಗವಿಕಲ ಮಹಿಳೆಯ ಮನೆಗೆ ಹೋಗಿ ಪರಿಶೀಲನೆ ನಡೆಸಿ ಅವಶ್ಯಕ ಕ್ರಮ ಕೈಗೊಳ್ಳಲು ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಆದೇಶ ನೀಡಿದ್ದರು.
ಈ ಆದೇಶದನ್ವಯ ಬೈಲಹೊಂಗಲ ಉಪವಿಭಾಗಾಧಿಕಾರಿ ಎಂ.ಪಿ. ಮಾರುತಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಜೊತೆ ಭೇಟಿ ನೀಡಿ ಈ ಮಹಿಳೆಗೆ ಅಂಗವಿಕಲ ಮಾಸಾಶನ, ಅತ್ತೆಗೆ ಸಂಧ್ಯಾ ಸುರಕ್ಷಾ ಮಾಸಾಶನ, ಪಡಿತರ ಚೀಟಿ ಸ್ಥಳದಲ್ಲಿಯೇ ಮಂಜೂರು ಮಾಡಿದರಲ್ಲದೇ, ಅಂಗವಿಕಲೆಯ 6 ವರ್ಷದ ಮಗನಿಗೆ ಬಿಸಿಎಂ ವಸತಿ ನಿಲಯದಲ್ಲಿ ಪ್ರವೇಶ ದೊರಕಿಸಿಕೊಟ್ಟರು. ನಗರಸಭೆಯಿಂದ ಮನೆ ನೀಡುವಂತೆ ಸೂಚನೆ ನೀಡಿದರು. ಇದಲ್ಲದೇ ಅಂಗವಿಕಲೆಯ ಪತಿ ಆಗಾಗ ಬಂದು ಕಿರುಕುಳ ನೀಡುತ್ತಿರುವ ಬಗ್ಗೆ ದೂರಿದ್ದರಿಂದ ಅವಶ್ಯ ಕ್ರಮ ಕೈಗೊಳ್ಳುವಂತೆಯೂ ಉಪವಿಭಾಗಾಧಿಕಾರಿ ಕಟ್ಟುನಿಟ್ಟಿನ ಆದೇಶ ನೀಡಿದರು. ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಗೋಪಾಲ ವಾಘಮೋಡೆ, ನಗರಸಭೆ ಪೌರಾಯುಕ್ತ ವಿ.ಎಸ್.ತಡಸಲೂರ, ತಾಲೂಕಾ ಬಿಸಿಎಂ ಅಧಿಕಾರಿ ಆರ್.ಕೆ.ಬಿಸಿರೊಟ್ಟಿ, ಆಹಾರ ಇಲಾಖೆಯ ಉಪತಹಶೀಲದಾರ ಎಂ.ಬಿ.ಚೌಧರಿ, ಕಂದಾಯ ನಿರೀಕ್ಷಕ ಎಸ್.ಬಿ. ಕಟ್ಟೀಮನಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ