ಗಾಂಧಿ ಭವನ ಆವರಣದಲ್ಲಿ ಬಯಲು ರಂಗಮಂದಿರ
ಪೀರನವಾಡಿಯಲ್ಲಿ ಗಾಂಧಿ ಭವನ ಉದ್ಘಾಟನೆ ; ಬಯಲು ರಂಗಮಂದಿರ- ಗ್ರಂಥಾಲಯ ಯೋಜನೆ
Team Udayavani, Jun 28, 2022, 2:19 PM IST
ಬೆಳಗಾವಿ: ನಗರದ ಪೀರನವಾಡಿಯಲ್ಲಿ ತಲೆ ಎತ್ತಿರುವ ನೂತನ ಗಾಂಧಿ ಭವನ ಕಟ್ಟಡ ಆವರಣದಲ್ಲಿ ಮುಂದಿನ ಒಂದು ವರ್ಷದಲ್ಲಿ ಈ ನೆಲದ ಕಲೆ, ಸಾಹಿತ್ಯ ಸಂಸ್ಕೃತಿ ಹಾಗೂ ಗಾಂಧೀಜಿ ಅವರ ತತ್ವ ಸಿದ್ಧಾಂತಗಳ ಜೀವಂತಿಕೆಗಾಗಿ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ನಗರದ ಪೀರನವಾಡಿಯಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿರ್ಮಿಸಲಾದ ಭವ್ಯ ಗಾಂಧಿ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಕಾಂಗ್ರೆಸ್ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರ 100 ವರ್ಷಗಳ ಸ್ಮರಣೆಗಾಗಿ ಈ ಗಾಂಧಿ ಭವನದಲ್ಲಿ ಒಂದು ವರ್ಷದ ವರೆಗೆ ಸರ್ಕಾರದಿಂದ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಗಾಂಧಿ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು, ರಾಷ್ಟ್ರಪಿತ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ಗುಣಗಳು ಇವತ್ತಿನ ಯುವ ಸಮುದಾಯಕ್ಕೆ ಪ್ರೇರಕವಾಗಿವೆ. ಗಾಂಧಿ ನೀಡಿದ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ ಎಂದು ಹೇಳಿದರು.
ರಾಮ ರಾಜ್ಯ, ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧೀಜಿ ಅವರ ಆಶಯವನ್ನು ನಮ್ಮ ಸರ್ಕಾರ ನನಸು ಮಾಡುವಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ದೇಶ ಭದ್ರತೆಗಾಗಿ ಅಗ್ನಿಪಥ್ ಯೋಜನೆಯೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
2 ಎಕರೆ ವಿಸ್ತೀರ್ಣದಲ್ಲಿ 3 ಕೋಟಿ ರೂ. ವ್ಯಯಿಸಿ ನಿರ್ಮಿಸಲಾದ ಗಾಂಧಿ ಭವನದ ಆವರಣದಲ್ಲಿ ಸ್ಥಾಪಿಸಲಾದ ಆಕರ್ಷಕ ಧ್ಯಾನಸ್ಥ ಗಾಂಧೀಜಿಯ ಕಂಚಿನ ಪುತ್ಥಳಿಯನ್ನು ಸಚಿವರು, ಶಾಸಕರು ಕಟ್ಟಡ ಉದ್ಘಾಟನೆಗೂ ಮುನ್ನ ಅನಾವರಣಗೊಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರು, ಗಾಂಧಿ ಭವನದಲ್ಲಿ ನಿರಂತರವಾಗಿ ಸಾಂಸ್ಕೃತಿಕ ಚಟುವಟಿಕೆಗಳು ನಡೆಸಲು ಅನುಕೂಲವಾಗುವಂತೆ ಭವನದ ಆವರಣದಲ್ಲಿ ಬಯಲು ರಂಗಮಂದಿರ ಹಾಗೂ ಗ್ರಂಥಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ತಿಳಿಸಿದರು.
ಸುಸಜ್ಜಿತ ಹಾಗೂ ಸುಂದರ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಕುರಡಗಿ, ನಿರ್ಮಿತಿ ಕೇಂದ್ರದ ನಾಗರಾಜ ಪಾಟೀಲ ಅವರನ್ನು ಹಾಗೂ ಗಾಂಧೀಜಿ ಕಂಚಿನ ಪ್ರತಿಮೆ ರೂಪಿಸಿದ ಕೊಲ್ಲಾಪುರದ ಲಲಿತಾ ಡೊಂಗರಸಾನೆ ಅವರನ್ನು ಸಚಿವರು, ಶಾಸಕರು ಸತ್ಕರಿಸಿ ಗೌರವಿಸಿದರು.
ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡ್ರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ವಾರ್ತಾ ಇಲಾಖೆ ಸಿಬ್ಬಂದಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಪೀರನವಾಡಿ ಗ್ರಾಮಸ್ಥರು ಇದ್ದರು. ಸರ್ವಮಂಗಳ ಅರಳೀಕಟ್ಟಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ