ಫಲವತ್ತಾದ ಭೂಮಿ ರಕ್ಷಿಸಲು ಮೊರೆ

To protect the fertile land

Team Udayavani, May 19, 2019, 11:38 AM IST

belegavi-tdy-3..

ಬೆಳಗಾವಿ: ಅಲಾರವಾಡದಿಂದ ಮಚ್ಛೆವರೆಗಿನ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆದು ಫಲವತ್ತಾದ ಭೂಮಿ ರಕ್ಷಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಬೆಳಗಾವಿ: ತಾಲೂಕಿನ ಅಲಾರವಾಡದಿಂದ ಮಚ್ಛೆವರೆಗಿನ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆದು ಫಲವತ್ತಾದ ಭೂಮಿ ರಕ್ಷಿಸಬೇಕು ಎಂದು ಆಗ್ರಹಿಸಿ ಈ ಭಾಗದ ರೈತರು ಹಾಗೂ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಚಕ್ಕಡಿ ಮೂಲಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಆಗಮಿಸಿದ ರೈತರು, ರೈತ ಮಹಿಳೆಯರು ಹಾಗೂ ಮಕ್ಕಳು, ರಸ್ತೆ ನಿರ್ಮಾಣಕ್ಕೆ ಫಲವತ್ತಾದ ಭೂಮಿ ಕಸಿದುಕೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮ ಸರಿಯಲ್ಲ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹಾಗೂ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ರೈತರು ಯಾವುದೇ ಅಭಿವೃದ್ಧಿ ಕಾಮಗಾರಿಗಳ ವಿರೋಧಿಗಳಲ್ಲ. ಆದರೆ ನಮ್ಮ ಜೀವನೋಪಾಯಕ್ಕಾಗಿ ಇರುವ ಫಲವತ್ತಾದ ಭೂಮಿ ಕಸಿದುಕೊಂಡು ಅಭಿವೃದ್ಧಿ ಮಾಡುವುದು ಸರಿಯಲ್ಲ. ನಮ್ಮ ಜೀವನಾಡಿ ಭೂಮಿ ಉಳಿಸಬೇಕು. ಕಾಯ್ದೆ ಕಾನೂನುಗಳ ಅರಿವಿಲ್ಲದ ರೈತರ ಭೂಮಿಯನ್ನು ದುರುಪಯೋಗ ಪಡಿಸಿಕೊಂಡು ಅಮಾನವೀಯ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ಆರೋಪಿಸಿದರು.

ಪೊಲೀಸ್‌ ಇಲಾಖೆಯ ಸರ್ಪಗಾವಲು ಹಾಗೂ ಕೃಷಿ ಮಹಿಳೆಯರ ಮೇಲೆ ಗೂಂಡಾವರ್ತನೆ ತೋರುತ್ತಿರುವ ಅಧಿಕಾರಿಗಳು, ಬಲವಂತವಾಗಿ ಕೃಷಿ ಜಮೀನು ಹಾಳು ಮಾಡಿ ನಮ್ಮ ಹೊಟ್ಟೆಯ ಮೇಲೆ ಹೊಡೆದು ಅಭಿವೃದ್ಧಿ ಮಾಡುವುದರಿಂದ ಸರ್ಕಾರ ಏನು ಸಾಧಿಸಲು ಸಾಧ್ಯ. ಫಲವತ್ತಾದ ಭೂಮಿಯನ್ನು ಅಭಿವೃದ್ಧಿ ಯೋಜನೆಗಳಿಗೆ ಬಳಸುವಂತಿಲ್ಲ. ರೈತರ ಮನವೊಲಿಸದೇ ಪೂರ್ಣ ಹಾಗೂ ಯೋಗ್ಯ ಪರಿಹಾರ ಲೆಕ್ಕಿಸದೇ ರೈತರ ಕೃಷಿ ಜಮೀನು ಕಸಿದುಕೊಂಡರೆ ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ಸ್ವ ಇಚ್ಛೆಯಿಂದ ಮಚ್ಛೆಯಿಂದ ಸಾಂಬ್ರಾವರೆಗಿನ ವಿಶೇಷ ಕೃಷಿ ಕಾಯ್ದಿಟ್ಟ ಭೂಮಿಯನ್ನಾಗಿ ಕಾಯ್ದಿರಿಸಬೇಕಾಗಿತ್ತು. ಭತ್ತದ ಬೆಳೆ ಬೆಳಗಾವಿಯ ತಳಿ ಅಪರೂಪದ್ದಾಗಿದೆ. ಇದನ್ನು ರಕ್ಷಿಸುವ ಬದಲು ಕೃಷಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಕಾಮಗಾರಿ ನಿಲ್ಲಿಸುವಂತೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನವಿ ನೀಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಬಾಸುಮತಿ ತಳಿಯನ್ನು ರಕ್ಷಿಸಬೇಕು. 30 ಅಡಿಗಿಂತ ಹೆಚ್ಚು ಆಳವಿರುವ ಕಪ್ಪು ಮಣ್ಣಿನ ಭೂಮಿಯನ್ನು ಯಾವುದೇ ಕಟ್ಟಡ ಅಥವಾ ರಸ್ತೆಗೆ ಬಳಸಬಾರದು. ಈ ಫಲವತ್ತಾದ ಭೂಮಿ ಕೃಷಿಯಿಂದ ವಿಮುಖವಾದರೆ ಮುಂದಿನ ದಿನಗಳಲ್ಲಿ ಹಾನಿಯೇ ಜಾಸ್ತಿ. ಈ ಭೂಮಿಯಲ್ಲಿ ಯಾವುದೇ ಕೃತಕ ನೀರಾವರಿ ಯೋಜನೆಯ ಅನುಕೂಲವಿಲ್ಲದಿದ್ದರೂ ವರ್ಷದಲ್ಲಿ ಮೂರು ವಿಧದ ಬೆಳೆ ಬೆಳೆಯುವ ಅವಕಾಶವಿದೆ ಎಂದು ಮನವಿಯಲ್ಲಿ ಉಲ್ಲೇಖೀಸಿದ್ದಾರೆ.

ಇಲ್ಲಿ ರಸ್ತೆ ನಿರ್ಮಾಣ ಮಾಡದರೆ ಸಾವಿರಾರು ಮರಗಳ ಮಾರಣಹೋಮ ಆಗುತ್ತದೆ. ಕಾನೂನುಬಾಹಿರವಾಗಿ ರೈತರ ಮೆಲೆ ಒತ್ತಡ ಹಾಕಿ ಭೂಮಿ ಮುಟ್ಟುಗೋಲು ಹಾಕಲಾಗುತ್ತಿದೆ. ರಾಜಕೀಯ ಮುಖಂಡರ ಹಿತಾಸಕ್ತಿಗೆ ಅನುಗುಣವಾಗಿ ರಸ್ತೆಯ ಮೋಜಣಿ ಹಾಗೂ ಅಳತೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆದಿದೆ. ರೈತರು ಖಾಯಂ ನಿರಾಶ್ರಿತರಾಗುವುದನ್ನು ತಡೆಯುವಂತೆ ಆಗ್ರಹಿಸಿದರು.

ಇದೇ ಜೋಡು ರಸ್ತೆಯನ್ನು ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಧಾಮಣೆ, ಹಟ್ಟಿ, ಯರಮಾಳ, ಯಳ್ಳುರ, ಸುಳಗಾ, ಜಾಡಶಹಾಪುರ ಅಥವಾ ದೇಸೂರ ಮಾರ್ಗವಾಗಿ ಮಾಡಿದರೆ ಬರಡು ಭೂಮಿ ಉಪಯೋಗದ ಜತೆಗೆ ಈ ಹಳ್ಳಿಗಳು ಸುಧಾರಣೆ ಕಾಣುತ್ತವೆ ಎಂದು ರೈತರು ಪರ್ಯಾಯ ಮಾರ್ಗದ ಸಲಹೆ ನೀಡಿದ್ದಾರೆ.

ರೈತರಾದ ರಾಜು ಮರವೆ, ಉಮೇಶ ಬಿರ್ಜೆ, ನೀಲಮ್‌ ಬಿರ್ಜೆ, ಬೆಳಗುಂದಕರ, ತಾನಾಜಿ ಹಲೊಗೇಕರ, ಪಿಂಟು ಕಂಗ್ರಾಳಕರನ ಇದ್ದರು

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.