ಬೆಳಗಾವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ;ಜಲಾಘಾತ ಕ್ಯಾಮರಾ ಕಣ್ಣಲ್ಲಿ ಕಂಡಂತೆ
ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆದ ಕೇಂದ್ರ ವಿತ್ತ ಸಚಿವೆ
Team Udayavani, Aug 10, 2019, 11:34 AM IST
ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗಾವಿ ಜಿಲ್ಲೆಗೆ ಭೇಟಿ ಪ್ರವಾಹ ಪೀಡಿತ ಪ್ರದೇಶಗಳ ಹಾನಿ ಪ್ರಮಾಣದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು.
ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಸಂಸದ ಸುರೇಶ್ ಅಂಗಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ವಾಯುಪಡೆ ರಕ್ಷಣಾ ಕಾರ್ಯ: 107 ಮಂದಿ ರಕ್ಷಣೆ
ಮಹಾಪ್ರವಾಹಕ್ಕೆ ತುತ್ತಾಗಿರುವ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರತೀಯ ವಾಯುಪಡೆಯ ಪ್ರಾಕೃತಿಕ ವಿಕೋಪ ನಿರ್ವಹಣೆ ಪಡೆ ಹೆಲಿಕಾಪ್ಟರ್ ಮೂಲಕ 107 ಮಂದಿ ಸಂತ್ರಸ್ತರನ್ನು ರಕ್ಷಿಸಿದೆ. ಅಲ್ಲದೆ ಸಂತ್ರಸ್ತರಿಗೆ 2 ಸಾವಿರ ಆಹಾರ ಪ್ಯಾಕೆಟ್ಗಳು, ನೀರನ್ನು ಗ್ರಾಮಸ್ಥರಿಗೆ ವಿತರಿಸಿದೆ. ವಾಯುಪಡೆ ರಕ್ಷಣಾ ಕಾರ್ಯದ ಫೋಟೋಗಳು ಇಲ್ಲಿವೆ.