‘ಮಹಾ’ ಪ್ರವಾಹಕ್ಕೆ ದ್ವೀಪಗಳಾದ ಗ್ರಾಮಗಳು!


Team Udayavani, Aug 7, 2019, 10:42 AM IST

bg-tdy-2

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಜನರನ್ನು ಎನ್‌ಡಿಆರ್‌ಎಫ್‌ ತಂಡ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಚಿಕ್ಕೋಡಿ: ಮಳೆರಾಯನ ಅಟ್ಟಹಾಸ ಮುಂದುವರಿದು ರಸ್ತೆಗಳ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಚಿಕ್ಕೋಡಿ ಉಪವಿಭಾಗದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡು ಗ್ರಾಮಗಳು ಅಕ್ಷರಶಃ ನಡುಗಡ್ಡೆಗಳಂತಾಗಿವೆ.

ರಾಜ್ಯದ ಗಡಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಕೆರೆ, ಬಾವಿ ತುಂಬಿ ತುಳುಕಿ ಹೆಚ್ಚಿನ ನೀರು ರಸ್ತೆಗೆ ನುಗ್ಗಿದೆ, ವಡ್ರಾಳ ಕೆರೆ ತುಂಬಿದ್ದರಿಂದ ನೀರು ಬೆಳಗಾವಿ ಚಿಕ್ಕೋಡಿ ರಸ್ತೆಗೆ ನುಗ್ಗಿದೆ. ಇದರಿಂದ ಮಂಗಳವಾರ ಬೆಳಗ್ಗೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೃಷ್ಣಾ ನದಿ ನೀರು ಮಾಂಜರಿ ಹತ್ತಿರ ಚಿಕ್ಕೋಡಿ ಮಿರಜ ರಸ್ತೆ ಮೇಲೆ ಬಂದಿರುವುದರಿಂದ ರಸ್ತೆ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ದೂಧಗಂಗಾ ನದಿ ನೀರು ಬೇಡಕಿಹಾಳ ಇಚಲಕರಂಜಿ ರಸ್ತೆ ಮೇಲೆ ಬಂದಿದೆ. ಹೀಗಾಗಿ ಮಹಾರಾಷ್ಟ್ರ ಸಂಪರ್ಕ ಕಡಿತಗೊಂಡಿದೆ. ಒಟ್ಟಾರೆ ಪರಸ್ಥಳಗಳಿಗೆ ಹೋಗಬೇಕಾದ ಜನರ ಕೈಕಾಲು ಕಟ್ಟಿ ಹಾಕಿದಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.

ಕೃಷ್ಣಾ, ದೂಧಗಂಗಾ, ವೇದಗಂಗಾ ಹಾಗೂ ರಾಜ್ಯದ ಗಡಿಗೆ ಹೊಂದಿಕೊಂಡು ಹರಿಯುತ್ತಿರುವ ಪಂಚಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ನದಿ ಪಾತ್ರದಲ್ಲಿರುವ 52 ಗ್ರಾಮಗಳ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇಲ್ಲಿಯವರಿಗೆ ತೋಟದ ಪ್ರದೇಶದ ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು ಮಂಗಳವಾರ ಗ್ರಾಮಗಳಿಗೆ ನುಗ್ಗಿದೆ. ಇದು ನದಿ ಪಾತ್ರದ ಜನರಲ್ಲಿ ನಡುಕ ಹುಟ್ಟಿಸಿದೆ.

ದೂಧಗಂಗಾ, ವೇಧಗಂಗಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟದಲ್ಲಿ ಮಂಗಳವಾರ ಐದು ಅಡಿಯಷ್ಟು ಹೆಚ್ಚಳವಾಗಿದೆ. ನಾಲ್ಕು ನದಿಗಳು ಸುಮಾರು ಎರಡು ಕಿಮೀ ನಷ್ಟು ವಿಸ್ತಾರಗೊಂಡು ಜನರಲ್ಲಿ ಆತಂಕ ಹುಟ್ಟಿಸಿದೆ. ನದಿ ಭಾಗದಲ್ಲಿರುವ ಗ್ರಾಮಗಳಿಗೆ ನೀರು ಹೋಗಿದೆ. ಎಲ್ಲಿ ನೋಡಿದರೂ ಸಮುದ್ರದಂತೆ ಕಂಡು ಬರುತ್ತಿದೆ.

ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲೂಕಿನಲ್ಲಿ ಒಟ್ಟು 40,20 ಕುಟುಂಬಗಳಲ್ಲಿ 15,912 ಜನರನ್ನು ಸುರಕ್ಷಿತ ಸ್ಥಳಗಳಿಗೆ ಹೋಗಿದ್ದಾರೆ. 9,119 ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ.

ಚಿಕ್ಕೋಡಿ ತಾಲೂಕಿನಲ್ಲಿ 10 ಗ್ರಾಮಗಳ 495 ಕುಟುಂಬಗಳ 1,942 ಜನರಿಗೆ ಹಾಗೂ 1,502 ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ. ಕಾಗವಾಡ ತಾಲೂಕಿನ 10 ಗ್ರಾಮಗಳ 1,691 ಕುಟುಂಬಗಳಲ್ಲಿ 7,409 ಜನರನ್ನು ಮತ್ತು 3,272 ಜಾನುವಾರುಗಳು, ಅಥಣಿ ತಾಲೂಕಿನಲ್ಲಿ 14 ಗ್ರಾಮಗಳ 1,036 ಕುಟುಂಬಗಳಲ್ಲಿ 4,271 ಜನರನ್ನು ಹಾಗೂ 2,511 ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ. ರಾಯಬಾಗ ತಾಲೂಕಿನ 10 ಗ್ರಾಮಗಳ 308 ಕುಟುಂಬಗಳ 1,287 ಜನರು ಮತ್ತು 2,511 ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ. ನಿಪ್ಪಾಣಿ ತಾಲೂಕಿನ 12 ಗ್ರಾಮಗಳ 490 ಕುಟುಂಬಗಳ 2,003 ಜನರು ಮತ್ತು 1,061 ಜಾನುವಾರುಗಳನ್ನು ಆಯಾ ತಾಲೂಕಾಡಳಿತ ಸ್ಥಳಾಂತರಿಸಿದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ತಿಳಿಸಿದರು.

37 ಗಂಜಿ ಕೇಂದ್ರ ಸ್ಥಾಪನೆ: ಚಿಕ್ಕೋಡಿ ಉಪವಿಭಾಗದಲ್ಲಿ ಸಂತ್ರಸ್ತರಿಗೆ 37 ಗಂಜಿ ಕೇಂದ್ರಗಳನ್ನು ತೆಗೆದು ಅವರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಚಿಕ್ಕೋಡಿ ತಾಲೂಕಿನಲ್ಲಿ 5, ಕಾಗವಾಡ 8, ಅಥಣಿ 6, ರಾಯಬಾಗ 8, ನಿಪ್ಪಾಣಿ 10 ಕಡೆಗಳಲ್ಲಿ ಗಂಜಿ ಕೇಂದ್ರ ತೆಗೆದು ಸಂತ್ರಸ್ತರಿಗೆ ಅನುಕೂಲ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಕಂದಾಯ ಇಲಾಖೆ ಮಾಹಿತಿ ಪ್ರಕಾರ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜದಿಂದ ಕೃಷ್ಣಾ ನದಿಗೆ 2.52 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳ ಮೂಲಕ 42 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತದೆ. ಒಟ್ಟಾರೆ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 2.94 ಲಕ್ಷ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಹಿಪ್ಪರಗಿ ಜಲಾಶಯದಿಂದ 2.83 ಲಕ್ಷ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದಿಂದ 3.60 ಲಕ್ಷ ಕ್ಯೂಸೆಕ್‌ ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ ಎಂದು ರವೀಂದ್ರ ಕರಲಿಂಗನ್ನವರ ಮಾಹಿತಿ ನೀಡಿದರು.

ಮಹಾರಾಷ್ಟ್ರದ ಮಳೆ ಪ್ರಮಾಣ:

ಕೊಯ್ನಾ-304 ಮಿಮೀ, ವಾರಣಾ-153ಮಿಮೀ, ಕಾಳಮ್ಮವಾಡಿ- 220 ಮಿಮೀ, ನವಜಾ-325 ಮಿ.ಮೀ ಸಾಂಗ್ಲೀ-22 ಮಿಮೀ, ರಾಧಾನಗರಿ-445ಮಿಮೀ, ಮಹಾಬಳೇಶ್ವರ-283ಮಿ.ಮೀ, ಕೊಲ್ಲಾಪೂರ-127 ಮಿಮೀ, ಪಾಟಗಾಂವ-260 ಮಿಮೀ ಮಳೆ ಆಗುತ್ತಿದೆ.
ಚಿಕ್ಕೋಡಿ ತಾಲೂಕಿನ ಮಳೆ ವಿವರ:

ಚಿಕ್ಕೋಡಿ-65.5 ಮಿಮೀ, ಅಂಕಲಿ-48.6 ಮಿಮೀ, ನಾಗರಮುನ್ನೊಳ್ಳಿ-42.4 ಮಿಮೀ, ಸದಲಗಾ-66.9 ಮಿಮೀ, ಗಳತಗಾ-11.2 ಮಿಮೀ, ಜೋಡಟ್ಟಿ-30.8 ಮಿಮೀ, ನಿಪ್ಪಾಣಿ ಪಿಡಬ್ಲುಡಿ-50.2 ಮಿಮೀ, ನಿಪ್ಪಾಣಿ ಎಆರ್‌ಎಸ್‌-70 ಮಿಮೀ, ಸೌಂದಲಗಾ-80.5 ಮಿಮೀ ಮಳೆಯಾಗಿದೆ.
•ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.