ಶಿವಸೇನೆ ಮುಗಿಸಲು ಎನ್ ಸಿಪಿ ಮತ್ತು ಕಾಂಗ್ರೆಸ್ ಪ್ರಯತ್ನಿಸುತ್ತಿದೆ : ಸಂಜಯ್ ಪಾಟೀಲ್
ಠಾಕ್ರೆ ಅವರ ವಿಚಾರಧಾರೆಗಳಿಗೆ ತಿಲಾಂಜಲಿ...
Team Udayavani, Jun 25, 2022, 2:42 PM IST
ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ತಮ್ಮ ಅಧಿಕಾರದ ಆಸೆಗಾಗಿ ಬಾಳಾಸಾಹೇಬ ಠಾಕ್ರೆ ಅವರ ವಿಚಾರಧಾರೆಗಳಿಗೆ ತಿಲಾಂಜಲಿ ಇಟ್ಡಿದ್ದಾರೆ ಎಂದು ಬಿಜೆಪಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ನೇರ ಆರೋಪ ಮಾಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ, ಬಾಳಾಸಾಹೇಬ ಅವರು ಹಿಂದುತ್ವದ ವಿಚಾರಧಾರೆಗಳನ್ನು ಬಹಳ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದರು. ಆದರೆ ಈಗ ಅವರ ಪುತ್ರ ಉದ್ಧವ ಠಾಕ್ರೆ ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಮುಖ್ಯಮಂತ್ರಿ ಪದವಿ ಆಸೆಗಾಗಿ ತಂದೆಯವರ ವಿಚಾರಧಾರೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದರು.
ಇದನ್ನೂ ಓದಿ : ಮಹಾರಾಷ್ಟ್ರ ಸರ್ಕಾರ ಉರುಳಿಸಲು ಬಿಜೆಪಿ ಸಂಚು: ಜಿ.ಪರಮೇಶ್ವರ್
ಮಹಾರಾಷ್ಟ್ರ ದಲ್ಲಿ ಶಿವಸೇನೆ ಮುಗಿಸಲು ಎನ್ ಸಿ ಪಿ ಮತ್ತು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮೈತ್ರಿ ಸರಕಾರದಲ್ಲಿ ಶಿವಸೇನೆ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಇದರಿಂದ ಆಡಳಿತ ಪಕ್ಷದ ಶಾಸಕರು ಬೇಸರಗೊಂಡಿದ್ದಾರೆ. ಈ ಕಡೆ ಅನುದಾನವೂ ಇಲ್ಲ. ಅಭಿವೃದ್ಧಿ ಸಹ ಆಗುತ್ತಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶಿವಸೇನೆ ಶಾಸಕರು ಸರಕಾರದಿಂದ ಹೊರಬಂದಿದ್ದಾರೆ ಎಂದರು.
ಶಿವಸೇನೆ ನಾಯಕ ಏಕನಾಥ ಶಿಂಧೆ ಅವರು ಕೆಳಮಟ್ಟದಲ್ಲಿ ಬೆಳೆದು ಬಂದ ನಾಯಕ. ಅದೇ ಸಂಜಯ ರಾವುತ್ ಹಿಂಬಾಗಿಲಿನಿಂದ ಬಂದು ಅಧಿಕಾರ ಅನುಭವಿಸುತ್ತಿರುವ ನಾಯಕ. ಏಕನಾಥ ಶಿಂಧೆ ಅವರಿಗೆ ಕಾರ್ಯಕರ್ತರ ಬೆಂಬಲವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ