ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ: ಜಗತಾಪ್
ವಿದ್ಯಾರ್ಥಿ ದೆಸೆಯಲ್ಲಿಯೇ ದೇಶಾಭಿಮಾನದ ಬೀಜವನ್ನು ಬಿತ್ತುವ ಮಹತ್ತರ ಕಾರ್ಯ ಮಾಡುತ್ತಿದೆ
Team Udayavani, Dec 1, 2021, 6:00 PM IST
ಬೆಳಗಾವಿ: ದೇಶವನ್ನು ಭದ್ರಗೊಳಿಸುವ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಯುವಜನಾಂಗದ ಪಾತ್ರ ಬಹುಮೌಲಿಕವಾಗಿದೆ ಎಂದು 26 ಕರ್ನಾಟಕ ಎನ್ಸಿಸಿ ಬಟಾಲಿಯನ್ ಸುಬೇದಾರ ಮೇಜರ್ ಕ್ಯಾಫ್ಟನ್ ಮಹಾದೇವ ಜಗತಾಪ್ ಹೇಳಿದರು.
ನಗರದ ಲಿಂಗರಾಜ ಕಾಲೇಜಿನಲ್ಲಿ ಆಯೋಜಿಸಿದ್ದ ಎನ್ಸಿಸಿ ಡೇ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನಾಂಗವು ದೇಶವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ತರಬೇತಿಯ ಅವಶ್ಯಕತೆ ಇದೆ. ದೇಶಾಭಿಮಾನ ಬಹುಮುಖ್ಯ. ಯೌವನಾವಸ್ಥೆಯಲ್ಲಿ ನಾವು ಉತ್ತಮವಾದ ಆರೋಗ್ಯ ಹಾಗೂ ಜ್ಞಾನಾರ್ಜನೆಯನ್ನು ಮಾಡಿಕೊಳ್ಳಬೇಕು ಎಂದರು.
ಭವಿಷ್ಯತ್ತಿನಲ್ಲಿ ನಮ್ಮ ದೇಶ ಅಭಿವೃದ್ಧಿಶೀಲವಾಗುವುದರಲ್ಲಿ ಯಾವ ಸಂದೇಹವು ಇಲ್ಲ. ಎನ್ಸಿಸಿ ರಾಷ್ಟ್ರದ ಮಹತ್ವದ ಸಾಂಸ್ಥಿಕ ಘಟಕವಾಗಿದ್ದು. ವಿದ್ಯಾರ್ಥಿಗಳಿಗೆ ವಿಶಿಷ್ಟವಾದ ತರಬೇತಿಯನ್ನು ನೀಡುತ್ತಾ ಬಂದಿದೆ. 1948ರಲ್ಲಿ ಪ್ರಾರಂಭಗೊಂಡ ಎನ್ಸಿಸಿ ಶಿಸ್ತು, ಬದ್ಧತೆ, ಸೇವೆ, ರಾಷ್ಟ್ರಾಭಿಮಾನವನ್ನು ಉಂಟುಮಾಡುತ್ತಿದೆ. ದೆ„ಹಿಕ ಹಾಗೂ ಬೌದ್ಧಿಕ ತರಬೇತಿಗಳನ್ನು ನೀಡುವ ಮೂಲಕ ಅವರ ಸರ್ವಾಂಗೀಣ ವಿಕಾಸಕ್ಕೆ ಅಹರ್ನಿಶಿ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಗೌರವ ಅತಿಥಿಗಳಾಗಿ ಆಗಮಿಸಿದ್ದ ಪಿಯು ಕಾಲೇಜಿನ ಪ್ರಾಚಾರ್ಯ ಗಿರಿಜಾ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದ ಹತ್ತು ಹಲವಾರು ಕೌಶಲಗಳನ್ನು ಎನ್ಸಿಸಿ ಘಟಕ ಕಲಿಸಿಕೊಡುತ್ತಿದೆ. ಬದುಕಿನಲ್ಲಿ ಶಿಸ್ತು ಹಾಗೂ ಸಮಯಪಾಲನೆ ಬಹುಮುಖ್ಯ. ಇಲ್ಲಿ ಪಡೆಯುವ ತರಬೇತಿ ಬದುಕನ್ನೇ ಬದಲಾಯಿಸುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಬಿ.ಎಂ.ತೇಜಸ್ವಿ ಮಾತನಾಡಿ, ನಮ್ಮ ರಚನಾತ್ಮಕ ಹಾಗೂ ಕ್ರಿಯಾಶೀಲತೆಗೆ ಎನ್ಸಿಸಿ ಒಂದು ವ್ಯಾಖ್ಯಾನವಾಗಿದೆ. ದೇಶವು ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗುವುದು ಬಹುಮುಖ್ಯ ಸಂಗತಿ. ಅಂತಹ ನಾಯಕತ್ವದ ಗುಣಗಳನ್ನು ಎನ್ಸಿಸಿ ಕಲಿಸಿಕೊಡುತ್ತಿದೆ.
ಎನ್ಸಿಸಿ ಘಟಕ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶಾಭಿಮಾನದ ಬೀಜವನ್ನು ಬಿತ್ತುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಹೇಳಿದರು. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಎನ್ಸಿಸಿ ಅಧಿಕಾರಿ ಕ್ಯಾ|ಡಾ| ಮಹೇಶ ಗುರನಗೌಡರ, ಎನ್ಸಿಸಿ ಘಟಕವು ಹಲವಾರು ನೆಲೆಗಳಲ್ಲಿ ಕೆಡೆಟ್ಗಳಿಗೆ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ. ಸಾಧನೆಗೆ ಸಾವಿರ ಮೆಟ್ಟಿಲುಗಳು ಉಂಟು. ಸವಾಲುಗಳನ್ನು ಸ್ವೀಕರಿಸುವ ಮನೋಭಾವ ನಮಗಿರಬೇಕು ಎಂದರು.
ಇದೇ ಸಂದರ್ಭದಲ್ಲಿ ಇತ್ತೀಚಿಗೆ ರಾಷ್ಟ್ರಮಟ್ಟದಲ್ಲಿ ಡಿಜಿ ಎನ್ಸಿಸಿ ಆಯೋಜಿಸಿದ್ದ ಇಂಟರ್ ಡೈರೆಕ್ಟರೇಟ್ ಶೂಟಿಂಗ್ ಚಾಂಪಿಯನ್ಶಿಪ್ದಲ್ಲಿ ಪಾಲ್ಗೊಂಡು ಅದ್ವಿತೀಯ ಸಾಧನೆಗೈದ ಸಿನಿಯರ್ ಕೆಡೆಟ್ ರೋಷನಿ ಮುಲಿಕ್ ಅವರನ್ನು ಸತ್ಕರಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯರಾದ ಡಾ.ಎಂ.ಆರ್.ಬನಹಟ್ಟಿ, ಪ್ರಣವ್ ಕರಜಗಿ, ಅರುಣ ಜ್ಯೋತಿ, ಸತೀಶ, ಮೋಹನ್, ವಿನೋದ, ಪ್ರೇಮಾ, ಮಣಿಕಂಠ ಉಪಸ್ಥಿತರಿದ್ದರು. ಅದಿತಿ ಜಾಧವ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ