ಸೌಕರ್ಯವಿಲ್ಲದೆ ಸೊರಗುತ್ತಿರುವ ಶಾಲೆ

•ಶತಮಾನೋತ್ಸವ ಹೊಸ್ತಿಲಲ್ಲಿರುವ ಹಿರೇಬುದನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Jul 29, 2019, 8:43 AM IST

bg-tdy-1

ಬೈಲಹೊಂಗಲ: ರಾಜ್ಯ ಸರಕಾರ ಶಾಲೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದರೂ ಸಹ ಸರಿಯಾಗಿ ಸದ್ಬಳಕೆಯಾಗುತ್ತಿಲ್ಲ ಎಂಬುದಕ್ಕೆ ಹಿರೇಬೂದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಉದಾಹರಣೆ. ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಶಿಕ್ಷಕರ ನಿರ್ಲಕ್ಷ್ಯದಿಂದ ಶಾಲೆ ಆವರಣ ಸಮಸ್ಯೆಗಳ ತಾಣವಾಗಿದೆ.

ಹಿರೇಬೂದನೂರ ಗ್ರಾಮದಲ್ಲಿರುವ ಸರಕಾರಿ ಶಾಲೆಗೆ ನೀವೆನಾದರೂ ಬಂದರೆ ಮೂಗು ಮುಚ್ಚಿಕೊಳ್ಳಬೇಕು. ಇನ್ನು ಶಾಲಾ ಕಟ್ಟಡ ಆಗಲೋ ಈಗಲೋ ಬೀಳುವ ಸ್ಥಿತಿಯಿದೆ. ನೀರಿಲ್ಲದ ಜಲಕುಂಬ ಇದ್ದೂ ಇಲ್ಲದಂತಾಗಿದೆ. ಶಾಲೆಗೆ ನೀರಿನ ಪೂರೈಕೆ ಇಲ್ಲದಿರುವುದರಿಂದ ಮಕ್ಕಳು ನೀರು ತಂದು ಕುಡಿಯಬೇಕು. ಇಲ್ಲಿಯ ಶೌಚಾಲಯದಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದೆ. ಕೊಠಡಿಯಲ್ಲಿ ಪಾಟೀಕಲ್ಲು ಒಡೆದು ಹೋಗಿವೆ. ಸಮಯಕ್ಕೆ ಸರಿಯಾದ ಬಾರದ ಶಿಕ್ಷಕರು. ಈ ಎಲ್ಲ ಸಮಸ್ಯೆಗಳಿಂದ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಶಿಕ್ಷಕರೇ ಶಾಲೆಗೆ ಚಕ್ಕರ್‌: ಹಿರೇಬೂದನೂರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 463 ವಿದ್ಯಾರ್ಥಿಗಳು ಇದ್ದಾರೆ. 12 ಶಿಕ್ಷಕರಿದ್ದರೂ ಸಹ ದಿನಕ್ಕೆ ನಾಲ್ಕೈದು ಶಿಕ್ಷಕರು ರಜೆ ಇರುತ್ತಾರೆ. ಇದರಿಂದ ವಿದ್ಯಾರ್ಥಿಗಳು ತರಗತಿಗಿಂತ ಶಾಲಾ ಆವರಣದಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ ಎಂಬುದು ಎಸ್‌ಡಿಎಂಸಿ ಅಧ್ಯಕ್ಷ ಫಕೀರಪ್ಪ ತಳವಾರ ಆರೋಪ.

ಅಸ್ವಚ್ಛತೆ ತಾಂಡವ: ಇನ್ನು ಶಾಲಾ ಆವರಣ ಅಸ್ವಚ್ಛತೆಯಿಂದ ಕೂಡಿದ್ದು, ಅಲ್ಲಿಯೇ ಬಿಸಿಯೂಟ ಅಡುಗೆ ಮಾಡುವುದರಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಶೌಚಾಲಯ ಬಳಿ ಕಿಡಿಗೇಡಿಗಳು ಸಾರಾಯಿ ಬಾಟಲಿ, ಕಲ್ಲು, ಮುಳ್ಳು ಹಾಕಿರುವುದರಿಂದ ಅಲ್ಲಿ ಹೋಗಲು ಸಾಧ್ಯವಾಗದ್ದರಿಂದ ವಿದ್ಯಾರ್ಥಿಗಳು ಶೌಚಕ್ಕೆ ಅನಾನುಕೂಲವಾಗಿದೆ.

ಶಾಲೆಯ ಕಾಂಪೌಂಡ್‌ ಸುತ್ತ ಕೊಳಚೆ, ಗಿಡಕಂಟಿ ಬೆಳೆದಿರುವುದರಿಂದ ಇದೇನು ಶಾಲೆಯೋ ಹಾಳು ಕೊಂಪೆಯೋ ಎನ್ನುವಂತಾಗಿದೆ. ಶಾಲೆಯ ಕಾಂಪೌಂಡ್‌ ಬಳಿ ಕಸದ ತೊಟ್ಟಿ ತುಂಬಿ ತುಳುಕುತ್ತಿದ್ದರೂ ವಿಲೇವಾರಿ ಮಾಡದಿರುವುದರಿಂದ ಗಬ್ಬೆದ್ದು ನಾರುತ್ತಿದೆ ಎಂದು ಗ್ರಾಮಸ್ಥರಾದ ವಾಸುದೇವ ಮರಗಾಲ, ಭೀರಪ್ಪ ತಳವಾರ, ರಂಗೇಶ ಗಿರೇನ್ನವರ ದೂರಿದ್ದಾರೆ.

ಈ ಶಾಲೆಯ ಸಮಸ್ಯೆಗಳ ಬಗ್ಗೆ ಬಿಇಒ, ಸಿಆರ್‌ಪಿ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಶಾಲೆ ಸುಧಾರಣೆ ಕಂಡಿಲ್ಲ. ಶತಮಾನೋತ್ಸವ ಆಚರಿಸಿಕೊಳ್ಳುವ ಸಂಭ್ರಮದಲ್ಲಿರುವ ಶಾಲೆಗೆ ಇಂಥ ದುರ್ಗತಿ ಬಂದಿರುವುದು ವಿಪರ್ಯಾಸ. ಇನ್ನಾದರೂ ಮೇಲಧಿಕಾರಿಗಳು, ಜನಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಶಾಲೆ ಬಂದ್‌ ಮಾಡಿ ಪ್ರತಿಭಟಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಹಿರೇಬೂದನೂರ ಹಿರಿಯ ಪ್ರಾಥಮಿಕ ಶಾಲೆಯ ಸಮಸ್ಯೆ ಬಗ್ಗೆ ಗೊತ್ತಾಗಿದೆ. ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸ್ವಚ್ಛತೆ ಬಗ್ಗೆ ಮುಖ್ಯಶಿಕ್ಷಕರು, ಬಿಇಒ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ.• ಮಹಾಂತೇಶ ಕೌಜಲಗಿ,ಶಾಸಕ

ಶಾಲೆಯ ವಾತಾವರಣ ಸಂಪೂರ್ಣ ಹಾಳಾಗಿದೆ. ಕೂಡಲೇ ಶಾಲೆ ಕಟ್ಟಡ ದುರಸ್ತಿಗೆ, ಆವರಣ ಸ್ವಚ್ಛತೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.• ನಿಂಗಪ್ಪ ಕುಂಟಮಾಯನ್ನವರ, ಹಿರೇಬೂದನೂರ ಗ್ರಾಮಸ್ಥ

 

•ಸಿ.ವೈ. ಮೆಣಶಿನಕಾಯಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.