ಸಿಎಂ ಬದಲಾವಣೆ ಪ್ರಶ್ನೆ ಇಲ್ಲ: ಸಚಿವ ಸತೀಶ
Team Udayavani, Jan 29, 2019, 12:30 AM IST
ಬೆಳಗಾವಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ. ಅವರಿಗೆ ಸಮ್ಮಿಶ್ರ ಸರಕಾರ ನಡೆಸಿದ ಅನುಭವ ಇದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲ ಒತ್ತಡಗಳಿಂದ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತೇನೆಂದು ಹೇಳಿರಬಹುದು. ನೋವು ಆದಾಗ ಈ ರೀತಿಯ ಹೇಳಿಕೆಗಳು ಬರುತ್ತವೆ. ಆದರೆ ಅವರಿಗೆ ಸರಕಾರ ನಡೆಸುವ ಸಾಮರ್ಥ್ಯವಿದೆ ಎಂದರು. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರೇ ಇರುತ್ತಾರೆ. ಸರಕಾರ ರಚನೆ ವೇಳೆಯೇ ಇದು ತೀರ್ಮಾನ ಆಗಿದೆ. ಹೀಗಾಗಿ ಯಾರೋ ಒಂದಿಬ್ಬರು ಶಾಸಕರ ಹೇಳಿಕೆಗೆ ಬದಲಾವಣೆ ಮಾಡಲು ಆಗುವುದಿಲ್ಲ ಎಂದರು.
ಸಚಿವ ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಎಂಟಿಬಿ ನಾಗರಾಜ ಸೇರಿ ಕೆಲ ಶಾಸಕರು ಈಗಲೂ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಪ್ರಯತ್ನ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ