ಪ್ರಧಾನಿ ಪ್ರಭಾವವೇ ಕಮಲ ಪಡೆಗೆ ಆಸರೆ


Team Udayavani, May 13, 2019, 2:05 PM IST

Udayavani Kannada Newspaper

ಬೆಳಗಾವಿ: ಮುಳ್ಳೂರು ಘಾಟ್ ಪ್ರದೇಶದಲ್ಲಿ ಸ್ಥಾಪನೆಗೊಂಡಿರುವ ಬೃಹತ್‌ ಶಿವನ ಪ್ರತಿಮೆಯಿಂದ ಎಲ್ಲರ ಗಮನಸೆಳೆದಿರುವ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಈಗ ಲೋಕಸಭೆ ಚುನಾವಣೆಯ ಮುನ್ನಡೆ ಲೆಕ್ಕಾಚಾರ ಸುದ್ದಿಮಾಡುತ್ತಿದೆ. ಬೃಹದಾಕಾರದಲ್ಲಿ ನೆಲೆ ನಿಂತಿರುವ ಈಶ್ವರನ ಆಶೀರ್ವಾದ ಯಾರ ಮೇಲೆ ಎಂಬ ಚರ್ಚೆ ನಡೆದಿದೆ.

ರಾಮದುರ್ಗ ವಿಧಾನಸಭಾ ಕ್ಷೇತ್ರ ಈಗ ಬಿಜೆಪಿ ಭದ್ರಕೋಟೆ. ಕಳೆದ ಬಾರಿ ಕಾಂಗ್ರೆಸ್‌ ಪರವಾಗಿದ್ದ ಈ ಕ್ಷೇತ್ರ ಈಗ ಬಿಜೆಪಿ ಪಾಲಾಗಿದೆ. ಅದೇ ಲೆಕ್ಕಾಚಾರದ ಮೇಲೆ ತಮಗೆ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಿಗುವುದು ಖಚಿತ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ.

ಕ್ಷೇತ್ರದ ಮತದಾರರಿಂದ ಒಂದೇ ತೆರನಾದ ಅಭಿಪ್ರಾಯ ಬಂದಿಲ್ಲ. ಬಿಜೆಪಿ ಇಲ್ಲವೇ ಕಾಂಗ್ರೆಸ್‌ಗೆ ಮುನ್ನಡೆ ಎಂದು ಅದರ ಅಭಿಮಾನಿಗಳು ಹೇಳಿದರೆ ಇನ್ನು ಕೆಲವರು ಎರಡೂ ಪಕ್ಷಕ್ಕೆ ಸಮಾನ ಅವಕಾಶ ಎನ್ನುತ್ತಿದ್ದಾರೆ. ಇದೇ ಸಾಧ್ಯಾಸಾಧ್ಯತೆಗಳ ಮಧ್ಯೆ ಮುನ್ನಡೆಯ ಲೆಕ್ಕಾಚಾರ ನಡೆದಿದೆ. ಆದರೆ ಯಾವ ಪಕ್ಷದವರೂ ಬೆಟ್ಟಿಂಗ್‌ ಕಟ್ಟುವ ಗೋಜಿಗೆ ಹೋಗಿಲ್ಲ.

ಬಿಜೆಪಿಗೆ ತಮ್ಮವರೇ ಶಾಸಕರಾಗಿರುವುದು ಸ್ವಲ್ಪ ಅನುಕೂಲವಾಗಿದೆ. ಇದಕ್ಕಿಂತ ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅಲೆಯೇ ದೊಡ್ಡ ಆಸರೆ. ಯುವ ಸಮೂಹ ಸ್ವಯಂ ಪ್ರೇರಣೆಯಿಂದ ಬಿಜೆಪಿ ಪರವಾಗಿ ಬಂದಿದ್ದು ಅನೇಕ ಕಡೆಗಳಲ್ಲಿ ಕಂಡುಬಂದಿದೆ.ಹೀಗಾಗಿ ಕಾರ್ಯಕರ್ತರು ಸಂಸದರ ಕೆಲಸಕ್ಕಿಂತ ಮೋದಿ ನೋಡಿ ಮತಹಾಕಿ ಎಂದು ಪ್ರಚಾರ ಮಾಡಿರುವುದು ಕ್ಷೇತ್ರದಲ್ಲಿ ಎದ್ದುಕಂಡಿತ್ತು. ಈಗ ಅದೇ ವಿಶ್ವಾಸದ ಮೇಲೆ ತಮಗೆ ಮುನ್ನಡೆ ಬರುವದು ಖಚಿತ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ.

ಮಾಜಿ ಶಾಸಕರ ಅಭಿವೃದ್ಧಿ ಕೆಲಸಗಳು ನಮಗೆ ಬಹಳ ಅನುಕೂಲಕರ ವಾತಾವರಣ ಕಲ್ಪಿಸಿವೆ. ಆಗ ಶಾಸಕರು ಮಾಡಿದ ಕುಡಿಯುವ ನೀರಿನ ಕಾಮಗಾರಿಗಳಿಂದ ಇವತ್ತು ರಾಮದುರ್ಗದ ಜನ ನೀರಿಗಾಗಿ ಹಾಹಾಕಾರ ಪಡುತ್ತಿಲ್ಲ. ಇದು ನಮ್ಮ ಅಭ್ಯರ್ಥಿಯ ಗೆಲುವಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ.

ಕಳೆದ ಸಲಕ್ಕಿಂತ ಈ ಬಾರಿ ಹೆಚ್ಚು ಮುನ್ನಡೆ ನಿರೀಕ್ಷೆ ಮಾಡಿದ್ದೇವೆ. ಪಕ್ಷದ ಅಭ್ಯರ್ಥಿಗಿಂತ‌ ಪ್ರಧಾನಿ ನರೇಂದ್ರ ಮೋದಿ ಅಲೆ ಬಹಳ ಪರಿಣಾಮಕಾರಿ ಕೆಲಸ ಮಾಡಿದೆ. ಗ್ರಾಮೀಣ ಪ್ರದೇಶದ ಮತದಾರರು ಸಹ ಪಕ್ಷದ ಬಗ್ಗೆ ಒಳ್ಳೆಯ ವ್ಯಕ್ತಪಡಿಸಿದ್ದು ವಾತಾವರಣ ನಮ್ಮ ಪರವಾಗಿದೆ ಎನಿಸಿತು. ಯುವ ಸಮುದಾಯ ಮೋದಿ ಅಲೆಯಿಂದ ಪ್ರಭಾವಿತರಾಗಿದ್ದಾರೆ. ಈ ಎಲ್ಲ ಕಾರಣಗಳು ಬಿಜೆಪಿಗೆ ಅಧಿಕ ಮುನ್ನಡೆ ಪಡೆಯಲು ಸಹಾಯಕವಾಗಲಿವೆ.

• ರಮೇಶ ದೇಶಪಾಂಡೆ,ಬಿಜೆಪಿ ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ

ಮೇಲ್ನೋಟಕ್ಕೆ ಬಿಜೆಪಿ ಮುಂದಿದೆ. ಈ ಪಕ್ಷಕ್ಕೆ ಲೀಡ್‌ ಬಂದಿದ್ದೇ ಆದರೆ ಅದಕ್ಕೆ ಮೋದಿ ಅಲೆಯೇ ಕಾರಣ. ಯುವ ಮತದಾರರು ಮೋದಿ ಮಾತುಗಳಿಗೆ ಪ್ರಭಾವಿತರಾಗಿದ್ದಾರೆ. ಕಾಂಗ್ರೆಸ್‌ನ ಹಿಂದಿನ ಶಾಸಕರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆದರೆ ಪಕ್ಷದ ಅಭ್ಯರ್ಥಿ ಸಾಧುನವರ ಕ್ಷೇತ್ರಕ್ಕೆ ಅಷ್ಟು ಪರಿಚಿತರೇನಲ್ಲ.

• ಸಹದೇವ ಪವಾರ,ರಾಮದುರ್ಗ

ಒಳ್ಳೆಯ ವಾತಾವರಣ ಕಂಡುಬಂದಿದೆ. ಅದಕ್ಕೆ ತಕ್ಕಂತೆ ನಾವೂ ಸಹ ಪ್ರಯತ್ನ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ ಇರಲಿಲ್ಲ. ಆದರೆ ಬಿಜೆಪಿಯಲ್ಲಿ ಅಭ್ಯರ್ಥಿಯ ಬಗ್ಗೆ ಅಸಮಾಧಾನ ಇದೆ. ಇದು ನಮಗೆ ಅನುಕೂಲ ಮಾಡಿದೆ. ನಮ್ಮ ಅಭ್ಯರ್ಥಿ ಡಾ.ವಿ.ಎಸ್‌.ಸಾಧುನವರ ಕ್ಷೇತ್ರಕ್ಕೆ ಹೊಸಬರೇನಲ್ಲ. ತಮ್ಮ ಶಿಕ್ಷಣ ಸಂಸ್ಥೆ ಹಾಗೂ ಬ್ಯಾಂಕ್‌ಗಳ ಮೂಲಕ ಇಲ್ಲಿನ ಜನರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ.

• ಜಿ.ಬಿ.ರಂಗನಗೌಡರ,ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ

ಮತದಾನದ ಪ್ರಮಾಣ ಹಾಗೂ ವಾತಾವರಣ ನೋಡಿದರೆ ಬಿಜೆಪಿಗೆ ಅನುಕೂಲವಾಗಿರಬಹುದು. ಬಹುತೇಕ ಕಡೆ ಮೋದಿ ಅಲೆ ಬಹಳ ಕೆಲಸ ಮಾಡಿದೆ. ಚುನಾವಣೆಯ ಸಮಯದಲ್ಲಿ ಅವರ ಪ್ರಚಾರ ಸಹ ಬಹಳ ಜೋರಾಗಿತ್ತು. ಮನೆ ಮನೆಗೆ ಹೋಗಿದ್ದರು. ಮೇಲಾಗಿ ಎದುರಾಳಿ ಅಭ್ಯರ್ಥಿ ಸಾಧುನವರ ಕ್ಷೇತ್ರದ ಜನರಿಗೆ ಪರಿಚಿತರೇನಲ್ಲ. ಇದೆಲ್ಲವೂ ಬಿಜೆಪಿಗೆ ಅನುಕೂಲವಾದಂತಿದೆ.

• ಹನುಮಂತ ಜೋಗೆಲ್ಲಪ್ಪನವರ, ರಾಮದುರ್ಗ

ಕೇಶವ ಆದಿ

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.