ಕಾಂಗ್ರೆಸ್ ನಾಯಕರು ಮಾತಿನ ಚಟ ತೀರಿಸಿಕೊಳ್ಳಲಿ : ಸಚಿವ ಕತ್ತಿ

ಕುಟುಂಬ ರಾಜಕಾರಣಕ್ಕೆ ಸಮರ್ಥನೆ, ಯಡಿಯೂರಪ್ಪ ಹೇಳಿದ್ದರಲ್ಲಿ ಯಾವ ತಪ್ಪಿಲ್ಲ

Team Udayavani, Jul 25, 2022, 1:51 PM IST

umesh katti

ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಈ ಸತ್ಯವನ್ನು ಅರ್ಥ ಮಾಡಿಕೊಳ್ಳದೇ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಸಿದ್ದಾರೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಲೇವಡಿ ಮಾಡಿದರು.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಈಗಲೇ ಕಿತ್ತಾಟ ಆರಂಭಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಸಿಎಂ ಆಗಬೇಕೆಂದು ಇನ್ಯಾರೋ ಹಂಬಲಿಸುತ್ತಿದ್ದಾರೆ. ಅವರು ಹಂಬಲಿಸುತ್ತಲೇ ಇರಲಿ. ಚುನಾವಣೆ ಆಗುವ ವರೆಗೂ ಅವರ ಮಾತಿನ ಚಟ ತೀರಿಸಿಕೊಳ್ಳಲಿ ಎಂದು ಕುಟುಕಿದರು.

ರಾಜ್ಯದಲ್ಲಿ ಬಿಜೆಪಿ ಉತ್ತಮ ಸರ್ಕಾರ ನೀಡಿರುವ ಕಾರಣ ಮರಳಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಮುಂದೆಯೂ ಒಳ್ಳೆ ಸರ್ಕಾರ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದೇವೆ ಎಂದು ಸಚಿವ ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು.

ಕುಟುಂಬ ರಾಜಕಾರಣಕ್ಕೆ ಸಮರ್ಥನೆ

ನಾನೂ ಕೂಡ ಕುಟುಂಬ ರಾಜಕೀಯ ಹಿನ್ನೆಲೆಯಿಂದಲೇ ಬಂದವನು. ಕುಟುಂಬ ರಹಿತ ರಾಜಕಾರಣ ಅಸಾಧ್ಯ. ಹೀಗಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮಗನಿಗೆ ತವರು ಕ್ಷೇತ್ರ ಬಿಟ್ಟು ಕೊಡುವುದಾಗಿ ಘೋಷಿಸಿದ್ದರಲ್ಲಿ ತಪ್ಪೇನಿದೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರಶ್ನಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಚುನಾವಣೆ ಸ್ಪರ್ಧೆಯಿಂದ ರಾಜಕೀಯ ನಿವೃತ್ತಿ ನಿಯಮ ರೂಪಿಸಲಾಗಿದೆ ಅವಕಾಶವಿಲ್ಲ. ಯಡಿಯೂರಪ್ಪ ಅವರಿಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ರಾಜಕೀಯ ನಿವೃತ್ತಿ ಹಂತದಲ್ಲಿ ತಮ್ಮ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರ ಅವರಿಗೆ ಅವಕಾಶ ಕೊಡಿ ಎಂದು ಯಡಿಯೂರಪ್ಪ ಹೇಳಿದ್ದರಲ್ಲಿ ಯಾವ ತಪ್ಪಿಲ್ಲ ಎಂದು ಸಮರ್ಥಿಸಿದರು.

ಯಡಿಯೂರಪ್ಪ ಅವರು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರೂ, ಅವರಲ್ಲಿ ಇನ್ನೂ ಪಕ್ಷಕ್ಕಾಗಿ ದುಡಿಯುವ ತಾಕತ್ತಿದೆ. ಆದರೂ ಪಕ್ಷದ ನಿಯಮಕ್ಕೆ ಬದ್ಧವಾಗಿ ರಾಜಕೀಯ ನಿವೃತ್ತಿ ಘೋಷಿಸಿ, ಮಗ ವಿಜೇಂದ್ರ ಅವರನ್ನು ರಾಜಕೀಯವಾಗಿ ಬೆಳೆಸಲು ಕ್ಷೇತ್ರವನ್ನ ಮಗನಿಗೆ ಬಿಟ್ಟುಕೊಟ್ಟಿದ್ದಾರೆ ಎಂದರು.

ಇನ್ನು ಬಿಜೆಪಿ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂಬ ಚರ್ಚೆ ಸಹಜವೇ. ಆದರೆ ನಾನೂ ಕುಟುಂಬ ರಾಜಕಾರಣದ ಹಿನ್ನೆಲೆಯಿಂದ ಬಂದಿದ್ದೇನೆ. ಹಾಗಾಗಿ ಕುಟುಂಬ ರಾಜಕಾರಣ ಇರುವುದು ಸಹಜ. ಪ್ರಧಾ‌ನಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣ ವಿಷಯದಲ್ಲಿ ಅಪವಾದ ಎನಿಸಿದ್ದಾರೆ ಎಂದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.