ಮತಗಟ್ಟೆಗೆ ತೆರಳಿದ ಸಿಬ್ಬಂದಿ
Team Udayavani, Apr 23, 2019, 12:52 PM IST
ರಾಮದುರ್ಗ: ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ರಾಮದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 247 ಮತಗಟ್ಟೆಗಳಿಗೆ ಕರ್ತವ್ಯ ನಿರ್ವಹಿಸಲು ಚುನಾವಣಾ ಸಿಬ್ಬಂದಿ ಸೋಮವಾರ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಿಂದ ಮತಗಟ್ಟೆಗೆ ತೆರಳಿದರು.
ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ 1100 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಕ್ಷೇತ್ರದಲ್ಲಿ 247 ಮತಗಟ್ಟೆಗಳಿವೆ. ಪ್ರತಿ ಮತದಾನ ಕೇಂದ್ರಕ್ಕೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಸೇರಿದಂತೆ ಪ್ರತಿ ಮತಗಟ್ಟೆಗೆ 4 ಜನ ಸಿಬ್ಬಂದಿಯಂತೆ ಒಟ್ಟು 988 ಜನರನ್ನು ಮತಗಟ್ಟೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 112 ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಲಾಗಿದೆ. ಒಟ್ಟು 247 ಮತಗಟ್ಟೆಗಳಲ್ಲಿ 15 ಸೂಕ್ಷ್ಮ, 24 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರ್ತಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಿ. ಸುರೇಶರಾವ್ ತಿಳಿಸಿದರು.
ಈ ಚುನಾವಣೆಯಲ್ಲಿ 1,03,029 ಪುರುಷರು, 99,741 ಮಹಿಳಾ ಮತದಾರರು ಮತ್ತು 11 ಜನ ತೃತೀಯ ಲಿಂಗಿಗಳು ಇದ್ದಾರೆ. 57 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಸುವ್ಯವಸ್ಥೆ ಮತ್ತು ದಕ್ಷತೆಯಿಂದ ಕೆಲಸ ನಿರ್ವಹಿಸಲು 17 ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 432 ರಕ್ಷಣಾ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವದು ಎಂದರು.
ಸಿಪಿಐ ಶ್ರೀನಿವಾಸ ಹಾಂಡ್ ಮಾತನಾಡಿ, ಒಬ್ಬರು ಡಿಎಸ್ಪಿ, 3 ಸಿಪಿಐ, 3 ಜನ ಪಿಎಸ್ಐ, 10 ಎಎಸ್ಐ ಎಚ್.ಸಿ, ಕೆಎಸ್ಆರ್ಪಿ, ಗೃಹ ರಕ್ಷಕ ದಳ, ಪೊಲೀಸ್ ಸಿಬ್ಬಂದಿ ಸೇರಿ 432 ಜನರಿಂದ ಶಾಂತಿಯುತ ಚುನಾವಣೆಗೆ ಇಲಾಖೆ ಸಜ್ಜಾಗಿದೆ ಎಂದು ತಿಳಿಸಿದರು. ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಮಕೇರಿ ಮತಗಟ್ಟೆ ಸಂಖ್ಯೆ 10ನ್ನು ಪಿಂಕ್ ಮತಗಟ್ಟೆಯನ್ನಾಗಿ ಸ್ಥಾಪಿಸಲಾಗಿದೆ. ಈ ಮತಗಟ್ಟೆಯಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುವರು ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ