ಶಾಸಕ ಶ್ರೀಮಂತ ಪಾಟೀಲ ಮನೆಗೆ ಪೊಲೀಸರ ಭೇಟಿ
Team Udayavani, Jul 19, 2019, 5:21 AM IST
ಚಿಕ್ಕೋಡಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರ ಅಪಹರಣ ಆರೋಪದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಸೂಚನೆ ಮೇರೆಗೆ ಅಥಣಿ ಡಿವೈಎಸ್ಪಿ ರಾಮಣ್ಣ ಬಸರಗಿ ನೇತೃತ್ವದ ಪೊಲೀಸರ ತಂಡ ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿತು.
ವಿಶ್ವಾಸಮತ ಯಾಚನೆ ಕುರಿತು ಚರ್ಚೆ ಮಾಡುವ ಸಂದರ್ಭದಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಆರೋಗ್ಯವಾಗಿದ್ದಾರೆ. ಆದರೆ, ಅವರನ್ನು ಅನಾರೋಗ್ಯದ ನೆಪವೊಡ್ಡಿ ಬಿಜೆಪಿಯವರು ಅಪಹರಣ ಮಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಆರೋಪ ಮಾಡಿದ್ದರು. ಈ ಹಿನ್ನೆಲ್ಲೆಯಲ್ಲಿ ಸ್ಪೀಕರ್ ರಮೇಶ ಕುಮಾರ್ ಅವರು, ಗೃಹ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ, ಅಥಣಿ ಪೊಲೀಸರು ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಶ್ರೀಮಂತ ಪಾಟೀಲ ಅವರಿಗೆ ಹೃದಯ ಕಾಯಿಲೆಯಿದ್ದು, ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಚಿಕ್ಕೋಡಿ ಎಎಸ್ಪಿ ಜಿ.ಕೆ.ಮಿಥುನಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?