ಬೆಳಗಾವಿಗೆ ಬಂದವ್ರು ಇಂಡೋನೇಷ್ಯಾದವ್ರು
Team Udayavani, Apr 2, 2020, 3:38 PM IST
ಬೆಳಗಾವಿ: ದೆಹಲಿಯ ನಿಜಾಮುದ್ದಿನ್ ಜಮಾತ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ, ಬೆಳಗಾವಿಗೆ ಬಂದು, ಸದ್ಯ ಹೋಮ್ ಕ್ವಾರಂಟೈನ್ ನಲ್ಲಿರುವ ಹತ್ತೂ ಜನ ಇಂಡೋನೇಷಿಯಾ ಮೂಲದವರಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ಬಿ.ಎನ್. ತುಕ್ಕಾರ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಮರ್ಕಜ್ನಲ್ಲಿ ಪಾಲ್ಗೊಂಡು ಬೆಳಗಾವಿಗೆ ಬಂದಿರುವ ಇಂಡೋನೇಷಿಯಾ ಮೂಲದ ಈ 10 ಜನರ ಹೋಮ್ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಎಲ್ಲರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಇವರಲ್ಲಿ ಕೋವಿಡ್ -19ರ ಲಕ್ಷಣಗಳು ಕಂಡು ಬಂದಿಲ್ಲ ಎಂದು ವಿವರಿಸಿದ್ದಾರೆ.
ಇಂಡೋನೇಷಿಯಾ ಮೂಲದ ಈ 10 ಜನರು ಧರ್ಮ ಪ್ರಚಾರಕ್ಕಾಗಿ ಬೆಳಗಾವಿಗೆ ಆಗಮಿಸಿದ್ದಾರೆ. ಎಲ್ಲರ ಗಂಟಲು ದ್ರವ ಮಾದರಿಯನ್ನು ತಪಾಸಣೆಗಾಗಿ ಕಳುಹಿಸಲಾಗಿದೆ. ಸದ್ಯ ಈ ಗುಂಪಿನಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ. ಎಲ್ಲರೂ ನಗರದ ಮಸೀದಿಯೊಂದರಲ್ಲಿ ವಾಸವಾಗಿದ್ದಾರೆ. ನಿತ್ಯ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟಿದ್ದಾರೆ. ಸದ್ಯದ ಮಟ್ಟಿಗೆ ಅಂತೂ ಯಾವುದೇ ಕೋವಿಡ್-19ರ ಲಕ್ಷಣಗಳಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಬೆಂಗಳೂರಿನ ಧಾರ್ಮಿಕ ಮುಖಂಡರ ಸೂಚನೆಗೆ ಮೇರೆಗೆ ಧರ್ಮ ಪ್ರಚಾರಕ್ಕಾಗಿ ಈ ಎಲ್ಲರೂ ಬೆಳಗಾವಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಆದೇಶ ನೀಡಿದಾಗಿನಿಂದ ಬೆಳಗಾವಿಯಲ್ಲಿಯೇ ವಾಸವಾಗಿದ್ದಾರೆ. ಇವರ ಸಂಪರ್ಕದಲ್ಲಿ ಯಾರು ಬಂದಿದ್ದು, ಯಾವಾಗ ಬಂದಿದ್ದರು ಎಂಬುದರ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ