ವಿದ್ಯುತ್ ಸ್ಪರ್ಶಿಸಿ ಲೈನ್ಮನ್ ಸಾವು-ಆಕ್ರೋಶ
•ಘಟನೆ ಖಂಡಿಸಿ ವಿವಿಧ ಗ್ರಾಮಸ್ಥರ ಪ್ರತಿಭಟನೆ•ಮೃತ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
Team Udayavani, Jul 28, 2019, 11:13 AM IST
ಬೈಲಹೊಂಗಲ: ರೈತನ ಜಮೀನಿನಲ್ಲಿ ವಿದ್ಯುತ್ ಪರಿಕರ ದುರಸ್ತಿಗೊಳಿಸುತ್ತಿದ್ದ ವೇಳೆ ಲೈನ್ಮನ್ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಗುಡದೂರ ಮತ್ತು ಸಂಗೊಳ್ಳಿ ಗ್ರಾಮಗಳ ಮಧ್ಯೆ ಶನಿವಾರ ನಡೆದಿದೆ.
ತಾಲೂಕಿನ ಕೆಂಗಾನೂರ ಗ್ರಾಮದ ಶರೀಫ ಶಬ್ಬೀರ ನದಾಫ್ (25) ಮೃತ ಲೈನ್ಮನ್ ಎಂದು ಗುರುತಿಸಲಾಗಿದೆ. ಈತ ಸಂಗೊಳ್ಳಿ ಗ್ರಾಮದ ಹದ್ದಿನಲ್ಲಿರುವ ರೈತನ ಜಮೀನಲ್ಲಿ ವಿದ್ಯುತ್ ಪರಿಕರ ದುರಸ್ತಿಗೊಳಿಸುತ್ತಿದ್ದರು. ಪರಿಕರದಿಂದ ಏಕಾಏಕಿ ವಿದ್ಯುತ್ ಸರಬರಾಜುಗೊಂಡಿದ್ದರಿಂದ ವಿದ್ಯುತ್ ಕಂಬದ ಪರಿಕರ ಮೇಲೆ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಲ್ಲಮ್ಮನ ಬೆಳವಡಿ ಹೆಸ್ಕಾಂ ಶಾಖಾಧಿಕಾರಿ ಎಲ್.ಎಫ್. ದಾಸರ, ಮೃತಪಟ್ಟ ಸಿಬ್ಬಂದಿ ಶವವನ್ನು ವಿದ್ಯುತ್ ಪರಿಕರದಿಂದ ಬಿಡಿಸಿ ಕೆಳಗಿಳಿಸಿದರು. ಇದನ್ನು ಕಂಡ ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಲೈನ್ಮನ್ ಮೃತಪಟ್ಟಿದ್ದಾನೆಂದು ಆರೋಪಿಸಿ ಶಾಖಾಧಿಕಾರಿ ದಾಸರ ಅವರನ್ನು ಥಳಿಸಿ ವಾಹನ ಜಖಂಗೊಳಿಸಿದರು. ಥಳಿತಕ್ಕೊಳಗಾದ ಶಾಖಾಧಿಕಾರಿ ಘಟನಾ ಸ್ಥಳದಿಂದ ಪರಾರಿಯಾದರು. ಇದರಿಂದ ಆಕ್ರೋಶಗೊಂಡ ಕೆಂಗಾನೂರ, ಗುಡದೂರ, ಸಂಗೊಳ್ಳಿ ಗ್ರಾಮಸ್ಥರು ಇದ್ದಕ್ಕಿದ್ದಂತೆ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಡಿವೈಎಸ್ಪಿ ಜೆ.ಎಂ. ಕರುಣಾಕರಶೆಟ್ಟಿ, ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್ಐ ಎಂ.ಎಸ್. ಹೂಗಾರ ಪ್ರತಿಭಟನಾಕಾರರ ಮನವೊಲಿಸಿದರು. ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಇಷ್ಟಕ್ಕೂ ಜಗ್ಗದ ಗ್ರಾಮಸ್ಥರು ಹೆಸ್ಕಾಂ ಮೇಲಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಲೈನ್ಮನ್ಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಸಂಗೊಳ್ಳಿ ಗ್ರಾಮದ ಯುವ ಮುಖಂಡ ನಾಗರಾಜ ಬಡಿಗೇರ ಮಾತನಾಡಿ, ಮೃತ ಲೈನ್ಮನ್ ಮಲ್ಲಮ್ಮನ ಬೆಳವಡಿ ಗ್ರಾಮದ ಹೆಸ್ಕಾಂ ಶಾಖೆಗೆ ಎರಡು ವರ್ಷಗಳ ಹಿಂದೆಯೇ ಸೇರಿದ್ದರು. ಅಲ್ಲಿಂದ ಸಂಗೊಳ್ಳಿ ಶಾಖೆಗೆ ಬಂದು ಎರಡು ತಿಂಗಳು ಸೇವೆ ಆರಂಭಿಸಿದ್ದರು. ಗ್ರಾಹಕರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಹೆಸ್ಕಾಂನವರ ನಿರ್ಲಕ್ಷ್ಯದಿಂದ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಮೃತಪಟ್ಟಿರುವುದು ನೋವಿನ ಸಂಗತಿಯಾಗಿದೆ ಎಂದರು.
ನಂತರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಮಾದೇಶ ಮಾತನಾಡಿ, ಘಟನೆ ಕುರಿತು ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಸ್ಕಾಂ ನಿಮಗದ ನಿಯಮಾನುಸಾರ ಮೃತ ಲೈನ್ಮನ್ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಆಗ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು. ಎಇಇ ಅಣ್ಣಪ್ಪಾ ಲಮಾಣಿ, ವಿದ್ಯುತ್ ಪರಿವೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು. ಘಟನಾ ಸ್ಥಳದಲ್ಲಿ ನೂರಾರು ಯುವಕರು, ಗ್ರಾಮಸ್ಥರು ಜಮಾಯಿಸಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು