15 ಲಕ್ಷ ರೂ. ಮೊತ್ತದ ವೆಂಟಿಲೇಟರ್ ವಿತರಣೆ
ಬಿಮ್ಸಗೆ ನೀಡಿದ ಧರ್ಮಸ್ಥಳ ಸಂಘ
Team Udayavani, May 31, 2021, 7:17 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ರೋಗಿಗಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಇಲ್ಲಿಯ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು 15 ಲಕ್ಷ ರೂ. ಮೊತ್ತದ ಮೂರು ವೆಂಟಿಲೇಟರ್ ನೀಡಿದರು.
ಧರ್ಮಸ್ಥಳ ಸಂಘದವರು ಒದಗಿಸಿರುವ ಮೂರು ವೆಂಟಿಲೇಟರ್ ಶಾಸಕರಾದ ಅನಿಲ್ ಬೆನಕೆ ಹಾಗೂ ಅಭಯ ಪಾಟೀಲ ಹಸ್ತಾಂತರಿಸಿದರು. ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ವಿನಂತಿ ಮೇರೆಗೆ ಧರ್ಮಸ್ಥಳ ಸಂಘದವರು 3 ವೆಂಟಿಲೇಟರ್ ನೀಡಿದ್ದಾರೆ. ಅವುಗಳನ್ನು ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರು ಗೆ ಶುಕ್ರವಾರ ಹಸ್ತಾಂತರಿಸಿದರು.
ಇದೇ ರೀತಿ ರಾಜ್ಯದ ಎಲ್ಲ ಕಡೆಗಳಿಗೂ ವೆಂಟಿಲೇಟರ್ ಗಳನ್ನು ನೀಡುತ್ತಿರುವ ಧರ್ಮಸ್ಥಳದ ಧರ್ಮಾಧಿ ಕಾರಿ ವೀರೇಂದ್ರ ಹೆಗ್ಗಡೆ ಅವರು ಅಭಿನಂದನೆಗೆ ಅರ್ಹರು. ಆವರು ನೀಡುತ್ತಿರುವ ಸಾಮಾಜಿಕ ಸೇವೆ ರಾಜ್ಯದ ಜನತೆಗೆ ಅನುಕೂಲಕರವಾಗಿದೆ. ಇವರ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರ ಮಾತನಾಡಿದರು. ಸುಮಾರು 75 ಲಕ್ಷ ಅಂದಾಜು ವೆಚ್ಚದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್ನಷ್ಟು ಆಮ್ಲಜನಕ ತಯಾರಿಕಾ ಘಟಕಕ್ಕೆ ಶಾಸಕರು ಚಾಲನೆ ನೀಡಿದರು. ಬಿಮ್ಸ್ ನಿರ್ದೇಶಕ ಡಾ| ವಿನಯ್ ದಾಸ್ತಿಕೊಪ್ಪ, ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ಪ್ರದೀಪ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ