ಅಲತಗಾ: ರಸ್ತೆ ದುರಸ್ತಿಗೆ ಗ್ರಾಮಸ್ಥರ ಒತ್ತಾಯ
Team Udayavani, Dec 12, 2019, 2:09 PM IST
ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಪಂ ವ್ಯಾಪ್ತಿಯ ಅಲತಗಾ ಗ್ರಾಮದ ಹೊಲಗಳಿಗೆ ಹೋಗಲು ರಸ್ತೆ ಹಾಗೂ ಬ್ರಿಜ್ ಕಂ ಬಾಂದಾರ ಪುನರ್ ನಿರ್ಮಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಎಪಿಎಂಸಿ ಅಧ್ಯಕ್ಷ ಆನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಅಲತಗಾ ಗ್ರಾಮದ ರೈತರು ಹೊಲಗಳಿಗೆ ಹೋಗಲು ಈ ರಸ್ತೆ ಮುಖ್ಯವಾಗಿದೆ. ಆದರೆ ಇಲ್ಲಿ ಸಂಚರಿಸುವ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದೆ. ಜತೆಗೆ ಬ್ರಿಜ್ ಕಂ ಬಾಂದಾರ ಕೂಡ ಸಂಪೂರ್ಣ ಹಾಳಾಗಿ ಹೋಗಿದೆ. ಕಳೆದ ಸಲ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಕರವಾಗಿದೆ ಎಂದು ದೂರಿದರು.
ಈ ರಸ್ತೆ ಮೂಲಕವೇ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ವಾಹನಗಳಲ್ಲಿ ಮಾರುಕಟ್ಟೆಗೆ ಸ್ಥಳಾಂತರಿಸಬೇಕಾಗುತ್ತದೆ. ರಸ್ತೆ ಸರಿ ಇಲ್ಲದ್ದಕ್ಕೆಇಲ್ಲಿ ವಾಹನಗಳು ಬರುವುದು ಕಷ್ಟಕರವಾಗಿದೆ. ಬಹಳ ದೂರದವರೆಗೆ ವಸ್ತುಗಳನ್ನು ಚೀಲದಲ್ಲಿ ಹಾಕಿ ಹೊತ್ತುಕೊಂಡು ತರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಕೂಡಲೇ ಈ ರಸ್ತೆ ಹಾಗೂ ಬ್ರಿಜ್ ಕಂ ಬಾಂದಾರ ನಿರ್ಮಿಸುವಂತೆ ಆಗ್ರಹಿಸಿದರು.
ಗ್ರಾಪಂ ಸದಸ್ಯ ಚೇತಕ ಕಾಂಬಳೆ ಮಾತನಾಡಿ, ರಸ್ತೆ ದುರಸ್ತಿಗಾಗಿ ಅನೇಕ ಬಾರಿ ಸಂಬಂಧಿಸಿದವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ರೈತರು ಕಷ್ಟ ಅನುಭವಿಸುತ್ತಿದ್ದು, ಇದು ಯಾರ ಕಣ್ಣಿಗೂ ಕಾಣಿಸುತ್ತಿಲ್ಲ. ಹೀಗಾಗಿ ಡಿ. 12ರಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹಾಗೂ ಜಿಪಂ ಸಿಇಒ ರಾಜೇಂದ್ರ ಕೆ.ವಿ. ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಬಸವಂತ ಮಾಯನ್ನಾಚೆ, ಮುಖಂಡರಾದ ಯಲ್ಲೋಜಿ ಪಾಟೀಲ, ಚಂದ್ರಕಾಂತ ದುಡುಮ್, ಶಿವಾಜಿ ರಕ್ಷೆ, ಮಲ್ಲಪ್ಪ ತಳವಾರ, ಮೋಹನ ಪಾಟೀಲ, ರಾಜು ಪಾವಸೆ, ಬಾಳು ಚೌಗುಲೆ, ಪುಂಡಲೀಕ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು