ಶ್ರೀಮಂತ ಪಾಟೀಲ ಹೈಜಾಕ್‌ ಹಿಂದೆ ಕಾಣದ ಕೈ?


Team Udayavani, Jul 19, 2019, 5:37 AM IST

zzz

ಬೆಳಗಾವಿ: ‘ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡುವುದಿಲ್ಲ. ಸಮ್ಮಿಶ್ರ ಸರಕಾರದ ಭಾಗವಾಗಿಯೇ ಇರುತ್ತೇನೆ’ ಎಂದು ಹೇಳುತ್ತಲೇ ಬಂದಿದ್ದ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಅವರು ಏಕಾಏಕಿ ವಿಧಾನಸಭೆ ಕಲಾಪದಿಂದ ದೂರ ಉಳಿದು ಮುಂಬೈ ಸೇರಿಕೊಂಡಿರುವುದು ನಾನಾ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ.

ಆರೋಗ್ಯದ ಕಾರಣ ಹೇಳಿ ಮುಂಬೈಗೆ ಹೋಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಅವರ ಈ ನಿಗೂಢ ಮುಂಬೈ ಪ್ರಯಾಣದ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಇದರ ಹಿಂದೆ ಬಿಜೆಪಿಗಿಂತ ಕಾಂಗ್ರೆಸ್‌ನ ಕಾಣದ ಪ್ರಭಾವಿ ಕೈಗಳು ಬಹಳ ಕೆಲಸ ಮಾಡಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್‌ನ ಒಂದು ಗುಂಪು ಬಿಜೆಪಿ ಮೂಲಕ ಶ್ರೀಮಂತ ಪಾಟೀಲರನ್ನು ಹೈಜಾಕ್‌ ಮಾಡಿದೆ. ಕೃಷ್ಣಾ ನದಿ ನೀರಿನ ಬವಣೆ ಸಮ್ಮಿಶ್ರ ಸರಕಾರಕ್ಕೆ ಮುಳುವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮುಂಬೈನಲ್ಲಿ ಕುಳಿತಿರುವ ರಮೇಶ ಜಾರಕಿಹೊಳಿ ಕಾಂಗ್ರೆಸ್‌ನ ಹಿರಿಯ ನಾಯಕರ ಸಲಹೆಯಂತೆಯೇ ಈ ವ್ಯವಸ್ಥಿತ ಆಪರೇಶನ್‌ ಮಾಡಿದ್ದಾರೆ. ಶ್ರೀಮಂತ ಪಾಟೀಲ ವಿಶ್ವಾಸಮತ ಯಾಚನೆ ಕಲಾಪದಿಂದ ದೂರ ಉಳಿಯುವುದಕ್ಕೆ ಬೇರೆ ಯಾವುದೇ ಪ್ರಬಲ ಕಾರಣಗಳಿಲ್ಲ. ಆದರೆ ಇದರ ಮೂಲಕ ಡಿ.ಕೆ.ಶಿವಕುಮಾರ ಅವರಿಗೆ ಹೊಡೆತ ನೀಡುವುದು ಇದರ ಹಿಂದಿನ ಏಕೈಕ ಉದ್ದೇಶ ಎಂಬುದು ಕಾಂಗ್ರೆಸ್‌ ಮೂಲಗಳ ಹೇಳಿಕೆ.

ಡಿಕೆಶಿ ಮೇಲೆ ಸಿಟ್ಟು : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಡಿ.ಕೆ.ಶಿವಕುಮಾರ್‌ ಮೇಲಿರುವ ಅಗಾಧ ಸಿಟ್ಟಿಗೆ ಈಗ ಕಾಗವಾಡ ಶಾಸಕ ಕೂಡ ಆಹಾರವಾಗಿದ್ದಾರೆ. ಶಿವಕುಮಾರ್‌ ಶಕ್ತಿಯನ್ನು ದುರ್ಬಲ ಮಾಡಬೇಕು ಎಂಬ ಕಾರಣದಿಂದಲೇ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಸಹೋದರರು ಈ ಹೊಸ ಅನಿರೀಕ್ಷಿತ ಆಟ ಆಡಿದ್ದಾರೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲೇ ಕೇಳಿಬರಲಾಂಭಿಸಿದೆ.

ಕಾಗವಾಡ ಕ್ಷೇತ್ರದ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ ಅವರ ಗೆಲುವಿನ ಹಿಂದೆ ರಮೇಶ ಜಾರಕಿಹೊಳಿ ಸಹಾಯ ಇದೆ ಎಂಬುದು ಗೊತ್ತಿರುವ ಸಂಗತಿ. ಇದೇ ಕಾರಣದಿಂದ ಶ್ರೀಮಂತ ಪಾಟೀಲ ಯಾವತ್ತೂ ಜಾರಕಿಹೊಳಿ ಸಹೋದರರನ್ನು ಬಿಟ್ಟುಕೊಡುತ್ತಿರಲಿಲ್ಲ. ಇದೇ ವಿಶ್ವಾಸದಿಂದಲೇ ಜಾರಕಿಹೊಳಿ ಸಹೋದರರು ಈಗ ಶ್ರೀಮಂತ ಪಾಟೀಲರನ್ನು ಶಿವಕುಮಾರ ಗುಂಪಿನಿಂದ ತಮ್ಮ ಸುಪರ್ದಿಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ತೀರದ ಅಥಣಿ ಹಾಗೂ ಕಾಗವಾಡ ತಾಲೂಕುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಹಳ ಗಂಭೀರವಾಗಿತ್ತು. ಶ್ರೀಮಂತ ಪಾಟೀಲ ಹಾಗೂ ಅಥಣಿ ಶಾಸಕ ಮಹೇಶ ಕುಮಟಳ್ಳಿ ಸಾಕಷ್ಟು ಸಲ ಸರಕಾರ ಹಾಗೂ ಜಲಸಂಪನ್ಮೂಲ ಸಚಿವ ಶಿವಕುಮಾರ್‌ ಅವರಿಗೆ ಮನವಿ ಮಾಡಿ ಮಹಾರಾಷ್ಟ್ರದ ಜೊತೆ ಒಪ್ಪಂದ ಮಾಡಿಕೊಳ್ಳುವಂತೆ ಕೋರಿದ್ದರು. ಆದರೆ ಅವರ ಒತ್ತಾಯಕ್ಕೆ ತಕ್ಕಂತೆ ಸರಕಾರದಿಂದ ಗಂಭೀರ ಪ್ರಯತ್ನಗಳು ಆಗಲಿಲ್ಲ. ಇದೇ ಆಸಮಾಧಾನವನ್ನು ಕಾರಣವಾಗಿಟ್ಟುಕೊಂಡು ಈಗ ಶ್ರೀಮಂತ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಹಂತಕ್ಕೆ ಬಂದಿದ್ದಾರೆ ಎಂಬುದು ಅವರ ಆಪ್ತ ವಲಯದ ಹೇಳಿಕೆ.

ಶ್ರೀಮಂತ ಪಾಟೀಲರಿಗೆ ಅಂತಹ ಅರೋಗ್ಯದ ಸಮಸ್ಯೆ ಇರಲಿಲ್ಲ. ಒಂದು ವೇಳೆ ಅವರಿಗೆ ನಿಜವಾಗಿಯೂ ಹೃದ್ರೋಗದ ಸಮಸ್ಯೆ ಇದ್ದರೆ ಬೆಂಗಳೂರಿನಲ್ಲೇ ದೊಡ್ಡ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಬಹುದಿತ್ತು. ಆದರೆ ಸಮ್ಮಿಶ್ರ ಸರಕಾರದ ಅಳಿವು ಉಳಿವಿನ ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರಿಗೆ ಮಾಹಿತಿ ನೀಡದೆ ಏಕಾಏಕಿ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳಸಿರುವುದು ಅನುಮಾನ ಬರುವಂತೆ ಮಾಡಿದೆ ಎಂಬುದು ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ನಾಯಕರ ಅಭಿಪ್ರಾಯ.

ಶ್ರೀಮಂತ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇ ಆದರೆ ಅದು ದುರ್ದೈವದ ಸಂಗತಿ. ಸುದೀರ್ಘ‌ ವರ್ಷಗಳ ನಂತರ ಕಾಗವಾಡ ಕ್ಷೇತ್ರ ಕಾಂಗ್ರೆಸ್‌ಗೆ ಒಲಿದಿದೆ. ಜನ ಬದಲಾವಣೆ ಬಯಸಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದರು. ಈಗ ರಾಜೀನಾಮೆ ನೀಡಿದ್ದೇ ಆದರೆ ಕ್ಷೇತ್ರದ ಜನರಿಗೆ ಮೋಸ ಮಾಡಿದಂತೆ ಆಗಲಿದೆ.
-ಶಹಜಹಾನ ಡೊಂಗರಗಾವ್‌, ಮಾಜಿ ಶಾಸಕ
-ಕೇಶವ ಆದಿ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.