ರಾಮದುರ್ಗ ಕಿಲ್ಲಾ ಮಹಾದ್ವಾರಕ್ಕೆ ಬೇಕಿದೆ ಕಾಯಕಲ್ಪ

•ಉದುರುತ್ತಿವೆ ಮಹಾದ್ವಾರದ ಕಲ್ಲುಗಳು•ಜನಪ್ರತಿನಿಧಿಗಳು-ಸ್ಥಳೀಯ ಆಡಳಿತಕ್ಕೆ ಸಾರ್ವಜನಿಕರ ಹಿಡಿಶಾಪ

Team Udayavani, Jul 24, 2019, 11:08 AM IST

bg-tdy-1

ರಾಮದುರ್ಗ: ಪಟ್ಟಣದ ಸೌಂದರ್ಯ ಹೆಚ್ಚಿಸಿದ ಪುರಾತನ ಅರಮನೆ ಆವರಣ ತಲುಪುವ ಕಿಲ್ಲಾ ಕೋಟೆ ಮಹಾದ್ವಾರದ ಕಲ್ಲು ಬಂಡೆಗಳು ಒಂದೊಂದಾಗಿ ಉರುಳುತ್ತಿದ್ದು, ಕಲ್ಲುಗಳು ನಾಗರಿಕರ ಮನೆ ಮೇಲೆ ಬೀಳುವ ಆತಂಕದಲ್ಲಿ ಜನತೆ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಾಚೀನ ಕಾಲದ ಕೋಟೆ-ಪಳಿಯುಳಿಕೆಗಳನ್ನು ರಕ್ಷಿಸಿ ಸಾರ್ವಜನಿಕರಿಗೆ ಆಗುವ ತೊಂದರೆ ಪರಿಹರಿಸುವಂತೆ ಸಾರ್ವಜನಿಕರು ಪುರಾತತ್ವ ಹಾಗೂ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ ತಮಗೇನು ಸಂಬಂಧವಿಲ್ಲ ಎಂಬಂತೆ ಉದಾಸೀನತೆ ತೋರುತ್ತಿರುವುದಕ್ಕೆ ಅವನತಿಯತ್ತ ಸಾಗುತ್ತಿದೆ.

ಸಂಸ್ಥಾನಿಕರ ಕಾಲದಲ್ಲಿ ಪಟ್ಟಣದ ಆಡಳಿತ ಕೇಂದ್ರದ ಹೆಬ್ಟಾಗಿಲಾಗಿದ್ದ ಕೋಟೆ ಆವರಣ ತಲುಪಲು ಬೃಹದಾಕಾರದ ಕಲ್ಲಿನ ಮಹಾದ್ವಾರವನ್ನು ಆಗಿನ ಅರಸು ಮನೆತನದ ಆಳ್ವಿಕೆ ಕಾಲದಲ್ಲಿ ನಿರ್ಮಿಸಲಾಗಿತ್ತು. ಈ ಮಹಾದ್ವಾರ ಪುರಾತನ ಅರಮನೆಗೆ ನಾಗರಿಕರನ್ನು ಸ್ವಾಗತಿಸುವ ಆಕರ್ಷಣೀಯ ತಾಣವಾಗಿತ್ತು. ಆದರೆ ಇಂದು ಜೀರ್ಣೋದ್ಧಾರ ಕಾಣದೇ ಅಳಿವಿನಂಚಿನಲ್ಲಿದೆ.

ಉರುಳುತ್ತಿರುವ ಕಲ್ಲುಗಳು: ಮಹಾದ್ವಾರದ ಬೃಹದಾಕಾರದ ಕಲ್ಲುಗಳು ಎತ್ತರದಿಂದ ಉರುಳುತ್ತಿದ್ದು, ಪಕ್ಕದ ನಿವಾಸಿಗಳ ಮನೆ ಆವರಣ, ಮೇಲ್ಛಾವಣಿ ಮೇಲೆ ಬೀಳುತ್ತಿವೆ. ಅವರು ದೈನಂದಿನ ಕೆಲಸದಲ್ಲಿ ತಲ್ಲೀಣರಾದ ಸಂದರ್ಭದಲ್ಲಿ ನಾಗರಿಕರ ಮೇಲೆ ಕಲ್ಲುಗಳು ಉರುಳಿದರೆ ಹೇಗೆ ಎನ್ನುವ ಭೀತಿ ಎದುರಾಗಿದ್ದು, ತಮ್ಮ ನೋವಿನ ಕುರಿತು ನಿವಾಸಿಗಳು ಪುರಸಭೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ಪುರಾತನ ಅರಮನೆಯ ಕೆಲ ಗೋಡೆ, ಕೋಟೆಗಳು ಅಳಿವಿನಂಚಿನಲ್ಲಿದ್ದು, ಸಂಪೂರ್ಣ ಶಿಥಿಲೀಕರಣಗೊಳ್ಳುವ ಹಂತ ತಲುಪಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇತ್ತ ಕಡೆ ಗಮನ ಹರಿಸದಿರುವುದು ಜನತೆಯ ಹಿಡಿಶಾಪಕ್ಕೆ ಕಾರಣವಾಗಿದೆ.

ಪ್ರಮುಖ ಸಂಚಾರಿ ಮಾರ್ಗ: ಕೋಟೆ ಆವರಣದಲ್ಲಿಯೇ ಶಾಲಾ ಕಟ್ಟಡಗಳು, ನ್ಯಾಯಾಲಯ ಸಂಕೀರ್ಣ, ಅರಸರ ಕಾಲದ ಪುರಾತನ ಅರಮನೆ, ಅರಮನೆ ಸುತ್ತಲು ವಾಸಿಸುವ ಸಾವಿರಾರು ನಿವಾಸಿಗಳ ಮನೆಗಳಿವೆ. ಪ್ರತಿದಿನ ಸಾವಿರಾರು ಜನತೆಗೆ ಈ ಮಹಾದ್ವಾರ ಮುಖ್ಯ ಸಂಚಾರಿ ಮಾರ್ಗವಾಗಿದ್ದು, ಅಭಿವೃದ್ಧಿ ಕಾಣದೆ ಸಂಚಾರಿಗಳು ವ್ಯಥೆ ಪಡುವಂತಾಗಿದೆ.

ಹಬ್ಬಗಳ ಆಚರಣೆ ತಾಣ: ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಸೇರಿದಂತೆ ಹಲವು ರಾಷ್ಟ್ರೀಯ ಹಬ್ಬಗಳ ಆಚರಣೆಯ ತಾಲೂಕು ಮಟ್ಟದ ಕಾರ್ಯಕ್ರಮಗಳು ಅರಮನೆ ಆವರಣದಲ್ಲಿಯೇ ನಡೆಯುತ್ತಿವೆ. ಕಾರ್ಯಕ್ರಮದ ಸಂದರ್ಭದಲ್ಲಿ ಎನ್‌ಸಿಸಿ, ಎನ್ನೆಸ್ಸೆಸ್‌, ಪೊಲೀಸ್‌ ಪರೇಡ್‌ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಬುದ್ಧಿಜೀವಿಗಳೂ ಈ ಮಹಾದ್ವಾರದ ಸ್ಥಿತಿಗೆ ರೋಸಿ ಹೋಗುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ, ಸ್ಥಳೀಯರ ಸಮಸ್ಯೆಗೆ ಪರಿಹಾರ ಕೈಗೊಂಡು, ಪುರಾತನ ಕೋಟೆ ಮಹಾದ್ವಾರ ಜೀರ್ಣೋದ್ಧಾರಕ್ಕೆ ಮುಂದಾಗಬೇಕೆನ್ನುವುದು ಸಾರ್ವಜನಿಕರ ಒತ್ತಾಸೆ.

 

•ಈರನಗೌಡ ಪಾಟೀಲ

ಟಾಪ್ ನ್ಯೂಸ್

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.