ಸಾಕು ಪ್ರಾಣಿಗಳ ಮೂಕ ರೋದನ

•ಮನ ಕರಗುತ್ತದೆ ಮನೆ ಮಾಲೀಕರ ಬರುವಿಕೆಗೆ ಕಾಯುವ ದೃಶ್ಯ

Team Udayavani, Aug 13, 2019, 11:46 AM IST

bg-tdy-1

ಚಿಕ್ಕೋಡಿ: ಕೃಷ್ಣಾ ನದಿ ತೀರದ ಕಲ್ಲೋಳ ಗ್ರಾಮದ ಮನೆ ಮೇಲೆ ಶ್ವಾನವೊಂದು ಆಹಾರ ಸೇವಿಸದೇ ಮಲಗಿಕೊಂಡಿದೆ.

ಚಿಕ್ಕೋಡಿ: ಪ್ರವಾಹದಿಂದಾಗಿ ಮುಳುಗಡೆಯಾದ ಮನೆ ಬಿಟ್ಟು ಹೋದ ಜನೆ ಸಾಕು ಪ್ರಾಣಿಗಳ ಮೂಕ ರೋದನ ಘನಘೋರವಾಗಿದೆ.

ಕಳೆದ ಹಲವು ದಿನಗಳಿಂದ ನದಿಗಳ ಭಾರಿ ಪ್ರವಾಹಕ್ಕೆ ಜನ ದಂಗು ಬಡಿದು ಹೋಗಿದ್ದಾರೆ. ಅಬ್ಬರಿಸುತ್ತಿರುವ ನದಿಗಳ ಪ್ರವಾಹದಿಂದ ರಾತ್ರೋರಾತ್ರಿ ಜನರು ಮನೆ ಬಿಟ್ಟು ಹೊಗಿದ್ದಾರೆ. ಆದರೆ ಮೂಕ ಪ್ರಾಣಿಗಳು ಮಾತ್ರ ಮನೆ ಮೇಲೆಯೋ ಅಥವಾ ಎತ್ತರ ಪ್ರದೇಶಗಳಲ್ಲಿ ವಾಸ ಮಾಡಿ ಪ್ರಾಣ ಉಳಿಸಿಕೊಂಡು ಮನೆ ಮಾಲೀಕರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಹೃದಯ ಕರಗುವಂತಿದೆ.

ಚಿಕ್ಕೋಡಿ ಉಪವಿಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ, ಕಾಗವಾಡ ಮತ್ತು ಅಥಣಿ ತಾಲೂಕಿನ 73 ಹಳ್ಳಿಗಳು ಕೃಷ್ಣಾ, ವೇದಗಂಗಾ,ದೂಧಗಂಗಾ ಮತ್ತು ಪಂಚಗಂಗಾ ನದಿ ನೀರಿನ ಪ್ರವಾಹದಲ್ಲಿ ನಡುಗಡ್ಡೆಗಳಾಗಿವೆ. ಪ್ರವಾಹಕ್ಕೆ ಸಿಲುಕಿದ ಗ್ರಾಮಗಳ ಜನರು ಈಜಿಯೋ, ದೋಣಿ ಹಾಗೂ ಹೆಲಿಕಾಪ್ಟರ್‌ಗಳ ಮೂಲಕ ದಡ ಸೇರಿದ್ದಾರೆ. ಆದರೆ ಉಪವಿಭಾಗದಲ್ಲಿ ಅದೇಷ್ಟೋ ಮೂಕ ಪ್ರಾಣಿಗಳು ನದಿ ನೀರಿನ ಸೆಳೆತಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡಿವೆ. ಮತ್ತೆ ಕೆಲವು ಎತ್ತರದ ಪ್ರದೇಶಗಳಲ್ಲಿ, ಗಿಡ ಮರಗಳಲ್ಲಿ ಆಶ್ರಯ ಪಡೆದು ಪ್ರಾಣ ಉಳಿವಿಗಾಗಿ ಹರಸಾಹಸ ಪಡುತ್ತಿರುವುದು ಮನ ಕಲಕುತ್ತಿದೆ.

ತಾಲೂಕಿನ ಕಲ್ಲೋಳ ಗ್ರಾಮ ಕೃಷ್ಣಾ ನದಿ ನೀರಿನ ಪ್ರವಾಹಕ್ಕೆ ಸಿಕ್ಕು ಸಂಪೂರ್ಣ ಮುಳುಗಿ ಹೋಗಿದೆ. ಈ ಗ್ರಾಮದ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಆಶ್ರಯ ಪಡೆದಿರುವ ನಾಯಿಗಳ ಸ್ಥಿತಿ ಚಿಂತಾಜನಕವಾಗಿದೆ. ಒಂದು ಕಡೆ ನೆರೆಯಿಂದ ಮನೆ ಮಾಲೀಕರು ಮನೆ ಬಿಟ್ಟು ಹೋಗಿದ್ದಾರೆ. ಇನ್ನೋಂದು ಕಡೆ ಅವರೆಡೆಗೆ ಹೋಗಬೇಕೆಂದರೆ ಸಾಗರದ ಹಾಗೆ ನೀರು ಹರಿಯುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಏನೂ ತೋಚದೇ ಮನೆ ಮಾಳಿಗೆ ಮೇಲೆ ನಾಯಿಯೊಂದು ಮೌನವಾಗಿ ಮಲಗಿರುವುದು ನೋಡಿದರೆ ಎಂತವರ ಹೃದಯ ಕೂಡಾ ಮರುಗದೇ ಇರದು.

ಕಲ್ಲೋಳ ಗ್ರಾಮದ ನಾಲ್ಕೈದು ಯುವಕರು ಈಜಿಕೊಂಡು ಗ್ರಾಮದ ಮನೆ ಮೇಲೆ ಆಶ್ರಯ ಪಡೆದಿರುವ ನಾಯಿಗಳಿಗೆ ಆಹಾರ ಹಾಕಿ ಬಂದಿದ್ದಾರೆ. ಆದರೆ ಮನೆ ಮಾಲಿಕರಿಲ್ಲದ ನಾಯಿಗಳು ಅಹಾರ ಸೇವಿಸುತ್ತಿಲ್ಲ ಎಂದು ಯುವಕ ಮಹೇಶ ಕಮತೆ ಹೇಳುತ್ತಾರೆ. ಇದು ಕಲ್ಲೋಳ ಗ್ರಾಮದ ಪರಿಸ್ಥಿತಿಯಲ್ಲ ಕೃಷ್ಣಾ ನದಿ ಪ್ರವಾಹಕ್ಕೆ ನಲುಗಿದ ಎಲ್ಲ ಗ್ರಾಮಗಳಲ್ಲಿ ಮೂಕ ಪ್ರಾಣಿಗಳ ರೋದನ ಇದೆ ರೀತಿ ಇದೆ. ಪ್ರವಾಹ ಕಡಿಮೆಯಾದಾಗ ಮಾತ್ರ ಶ್ವಾನಗಳು ಆಹಾರ ಸೇವಿಸಬಹುದು ಎನ್ನುತ್ತಾರೆ ಮಹೇಶ.

 

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.