ಸಂಕ್ರಾಂತಿಗೆ ಪ್ರವಾಸಿ ತಾಣಗಳು ಫುಲ್ ರಶ್
Team Udayavani, Jan 16, 2019, 10:22 AM IST
ಬೆಳಗಾವಿ: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗಾಗಿ ನಗರ ಸೇರಿದಂತೆ ಜಿಲ್ಲಾದ್ಯಂತ ಜನರು ಸಂಭ್ರಮಿಸಿದರು. ವಿವಿಧ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಬುತ್ತಿ ಕಟ್ಟಿಕೊಂಡು ಹೋಗಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಿದರು.
ಗಡಿ ಭಾಗ ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ವಿವಿಧ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಉದ್ಯಾನವನಗಳು ಜನರಿಂದ ತುಂಬಿ ತುಳಕುತ್ತಿದ್ದವು. ಎಲ್ಲೆಡೆಯೂ ಸಂಕ್ರಾಂತಿ ಸಂಭ್ರಮವೇ ಕಂಡು ಬಂತು. ಬೆಳಗ್ಗೆಯೇ ಜನರು ಬಗೆ ಬಗೆಯ ಅಡುಗೆ ತಯಾರಿಸಿ ಬುತ್ತಿ ಕಟ್ಟಿಕೊಂಡು ಊರಾಚೆಯ ವಿವಿಧ ಸ್ಥಳಗಳಿಗೆ ಹೋಗಿ ದೇವರ ದರ್ಶನ ಪಡೆದು, ನದಿ ದಂಡೆ ಮೇಲೆ ಪೂಜೆ ಸಲ್ಲಿಸಿದರು.
ನದಿ ದಡಗಳ ಧಾರ್ಮಿಕ ಕ್ಷೇತ್ರಗಳಿಗೆ ಹೋಗಿದ್ದ ಜನರು ನದಿಯಲ್ಲಿಯ ಐದು ಕಲ್ಲುಗಳನ್ನು ತೆಗೆದುಕೊಂಡು ಅದಕ್ಕೆ ಪೂಜೆ ಸಲ್ಲಿಸಿ, ನೈವೇದ್ಯ ತೋರಿಸಿ, ನದಿಗೆ ನೈವೇದ್ಯ ತೋರಿಸಿದರು. ನಂತರ ಕುಟುಂಬ ಸಮೇತರಾಗಿ ಗಿಡ-ಮರಗಳ ಕೆಳಗೆ, ಹೊಲ-ಗದ್ದೆಗಳಲ್ಲಿ ಊಟ ಸವಿದರು. ಎಳ್ಳು ಹಚ್ಚಿದ ಸಜ್ಜೆ ರೊಟ್ಟಿ, ಜೋಳದ ರೊಟ್ಟಿ, ಬದನೆಕಾಯಿ, ಗಜ್ಜರಿ ಪಲ್ಯ, ಅಗಸೆ ಹಿಂಡಿ, ಶೇಂಗಾ ಚಟ್ನಿ, ಹಸಿ ಕಡಲೆ, ಅವರೆ, ಮೊಸರು, ಮಜ್ಜಿಗೆ ಸೇರಿದಂತೆ ವಿವಿಧ ಬಗೆಯ ಭಕ್ಷ್ಯ ಭೋಜನ ಸವಿದರು.
ನದಿ ಹಳ್ಳಗಳಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾದರು. ಸಂಕ್ರಾಂತಿಗೆ ಬೆಳಗಾವಿ ಜಿಲ್ಲೆಯಲ್ಲಿ ಇರುವ ಎಲ್ಲ ಜಲಧಾರೆಗಳು, ನದಿಗಳು, ಜಲಾಶಯಗಳ ಸುತ್ತಲೂ ಜನವೋ ಜನ. ಖಾನಾಪುರ ಮಲಪ್ರಭಾ ನದಿ ದಡದಲ್ಲಿರುವ ಅಸೋಗಾ, ಮಲಪ್ರಭಾ ತೀರ್ಥ ಕ್ಷೇತ್ರದ ಹಬ್ಟಾನಟ್ಟಿ, ಶ್ರೀ ಸೊಗಲ ಸೋಮೇಶ್ವರ, ನವಿಲು ತೀರ್ಥ, ತಾಲೂಕಿನ ಕರಡಿಗುದ್ದಿಯ ಜಂಬು ತೀರ್ಥ, ಸಿದ್ದನಕೊಳ್ಳ, ಎಂ.ಕೆ. ಹುಬ್ಬಳ್ಳಿಯ ಶ್ರೀ ಗಂಗಾಂಬಿಕಾ ದೇವಸ್ಥಾನ, ಉತ್ತರ ಕನ್ನಡ ಜಿಲ್ಲೆಯ ಉಳವಿ ಚನ್ನಬಸವೇಶ್ವರ, ಗೋಕಾಕ ಫಾಲ್ಸ್, ಗೊಡಚಿನಮಲ್ಕಿ, ಕಣಕುಂಬಿ, ಜಾಂಬೋಟಿ, ರಂಗಧೋಳಿ, ಹಿಡಕಲ್ ಡ್ಯಾಂ ಜಲಾಶಯ, ತಿಗಡಿ ಹರಿನಾಲಾ ಡ್ಯಾಮ್, ಭೂತರಾಮನಹಟ್ಟಿಯ ಮುಕ್ತಿ ಮಠದ ರಾಣಿ ಕಿತ್ತೂರು ಚನ್ನಮ್ಮ ಪ್ರಾಣಿ ಸಂಗ್ರಹಾಲಯ, ಬಡೇಕೊಳ್ಳಮಠ, ಬೆಳಗಾವಿ ನಗರದ ಮಿಲಿಟರಿ ಮಹಾದೇವ ದೇವಸ್ಥಾನ, ನಗರದ ವಿವಿಧ ಉದ್ಯಾನಗಳು ಮಂಗಳವಾರ ಜನರಿಂದ ತುಂಬಿ ತುಳಕುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ