ಜೀರ್ಣೋದ್ಧಾರಕ್ಕೆ ಚೆಕ್ ಹಸ್ತಾಂತರ
Team Udayavani, May 26, 2020, 10:12 AM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಮ್ಮ ಶಾಸಕರ ನಿಧಿಯಿಂದ ಅನುದಾನದ ಚೆಕ್ಗಳನ್ನು ಹಸ್ತಾಂತರಿಸಿದರು.
ಬಿಜಗರಣಿ ಗ್ರಾಮದ ಬಾಹುಕಾಜೀ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶಾಸಕರ ನಿಧಿಯಿಂದ 5 ಲಕ್ಷ ರೂ. ಮೊತ್ತದ ಚೆಕ್ನ್ನು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ನೀಡಿದರು. ಮಾಸ್ತಮರ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 3 ಲಕ್ಷ ರೂ. ಮೊತ್ತದ ಚೆಕ್ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು.
ನಂತರ ಮಾತನಾಡಿದ ಶಾಸಕಿ ಹೆಬ್ಟಾಳಕರ, ಜಾತ್ರೆ, ಪುರಾಣ, ಪ್ರವಚನ ಮೂಲಕ ಸಮಾಜಕ್ಕೆ ಉತ್ತಮ ಸಂಸ್ಕಾರವನ್ನು ಕಲಿಸಿ ಕೊಡುವುದರಲ್ಲಿ ದೇವಸ್ಥಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ದೇವಸ್ಥಾನ ಸಂಸ್ಕೃತಿಯ ಪ್ರತೀಕವಾಗಿದ್ದು, ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.
ಹಳ್ಳಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಪರ ಮನೋಭಾವ ಬೆಳೆಯಬೇಕು. ಚುನಾವಣೆ ವೇಳೆ ರಾಜಕೀಯವಿದ್ದರೂ ಅಭಿವೃದ್ಧಿ ವಿಷಯದಲ್ಲಿ ಅದನ್ನು ಮೀರಿ ಸಹಕರಿಸಬೇಕು. ಎಲ್ಲರ ಸಹಕಾರವಿದ್ದಾಗ ಶಾಸಕನಾಗಿ ನನಗೂ ಹೆಚ್ಚು-ಹೆಚ್ಚು ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಕ್ಷೇತ್ರದಲ್ಲಿ ಅಂತಹ ಬದಲಾವಣೆ ಬರುತ್ತಿದ್ದು, ಎಲ್ಲರೂ ಪಕ್ಷ ಭೇದ ಮರೆತು ನನ್ನೊಂದಿಗೆ ಸಹಕರಿಸುತ್ತಿದ್ದಾರೆ. ಇದು ನನಗೆ ಖುಷಿ ತಂದಿದೆ. ಹೀಗಾಗಿಯೇ ಎರಡು ವರ್ಷದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ತರಲು ಸಾಧ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ