ಅಕ್ಷರ ಜಾತ್ರೆಗೆ ಕರದಂಟು ನಗರಿ ಸಜ್ಜು

|ಇಂದಿನಿಂದ ಗೋಕಾಕದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ |ಗ್ರಂಥಗಳ ಲೋಕಾರ್ಪಣೆ-ಚಿತ್ರಕಲಾ ಪ್ರದರ್ಶನ

Team Udayavani, Jun 28, 2019, 10:25 AM IST

bg-tdy-2..

ಬೆಳಗಾವಿ: ಗೋಕಾಕದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಸಿದ್ಧಗೊಂಡಿರುವ ಮುಖ್ಯ ವೇದಿಕೆ.

ಬೆಳಗಾವಿ: ಇದೇ ಮೊದಲ ಬಾರಿಗೆ ಕರದಂಟು ನಗರಿಯಲ್ಲಿ ಜೂ. 28ರಿಂದ ನಡೆಯಲಿರುವ ಬೆಳಗಾವಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಗೋಕಾಕ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಎಲ್ಲ ಕಡೆ ಬ್ಯಾನರ್‌, ಕಟೌಟ್‌ಗಳು ರಾರಾಜಿಸುತ್ತಿವೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಜೂ. 28, 29ರಂದು ಡಾ| ಗುರುದೇವಿ ಹುಲೆಪ್ಪನವರಮಠ ಅವರ ಸರ್ವಾಧ್ಯಕ್ಷತೆಯಲ್ಲಿ ಗೋಕಾಕನ ಕೆಎಲ್ಇ ಸಂಸ್ಥೆಯ ಎಂ.ಬಿ. ಮುನವಳ್ಳಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ. ಸಮ್ಮೇಳನಕ್ಕೆ ಮುಖ್ಯ ವೇದಿಕೆ ಸಿದ್ಧಗೊಂಡಿದ್ದು, ಸುಮಾರು 2500ಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನ 6 ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಇದೆ. ನಗರದ ಬಸವೇಶ್ವರ ವೃತ್ತದಿಂದ ನಡೆಯಲಿರುವ ಭವ್ಯ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಸ್ಕೌಟ್-ಗೈಡ್ಸ್‌ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಕನ್ನಡ ಹೋರಾಟಗಾರರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಅಕ್ಕಿ ಉದಯವಾಣಿಗೆ ತಿಳಿಸಿದ್ದಾರೆ.

ಜೂ. 28ರಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರಧ್ವಜವನ್ನು ಹಿರಿಯ ಸ್ವಾತಂತ್ರ್ಯ ಯೋಧ ಗುರುಲಿಂಗಪ್ಪ ಗುಣಕಿ, ನಾಡಧ್ವಜವನ್ನು ಎಸ್‌.ಎನ್‌. ಗುದಗನವರ, ಪರಿಷತ್‌ ಧ್ವಜವನ್ನು ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್‌ ನೆರವೇರಿಸುವರು. ಬೆಳಗ್ಗೆ 9 ಗಂಟೆಗೆ ನಾಡದೇವಿ ಭುವನೇಶ್ವರಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಯನ್ನು ಯುವ ಧುರೀಣ ಲಖನ್‌ ಜಾರಕಿಹೊಳಿ ಉದ್ಘಾಟಿಸುವರು.

ಬೆಳಗ್ಗೆ 10 ಗಂಟೆಗೆ ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ಸಮ್ಮೇಳನ ಉದ್ಘಾಟಿಸುವರು. ನಿಡಸೋಸಿ ಶ್ರೀ ದುರದುಂಡೀಶ್ವರಮಠದ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಗೋಕಾಕ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘಾರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ, ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಜ್ಯೋತಿ ಹೊಸೂರು, ಸರ್ವಾಧ್ಯಕ್ಷೆ ಡಾ.ಗುರುದೇವಿ ಹುಲೆಪ್ಪನವರಮಠ ಉಪಸ್ಥಿತರಿರುವರು. ಡಾ| ಗುರುರಾಜ ಕರಜಗಿ ಉಪನ್ಯಾಸ ನೀಡುವರು.

ಗ್ರಂಥಗಳ ಲೋಕಾರ್ಪಣೆ, ಪುಸ್ತಕ ಮಳಿಗೆಗಳು, ಚಿತ್ರಕಲಾ ಪ್ರದರ್ಶನ ಉದ್ಘಾಟನೆ ಆಗಲಿದೆ. ಮಧ್ಯಾಹ್ನ 1ರಿಂದ ವಿಶೇಷ ಸಂಗೀತ ಕಾರ್ಯಕ್ರಮ, 1:30ಕ್ಕೆ ಕನ್ನಡ ಭಾಷೆ ಎದುರಿಸುತ್ತಿರುವ ಸವಾಲುಗಳು ಗೋಷ್ಠಿ ನಡೆಯಲಿದೆ. ಬಳಿಕ ವಿವಿಧ ಗೋಷ್ಠಿ, ಸರ್ವಾಧ್ಯಕ್ಷರ ಪರಿಚಯ ಮತ್ತು ಸಂವಾದಗೋಷ್ಠಿ ನಡೆಯಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.