ಬೆಳಗಾವಿ ಅಧಿವೇಶನ; ಮಾಹಿತಿ ನೀಡದೆ ಹಲವರು ಗೈರು: ಕಾಗೇರಿ ಮಾಹಿತಿ
Team Udayavani, Dec 30, 2022, 3:23 PM IST
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಒಂಬತ್ತು ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಒಂಬತ್ತು ದಿನಗಳ ಅಧಿವೇಶನದಲ್ಲಿ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದರು.
ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿತಂದಿಲ್ಲ. ಒಟ್ಟು ಪ್ರತಿಶತ 75 ರಷ್ಟು ಹಾಜರಾತಿ ಇತ್ತು. ಇದು ಸರಿಯಾದ ಬೆಳವಣಿಗೆ ಅಲ್ಲ. ದಿನೇಶ ಗುಂಡೂರಾವ್ ಹರೀಶ್ ಪೂಂಜಾ, ಕೃಷ್ಣಪ್ಪ, ಜಮೀರ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸೇರಿದಂತೆ ಒಂಬತ್ತು ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದು ಕಾಗೇರಿ ಹೇಳಿದರು.
ಕಲಾಪದಲ್ಲಿ ಒಟ್ಟು 2125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು ಸದನದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146 ಪ್ರಶ್ನೆಗಳಿಗೆ ಮತ್ತು ಲಿಖಿತ ಮೂಲಕ ಉತ್ತರಿಸುವ 1923 ಪ್ರಶ್ನೆಗಳ ಪೈಕಿ 1614 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆ ಗೆ ಕಟಿಬದ್ಧರಾಗಿರುವದಾಗಿ ಸದನವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದರು.
ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು.
ಈ ಬಾರಿಯ ಅಧಿವೇಶನ ದಾಖಲೆಯ ವೀಕ್ಷಕರ ಸಂಖ್ಯೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ನಡೆದ ಅಧಿವೇಶನವನ್ನು 15000 ಜನರು ವೀಕ್ಷಿಸಿದ್ದರು. ಆದರೆ ಬೆಳಗಾವಿ ಅಧಿವೇಶನವನ್ನು 20 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಇದೊಂದು ದಾಖಲೆಯಾಗಿದೆ ಎಂದು ಕಾಗೇರಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ