ಬೆಳಗಾವಿ ತಲುಪಿದ ರೈಲು
Team Udayavani, May 23, 2020, 5:10 AM IST
ಬೆಳಗಾವಿ: ಲಾಕ್ಡೌನ್ದಿಂದಾಗಿ ಎರಡು ತಿಂಗಳಿಂದ ಪ್ರಯಾಣಿಕರ ರೈಲು ಇಲ್ಲದೇ ಬಿಕೋ ಎನ್ನುತ್ತಿದ್ದ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನಿಂದ 171 ಕಾರ್ಮಿಕರನ್ನು ಹೊತ್ತುಕೊಂಡು ಶುಕ್ರವಾರ ಸಂಜೆ ರೈಲು ಆಗಮಿಸಿತು.
ಲಾಕ್ಡೌನ್ ಸಡಿಲಿಕೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂತರ ಜಿಲ್ಲಾ ರೈಲು ಸೇವೆಗೆ ಒಲವು ತೋರಿದ್ದರಿಂದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ರೈಲ್ವೆ ಸಂಚರಿಸಲು ಆದೇಶಿಸಿದ್ದರು. ಇದರಿಂದಾಗಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದ ರೈಲು ಸಂಜೆ 7 ಗಂಟೆಗೆ ಬೆಳಗಾವಿ ತಲುಪಿತು.
ಬೆಂಗಳೂರು-ಬೆಳಗಾವಿ ಸೂಪರ್ಫಾಸ್ಟ್ ಎಕ್ಸಪ್ರಸ್ ರೈಲು ಬೆಳಗಾವಿಗೆ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ಬರಮಾಡಿಕೊಂಡರು. ರೈಲುಬರುತ್ತಿರುವ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜತೆಗೆ ಕ್ರಿಮಿನಾಶಕ ಔಷಧಿ ಸಿಂಪಡಿಸುವ ಚೇಂಬರ್ ಅಳವಡಿಸಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಮಾಸ್ಕ್ ಗಳನ್ನು ಧರಿಸಿದ್ದರು. ಬಿಜೆಪಿ ಕಾರ್ಯಕರ್ತರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸಿದರು.
ಇದೇ ರೈಲು ಮೇ 23ರಂದು ಬೆಳಗ್ಗೆ 8 ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಈಗಾಗಲೇ 300 ಪ್ರಯಾಣಿಕರು ಬೆಂಗಳೂರಿಗೆ ಹೋಗಲು ಮುಂಗಡ ಬುಕ್ಕಿಂಗ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್