ಮತಾಂತರ ನಿಷೇಧ ಕಾಯ್ದೆಗೆ ಭಯ ಬೇಡ
ಸರ್ಕಾರ ಧನಿಯೆತ್ತುವ ಕೆಲಸ ಮಾಡಬೇಕು. ಕನ್ನಡಿಗರ ರಕ್ಷಣೆ ಸರ್ಕಾರದ ಹೊಣೆಯಾಗಿದೆ
Team Udayavani, Dec 25, 2021, 5:59 PM IST
ಅಥಣಿ: ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿರುವುದು ಬಿಜೆಪಿ ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಅವರು ಶಿವಣಗಿ ಕಲ್ಯಾಣ ಮಂಟಪದಲ್ಲಿ ಅಥಣಿ ಪುರಸಭೆ ಚುನಾವಣೆ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿರುವುದರ ಕಡೆ ಗಮನ ಹರಿಸದೆ ಭಾವನಾತ್ಮಕವಾಗಿರುವ ವಿಷಯಗಳನ್ನು ಇಟ್ಟುಕೊಂಡು ರಾಜಕೀಯ ಮಾಡಲು ಬಿಜೆಪಿ ಹೊರಟಿದೆ. ದೇಶ ಕಟ್ಟುವಂತಹ ಕೆಲಸ ಮಾಡಬೇಕು ಹೊರತು ಒಡೆಯುವ ಕೆಲಸವಲ್ಲ. ಮತಾಂತರ ಕಾಯ್ದೆಗೆ ಯಾರೂ ಹೆದರಬೇಕಿಲ್ಲ ಎಂದರು.
ಅಥಣಿ ಪುರಸಭೆ ಟಿಕೆಟ್ ಹಂಚಿಕೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆ ಆಗುವುದು ಸಹಜ. ಇದು ಎಲ್ಲ ಪಕ್ಷದಲ್ಲಿ ಇರುವಂಥದ್ದು. ಇದಕ್ಕೇನು ಮಾಡಲಾಗದು. ಮರಾಠಿಗರ ವಿರುದ್ಧ ಸರ್ಕಾರ ಧನಿಯೆತ್ತುವ ಕೆಲಸ ಮಾಡಬೇಕು. ಕನ್ನಡಿಗರ ರಕ್ಷಣೆ ಸರ್ಕಾರದ ಹೊಣೆಯಾಗಿದೆ ಎಂದು ಹೇಳಿದರು. ಡಿಸೆಂಬರ 27 ರಂದು ನಡೆಯಲಿರುವ ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು
ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಮಾಡುವಂತೆ ಕರೆ ನೀಡಿದರು.
ಇದೇ ವೇಳೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಮಾತನಾಡಿ, ಕರ್ನಾಟಕ ಸರ್ಕಾರ ಗುತ್ತಿಗೆದಾರರಿಂದ ಶೆ. 40 ಪರ್ಸೆಂಟೇಜ್ ವಸೂಲಿ ಮಾಡುತ್ತಿರುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದೂರಿದರೂ ಸರ್ಕಾರ ಸುಮ್ಮನಿದೆ.
ಕಾಂಗ್ರೆಸ್ ಪಕ್ಷ ಬಡವರ ಪರ ಕಾಳಜಿ ಪೂರ್ವಕವಾದ ಪಕ್ಷವಾಗಿದೆ.ರಾಜ್ಯ ಸರ್ಕಾರ 40 ಪರ್ಸೆಂಟ್ ಸರ್ಕಾರವಾಗಿದೆ. ಬಿಜೆಪಿಗೆ ಶಿಕ್ಷೆ ಕೊಡಬೇಕಾದರೆ ಅಥಣಿ ಪುರಸಭೆ ಕಾಂಗ್ರೆಸ್ ಮಯವಾಗಬೇಕು ಎಂದರು. ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಈ ಬಾರಿ ಅಥಣಿ ಪುರಸಭೆ ಅಧಿ ಕಾರದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಹಿಡಿಯಲಿದೆ ಎಂದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ವೀರಕುಮಾರ ಪಾಟೀಲ, ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ದಿಗ್ವಿಜಯ ದೇಸಾಯಿ, ಅನಿಲ ಸುಣದೋಳಿ, ಅಸ್ಲಂ ನಾಲಬಂದ, ರಮೇಶ ಪಾಟೀಲ, ಬಸವರಾಜ ಬುಟಾಳಿ, ಆಶಾ ಐಹೊಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು