Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ
Team Udayavani, May 1, 2024, 9:58 AM IST
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದಲ್ಲಿ ನಾವು ಯಶಸ್ಸು ಕಾಣಬೇಕಾದರೆ ಕರ್ನಾಟಕ ರಾಜ್ಯದಲ್ಲಿರುವ ಮರಾಠಿ ಭಾಷಿಕರು ಒಗ್ಗಟ್ಟಾಬೇಕು ಎಂದು ಮಹಾರಾಷ್ಟ್ರದ ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ಹೇಳಿದರು.
ನಗರದ ಸಂಭಾಜಿ ಮಹಾರಾಜ ಉದ್ಯಾನವನದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವತಿಯಿಂದ ಮಂಗಳವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ಅವರು ಮಾತನಾಡಿದರು.
ಎಲ್ಲರೂ ಸಂಘಟಿತರಾಗಿ ಹೋರಾಟ ನಡೆಸಿದರೆ ಗಡಿ ಹೋರಾಟದಲ್ಲಿ ಸಫಲತೆ ಕಾಣುತ್ತೇವೆ. ಗಡಿ ಹೋರಾಟದಲ್ಲಿ ನಾನು ಪಾಲ್ಗೊಳ್ಳುವ ಮುನ್ನ ಸಮಗ್ರ ಅಧ್ಯಯನ ನಡೆಸುತ್ತೇನೆ. ಗಡಿ ಹೋರಾಟಗಾರರಿಂದ ಮಾಹಿತಿ ಪಡೆದ ಬಳಿಕವೇ ನಾನು ಇದರಲ್ಲಿ ಪಾಲ್ಗೊಳ್ಳುತ್ತೇನೆ. ಹೋರಾಟ ಆರಂಭಿಸಿದರೆ ಇದು ಮುಗಿಯುವವರೆಗೂ ಹಾಗು ಇತ್ಯರ್ಥ ಕಾಣುವವರೆಗೂ ನಾನು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಮರಾಠಾ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ನಾನು ವಿಶ್ರಮಿಸುವುದಿಲ್ಲ. ಯಾವುದೇ ಅಡೆತಡೆ ಬಂದರೂ ನಾನು ಹಿಂದೆ ಸರಿಯುವುದಿಲ್ಲ. ಮಹಾರಾಷ್ಟ್ರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ನಮ್ಮ ಪರವಾಗಿರಲಿಲ್ಲ. ಆದರೂ ಸಮಾಜದವರೆಲ್ಲರೂ ಸೇರಿ ಒಂದಾಗಿ ಬೀದಿಗೆ ಇಳಿದಿದ್ದರಿಂದ ಮೀಸಲಾತಿ ಹೋರಾಟದಲ್ಲಿ ಯಶಸ್ವಿಯಾಗಿದ್ದೇವೆ. ಇಲ್ಲಿಯೂ ನಿಮ್ಮ ಬೇಡಿಕೆಗಳು ಈಡೇರಬೇಕಾದರೆ ಇಲ್ಲಿ ಮರಾಠಿ ಮಾತನಾಡುವವರೂ ಇದೇ ರೀತಿಯ ಒಂದಾಗಬೇಕು ಎಂದರು.
ಅಭ್ಯರ್ಥಿ ಮಹಾದೇವ ಪಾಟೀಲ, ಮುಖಂಡರಾದ ರಮಾಕಾಂತ್ ಕೊಂಡೂಸ್ಕರ, ಮನೋಹರ ಕಿಣೇಕರ, ಮಾಲೋಜಿರಾವ್ ಅಷ್ಟೇಕರ, ರಂಜೀತ್ ಚವ್ಹಾಣಪಾಟೀಲ, ವಿಕಾಸ ಕಲಘಟಗಿ ಇತರರು ಇದ್ದರು.
ನಾಡವಿರೋಧಿ ಘೋಷಣೆ
ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ ಬೆಳಗಾವಿಗೆ ಬರುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಅಲ್ಲಿ ಸೇರಿದ್ದ ಜನರು, ಬೆಳಗಾವಿ, ನಿಪ್ಪಾಣಿ, ಖಾನಾಪುರ, ಕಾರವಾರ, ಬೀದರ, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೆ ಎಂದು ಪದೇಪದೆ ಘೋಷಣೆಗಳನ್ನು ಮೊಳಗಿಸಿದರು. ಜೈ ಮಹಾರಾಷ್ಟ್ರ ಎಂಬ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ
Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ
Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು